AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಸಹಾಯವಾಣಿ 112 ಆರಂಭ: ಕರೆ ಬಂದ 15 ನಿಮಿಷದಲ್ಲಿ ಸ್ಥಳಕ್ಕೆ ಸಿಬ್ಬಂದಿ; ಕಮಿಷನರ್ ಪ್ರತಾಪ್ ರೆಡ್ಡಿ

ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆ ವಿವರಿಸಿದರೆ, ನಗರದ ಯಾವುದೇ ಭಾಗಕ್ಕೆ 15 ನಿಮಿಷದಲ್ಲಿ ಸಿಬ್ಬಂದಿ ಭೇಟಿ ನೀಡಿ, ಬಗೆಹರಿಸುತ್ತಾರೆ ಎಂದು ಕಮಿಷನರ್ ಪ್ರತಾಪ್ ರೆಡ್ಡಿ ಹೇಳಿದರು.

ಪೊಲೀಸ್ ಸಹಾಯವಾಣಿ 112 ಆರಂಭ: ಕರೆ ಬಂದ 15 ನಿಮಿಷದಲ್ಲಿ ಸ್ಥಳಕ್ಕೆ ಸಿಬ್ಬಂದಿ; ಕಮಿಷನರ್ ಪ್ರತಾಪ್ ರೆಡ್ಡಿ
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 03, 2022 | 10:18 AM

Share

ಬೆಂಗಳೂರು: ನಗರದಲ್ಲಿ ಸೋಮವಾರ (ಅ 3) ಪೊಲೀಸ್ ಕಮಿನಷರ್ ಪ್ರತಾಪ್ ರೆಡ್ಡಿ (Pratap Reddy) ‘112 ಪೊಲೀಸ್ ಸಹಾಯವಾಣಿ’ಗೆ ಚಾಲನೆ ನೀಡಿದರು. ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆ ವಿವರಿಸಿದರೆ, ನಗರದ ಯಾವುದೇ ಭಾಗಕ್ಕೆ 15 ನಿಮಿಷದಲ್ಲಿ ಸಿಬ್ಬಂದಿ ಭೇಟಿ ನೀಡಿ, ಸಮಸ್ಯೆ ಬಗೆಹರಿಸುತ್ತಾರೆ. ತುರ್ತು ಸಮಯದಲ್ಲಿ 112ಕ್ಕೆ ಕರೆ ಮಾಡಿ ಎಂದು ಮನವಿ ಮಾಡಿದರು. ಸಹಾಯವಾಣಿಯ ನಂಬರ್ ಜನಪ್ರಿಯವಾಗುವಂತೆ ಮಾಡಲು ಹಲವು ರೀತಿಯ ಪ್ರಚಾರ ಚಟುವಟಿಕೆ ನಡೆಸಲಾಗುವುದು. ಎಲ್ಲ ಬಿಎಂಟಿಸಿ ಬಸ್​ಗಳಲ್ಲಿ ‘112 ಪೊಲೀಸ್ ಸಹಾಯವಾಣಿ’ಯ ಬಗ್ಗೆ ಸ್ಟಿಕರ್​ಗಳನ್ನು ಹಾಕುತ್ತೇವೆ. ಇಂದಿನ ಡಿಜಿ ಪ್ರವೀಣ್ ಸೂದ್ ಅವರು ನಗರ ಕಮಿಷನರ್ ಆಗಿದ್ದಾಗ ಸಹಾಯವಾಣಿ ಕಾರ್ಯಕ್ಷಮತೆ ಹೆಚ್ಚಿಸಲು ಹಲವು ಕ್ರಮ ತೆಗೆದುಕೊಂಡಿದ್ದರು ಎಂದು ನೆನಪಿಸಿಕೊಂಡರು.

ಬೆಂಗಳೂರು ಪೊಲೀಸರ ವಶದಲ್ಲಿರುವ 15 ಪಿಎಫ್​ಐ ಮುಖಂಡರ ಪೊಲೀಸ್ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಲಿದೆ. ಅವರನ್ನು ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಎಸಿಪಿ ಜಗದೀಶ್ ನೇತೃತ್ವದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಹಲವು ಪ್ರಕರಣಗಳ ತನಿಖೆ ನಡೆಯುತ್ತಿದೆ. ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಅವರು ತಿಳಿಸಿದರು. ಬಂಧಿತ ಅರೋಪಿಗಳ ವಿರುದ್ಧ ಸಿಆರ್​ಪಿಸಿ 120ಬಿ (ಒಳಸಂಚು), 121 (ರಾಷ್ಟ್ರದ ವಿರುದ್ದ ಸಮರ), 121ಎ (ರಾಷ್ಟ್ರದ ವಿರುದ್ದ ಸಮರ ಸಾರಲು ಒಳಸಂಚು), 153ಎ (ಕೋಮುಗಳ ನಡುವೆ ದ್ವೇಷ ಉಂಟುಮಾಡುವುದು) ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪೊಲೀಸರ ಬಲೆಗೆ ಬಿದ್ದ ಹೆದ್ದಾರಿ ಕಳ್ಳರು

ಬೆಂಗಳೂರು: ಜಾಲಿ ಟ್ರಿಪ್ ನೆಪದಲ್ಲಿ ಕರ್ನಾಟಕ, ಆಂಧ್ರ ಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್​ನಲ್ಲಿ ಸಾಲುಸಾಲು ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದ ಹೆದ್ದಾರಿ ಕಳ್ಳರು ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚಿಕ್ಕಬಳ್ಳಾಪುರದ ಮೋಹನ್, ಸಂಪತ್ ಹಾಗೂ ಅಶೋಕ್ ಬಂಧಿತರು. ಜೈಲಿನಲ್ಲಿ ಪರಿಚಯವಾಗಿದ್ದ ಕದಿರಿ ಮೂಲದ ಇತರರೊಂದಿಗೆ ಸೇರಿಕೊಂಡು ಕಳ್ಳತನವನ್ನು ಆರಂಭಿಸಿದ್ದರು. ಕೆ.ಆರ್.ಪುರಂನಲ್ಲಿ ನಡೆದಿದ್ದ ಅಂಗಡಿ ಕಳ್ಳತನ ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಟಿಂಗ್ ಶಾಪ್ ಹಾಗೂ ಬಂಡೆ ಒಡೆಯುವ ಕೆಲಸ ಮಾಡುತ್ತಿದ್ದ ಆರೋಪಿಗಳು ಆಗಾಗ ಒಟ್ಟಿಗೆ ಸೇರಿ ಜಾಲಿ ರೈಡ್ ಎಂದು ದೇಶ ಸಂಚಾರ ಆರಂಭಿಸುತ್ತಿದ್ದರು. ರಸ್ತೆ ಬದಿಯ ಅಂಗಡಿಗಳ ಶಟರ್ ಮುರಿದು ಕಳ್ಳತನ ಮಾಡುತಿದ್ದರು. ಕಳ್ಳತನದ ವೇಳೆ ಯಾವುದೇ ಮೊಬೈಲ್ ಬಳಸುತ್ತಿರಲಿಲ್ಲ. ಕಾರಿನಲ್ಲಿ ಬಂದು ಯಾವುದೇ ಸುಳಿವು ಉಳಿಸದೇ ಕಳ್ಳತನ ಮುಗಿಸಿ ಹೋಗುತ್ತಿದ್ದರು.

ಕೆ.ಆರ್.ಪುರಂನಲ್ಲಿ ನಡೆದಿದ್ದ ಅಂಗಡಿಯೊಂದರ ಕಳ್ಳತನದ ತನಿಖೆ ಆರಂಭಿಸಿದಾಗ ಆರೋಪಿಗಳನ್ನು ಪತ್ತೆ ಮಾಡಲಾಯಿತು. ಅರೋಪಿಗಳಿಂದ ಮೊಬೈಲ್​ಗಳು ಹಾಗೂ ಕ್ಯಾಮೆರಾಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳು ಬಳಸಿದ ಕಾರನ್ನು ಪತ್ತೆ ಮಾಡಲಾಗಿದೆ. ಈ ವೇಳೆ ಆರೋಪಿಗಳ ಮತ್ತೊಂದು ಮಾದರಿಯ ಕಳ್ಳತನದ ಕೃತ್ಯವೂ ಬಯಲಾಗಿತ್ತು.

ಎಟಿಎಂಗಳಿಗೆ ಸಭ್ಯರಂತೆ ಪ್ರವೇಶಿಸುತ್ತಿದ್ದ ಆರೋಪಿಗಳು, ಹಣ ವಿತ್​ಡ್ರಾ ಮಾಡಿಕೊಡುವ ನೆಪದಲ್ಲಿ ಕಾರ್ಡ್ ಅಪಹರಿಸುತ್ತಿದ್ದರು. ಬೆಂಗಳೂರಿನ ಜೊತೆಗೆ ಇತರ ನಾಲ್ಕು ರಾಜ್ಯಗಳಲ್ಲಿಯೂ ಇಂಥದ್ದೇ ಅಪರಾಧ ಎಸಗಿದ್ದರು. ಈ ಗುಂಪಿನ ನಾಯಕ ಕೃಷ್ಣಮೂರ್ತಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದರು. ಇದೀಗ ಆತನ ಇತರ ಸಹಚರರು ಬೆಂಗಳೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಸದ್ಯ ಆರೋಪಿಗಳಿಂದ ನಕಲಿ ಡೆಬಿಟ್ ಕಾರ್ಡ್​ಗಳು, ಕೃತ್ಯಕ್ಕೆ ಬಳಸಿದ್ದ ಕಾರ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ. ಹೀಗಾಗಿ ಇತರ ರಾಜ್ಯಗಳ ಪೊಲೀಸರು ಕೆ.ಆರ್.ಪುರಂ ಪೊಲೀಸರ ವಶದಲ್ಲಿರುವವರನ್ನು ವಿಚಾರಣೆಗಾಗಿ ಕೋರುತ್ತಿದ್ದಾರೆ.

Published On - 10:18 am, Mon, 3 October 22

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ