AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಕೆಟ್ಟು ನಿಂತ ಕಾರು: ಚಾಲಕನ ಸಹಾಯಕ್ಕೆ ಹೋಗಿದ್ದ ಕಾನ್ಸ್​ಟೇಬಲ್​ ದುರಂತ ಅಂತ್ಯ

ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್​ಟೇಬಲ್​ ದುರಂತ ಅಂತ್ಯ ಕಂಡಿದ್ದು, ಅದೃಷ್ಟವಶಾತ್​ ಇನ್ಸ್​ಪೆಕ್ಟರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.​

Bengaluru News: ಕೆಟ್ಟು ನಿಂತ ಕಾರು: ಚಾಲಕನ ಸಹಾಯಕ್ಕೆ ಹೋಗಿದ್ದ ಕಾನ್ಸ್​ಟೇಬಲ್​ ದುರಂತ ಅಂತ್ಯ
ಮೃತ ಕಾನ್ಸ್​ಟೇಬಲ್
ನವೀನ್ ಕುಮಾರ್ ಟಿ
| Edited By: |

Updated on: Jul 03, 2023 | 7:46 AM

Share

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (kempegowda international airport) ರಸ್ತೆ ಚಿಕ್ಕಜಾಲ ಬಳಿಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್​ಟೇಬಲ್​ ದುರಂತ ಕಂಡಿದ್ದಾರೆ. ನಿನ್ನೆ(ಜುಲೈ 02) ರಾತ್ರಿ ನೈಟ್ ರೌಂಡ್ಸ್​ನಲ್ಲಿದ್ದ ದೇವನಹಳ್ಳಿ ಇನ್ಸ್​ಪೆಕ್ಟರ್​ ಧರ್ಮೆಗೌಡ ಮತ್ತು ಜೀಪ್ ಡ್ರೈವ್ ಮಾಡುತ್ತಿದ್ದ ಕಾನ್ಸ್​ಟೇಬಲ್ ಸುರೇಶ್, ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆಗೆ ತೆರಳಿದ್ದಾರೆ. ಆ ವೇಳೆ ಇನ್ನೊಂದು ಕಾರು ಬಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆಗೆ ತೆರಳಿದ್ದ ಕಾನ್ಸ್​ಟೇಬಲ್​ ಸುರೇಶ್ ಮೃತಪಟ್ಟಿದ್ದು, ಅದೃಷ್ಟವಶಾತ್ ಇನ್ಸ್​ಪೆಕ್ಟರ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಹಾಯಕ್ಕೆ ಹೋಗಿದ್ದ ಕಾನ್ಸ್​ಟೇಬಲ್​ ದುರಂತ ಅಂತ್ಯ

ಚಿಕ್ಕಜಾಲ ಬಳಿಯ ಹೆದ್ದಾರಿಯಲ್ಲಿ ಇನ್ನೋವಾ ಕಾದು ಕೆಟ್ಟು ನಿಂತಿತ್ತು. ರಾತ್ರಿ ಗಸ್ತಿನಲ್ಲಿದ್ದ ದೇವನಹಳ್ಳಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​ ಹಾಗೂ ಕಾನ್ಸ್​ಟೇಬಲ್​ ಸುರೇಶ್ ಕೆಟ್ಟು ನಿಂತಿದ್ದ ಕಾರಿನ ಬಳಿ ಹೋಗಿ ಏನಾಗಿದೆ? ಎಂದು ವಿಚಾರಿಸಲು ಹೋಗಿದ್ದಾರೆ. ಆದ್ರೆ ಇದೇ ಸಮಯದಲ್ಲಿ ಫೋನ್​ನಲ್ಲಿ ಮಾತನಾಡಲು ಇನ್ಸಪೇಕ್ಟರ್ ಧರ್ಮೆಗೌಡ ಸೈಡಿಗೆ ಹೋಗಿದ್ದರು. ಈ ವೇಳೆ ಅಸೆಂಟ್ ಕಾರು ಬಂದು ಕೆಟ್ಟು ನಿಂತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ.

ಅಸೆಂಟ್ ಕಾರಿನಲ್ಲಿ ಮೂವರು ಯುವಕರು ಹಾಗೂ ಮೂವರು ಯುವತಿಯರಿದ್ದು, ರಾತ್ರಿಯೆಲ್ಲ ಪಾರ್ಟಿ ಮಾಡಿಕೊಂಡು ಮುಂಜಾನೆ ನಂದಿಬೆಟ್ಟಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಕೆಟ್ಟು ನಿಂತಿದ್ದ ಕಾರಿನ ಚಾಲಕನನ್ನು ವಿಚಾರಿಸಲು ಹೋಗಿದ್ದ ಕಾನ್ಸ್​ಟೇಬಲ್​ ಸುರೇಶ್​ ಮೃತಪಟ್ಟಿದ್ದು, ಅಸೆಂಟ್​ ಕಾರಿನ ಚಾಲಕನ ಕೈ ಕಾಲು ಮುರಿದಿವೆ. ಇನ್ನು ಕುಡಿದ ಮತ್ತಿನಲ್ಲಿದ್ದ ಯುವಕ ಯುವತಿಯರಿಗೂ ಸಹ ಗಂಭೀರ ಗಾಯಗಳವಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಇನ್ಸ್​ಪೆಕ್ಟರ್​ ಬಚಾವ್ ಆಗಿದ್ದಾರೆ.

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ

ಬೆಂಗಳೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿ4ರಲ್ಲಿ ನಡೆದಿದೆ. ಘಟನೆಯಲ್ಲಿ ಮಂಡ್ಯ ಮೂಲದ ಪ್ರಸನ್ನ(40)ಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಕೆಎಸ್ಆರ್‌ಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!