AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಕೆಟ್ಟು ನಿಂತ ಕಾರು: ಚಾಲಕನ ಸಹಾಯಕ್ಕೆ ಹೋಗಿದ್ದ ಕಾನ್ಸ್​ಟೇಬಲ್​ ದುರಂತ ಅಂತ್ಯ

ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್​ಟೇಬಲ್​ ದುರಂತ ಅಂತ್ಯ ಕಂಡಿದ್ದು, ಅದೃಷ್ಟವಶಾತ್​ ಇನ್ಸ್​ಪೆಕ್ಟರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.​

Bengaluru News: ಕೆಟ್ಟು ನಿಂತ ಕಾರು: ಚಾಲಕನ ಸಹಾಯಕ್ಕೆ ಹೋಗಿದ್ದ ಕಾನ್ಸ್​ಟೇಬಲ್​ ದುರಂತ ಅಂತ್ಯ
ಮೃತ ಕಾನ್ಸ್​ಟೇಬಲ್
ನವೀನ್ ಕುಮಾರ್ ಟಿ.
| Edited By: |

Updated on: Jul 03, 2023 | 7:46 AM

Share

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (kempegowda international airport) ರಸ್ತೆ ಚಿಕ್ಕಜಾಲ ಬಳಿಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್​ಟೇಬಲ್​ ದುರಂತ ಕಂಡಿದ್ದಾರೆ. ನಿನ್ನೆ(ಜುಲೈ 02) ರಾತ್ರಿ ನೈಟ್ ರೌಂಡ್ಸ್​ನಲ್ಲಿದ್ದ ದೇವನಹಳ್ಳಿ ಇನ್ಸ್​ಪೆಕ್ಟರ್​ ಧರ್ಮೆಗೌಡ ಮತ್ತು ಜೀಪ್ ಡ್ರೈವ್ ಮಾಡುತ್ತಿದ್ದ ಕಾನ್ಸ್​ಟೇಬಲ್ ಸುರೇಶ್, ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆಗೆ ತೆರಳಿದ್ದಾರೆ. ಆ ವೇಳೆ ಇನ್ನೊಂದು ಕಾರು ಬಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆಗೆ ತೆರಳಿದ್ದ ಕಾನ್ಸ್​ಟೇಬಲ್​ ಸುರೇಶ್ ಮೃತಪಟ್ಟಿದ್ದು, ಅದೃಷ್ಟವಶಾತ್ ಇನ್ಸ್​ಪೆಕ್ಟರ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಹಾಯಕ್ಕೆ ಹೋಗಿದ್ದ ಕಾನ್ಸ್​ಟೇಬಲ್​ ದುರಂತ ಅಂತ್ಯ

ಚಿಕ್ಕಜಾಲ ಬಳಿಯ ಹೆದ್ದಾರಿಯಲ್ಲಿ ಇನ್ನೋವಾ ಕಾದು ಕೆಟ್ಟು ನಿಂತಿತ್ತು. ರಾತ್ರಿ ಗಸ್ತಿನಲ್ಲಿದ್ದ ದೇವನಹಳ್ಳಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​ ಹಾಗೂ ಕಾನ್ಸ್​ಟೇಬಲ್​ ಸುರೇಶ್ ಕೆಟ್ಟು ನಿಂತಿದ್ದ ಕಾರಿನ ಬಳಿ ಹೋಗಿ ಏನಾಗಿದೆ? ಎಂದು ವಿಚಾರಿಸಲು ಹೋಗಿದ್ದಾರೆ. ಆದ್ರೆ ಇದೇ ಸಮಯದಲ್ಲಿ ಫೋನ್​ನಲ್ಲಿ ಮಾತನಾಡಲು ಇನ್ಸಪೇಕ್ಟರ್ ಧರ್ಮೆಗೌಡ ಸೈಡಿಗೆ ಹೋಗಿದ್ದರು. ಈ ವೇಳೆ ಅಸೆಂಟ್ ಕಾರು ಬಂದು ಕೆಟ್ಟು ನಿಂತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ.

ಅಸೆಂಟ್ ಕಾರಿನಲ್ಲಿ ಮೂವರು ಯುವಕರು ಹಾಗೂ ಮೂವರು ಯುವತಿಯರಿದ್ದು, ರಾತ್ರಿಯೆಲ್ಲ ಪಾರ್ಟಿ ಮಾಡಿಕೊಂಡು ಮುಂಜಾನೆ ನಂದಿಬೆಟ್ಟಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಕೆಟ್ಟು ನಿಂತಿದ್ದ ಕಾರಿನ ಚಾಲಕನನ್ನು ವಿಚಾರಿಸಲು ಹೋಗಿದ್ದ ಕಾನ್ಸ್​ಟೇಬಲ್​ ಸುರೇಶ್​ ಮೃತಪಟ್ಟಿದ್ದು, ಅಸೆಂಟ್​ ಕಾರಿನ ಚಾಲಕನ ಕೈ ಕಾಲು ಮುರಿದಿವೆ. ಇನ್ನು ಕುಡಿದ ಮತ್ತಿನಲ್ಲಿದ್ದ ಯುವಕ ಯುವತಿಯರಿಗೂ ಸಹ ಗಂಭೀರ ಗಾಯಗಳವಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಇನ್ಸ್​ಪೆಕ್ಟರ್​ ಬಚಾವ್ ಆಗಿದ್ದಾರೆ.

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ

ಬೆಂಗಳೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿ4ರಲ್ಲಿ ನಡೆದಿದೆ. ಘಟನೆಯಲ್ಲಿ ಮಂಡ್ಯ ಮೂಲದ ಪ್ರಸನ್ನ(40)ಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಕೆಎಸ್ಆರ್‌ಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!