Bengaluru News: ಕೆಟ್ಟು ನಿಂತ ಕಾರು: ಚಾಲಕನ ಸಹಾಯಕ್ಕೆ ಹೋಗಿದ್ದ ಕಾನ್ಸ್​ಟೇಬಲ್​ ದುರಂತ ಅಂತ್ಯ

ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್​ಟೇಬಲ್​ ದುರಂತ ಅಂತ್ಯ ಕಂಡಿದ್ದು, ಅದೃಷ್ಟವಶಾತ್​ ಇನ್ಸ್​ಪೆಕ್ಟರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.​

Bengaluru News: ಕೆಟ್ಟು ನಿಂತ ಕಾರು: ಚಾಲಕನ ಸಹಾಯಕ್ಕೆ ಹೋಗಿದ್ದ ಕಾನ್ಸ್​ಟೇಬಲ್​ ದುರಂತ ಅಂತ್ಯ
ಮೃತ ಕಾನ್ಸ್​ಟೇಬಲ್
Edited By:

Updated on: Jul 03, 2023 | 7:46 AM

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (kempegowda international airport) ರಸ್ತೆ ಚಿಕ್ಕಜಾಲ ಬಳಿಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್​ಟೇಬಲ್​ ದುರಂತ ಕಂಡಿದ್ದಾರೆ. ನಿನ್ನೆ(ಜುಲೈ 02) ರಾತ್ರಿ ನೈಟ್ ರೌಂಡ್ಸ್​ನಲ್ಲಿದ್ದ ದೇವನಹಳ್ಳಿ ಇನ್ಸ್​ಪೆಕ್ಟರ್​ ಧರ್ಮೆಗೌಡ ಮತ್ತು ಜೀಪ್ ಡ್ರೈವ್ ಮಾಡುತ್ತಿದ್ದ ಕಾನ್ಸ್​ಟೇಬಲ್ ಸುರೇಶ್, ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆಗೆ ತೆರಳಿದ್ದಾರೆ. ಆ ವೇಳೆ ಇನ್ನೊಂದು ಕಾರು ಬಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆಗೆ ತೆರಳಿದ್ದ ಕಾನ್ಸ್​ಟೇಬಲ್​ ಸುರೇಶ್ ಮೃತಪಟ್ಟಿದ್ದು, ಅದೃಷ್ಟವಶಾತ್ ಇನ್ಸ್​ಪೆಕ್ಟರ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಹಾಯಕ್ಕೆ ಹೋಗಿದ್ದ ಕಾನ್ಸ್​ಟೇಬಲ್​ ದುರಂತ ಅಂತ್ಯ

ಚಿಕ್ಕಜಾಲ ಬಳಿಯ ಹೆದ್ದಾರಿಯಲ್ಲಿ ಇನ್ನೋವಾ ಕಾದು ಕೆಟ್ಟು ನಿಂತಿತ್ತು. ರಾತ್ರಿ ಗಸ್ತಿನಲ್ಲಿದ್ದ ದೇವನಹಳ್ಳಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​ ಹಾಗೂ ಕಾನ್ಸ್​ಟೇಬಲ್​ ಸುರೇಶ್ ಕೆಟ್ಟು ನಿಂತಿದ್ದ ಕಾರಿನ ಬಳಿ ಹೋಗಿ ಏನಾಗಿದೆ? ಎಂದು ವಿಚಾರಿಸಲು ಹೋಗಿದ್ದಾರೆ. ಆದ್ರೆ ಇದೇ ಸಮಯದಲ್ಲಿ ಫೋನ್​ನಲ್ಲಿ ಮಾತನಾಡಲು ಇನ್ಸಪೇಕ್ಟರ್ ಧರ್ಮೆಗೌಡ ಸೈಡಿಗೆ ಹೋಗಿದ್ದರು. ಈ ವೇಳೆ ಅಸೆಂಟ್ ಕಾರು ಬಂದು ಕೆಟ್ಟು ನಿಂತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ.

ಅಸೆಂಟ್ ಕಾರಿನಲ್ಲಿ ಮೂವರು ಯುವಕರು ಹಾಗೂ ಮೂವರು ಯುವತಿಯರಿದ್ದು, ರಾತ್ರಿಯೆಲ್ಲ ಪಾರ್ಟಿ ಮಾಡಿಕೊಂಡು ಮುಂಜಾನೆ ನಂದಿಬೆಟ್ಟಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಕೆಟ್ಟು ನಿಂತಿದ್ದ ಕಾರಿನ ಚಾಲಕನನ್ನು ವಿಚಾರಿಸಲು ಹೋಗಿದ್ದ ಕಾನ್ಸ್​ಟೇಬಲ್​ ಸುರೇಶ್​ ಮೃತಪಟ್ಟಿದ್ದು, ಅಸೆಂಟ್​ ಕಾರಿನ ಚಾಲಕನ ಕೈ ಕಾಲು ಮುರಿದಿವೆ. ಇನ್ನು ಕುಡಿದ ಮತ್ತಿನಲ್ಲಿದ್ದ ಯುವಕ ಯುವತಿಯರಿಗೂ ಸಹ ಗಂಭೀರ ಗಾಯಗಳವಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಇನ್ಸ್​ಪೆಕ್ಟರ್​ ಬಚಾವ್ ಆಗಿದ್ದಾರೆ.

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ

ಬೆಂಗಳೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿ4ರಲ್ಲಿ ನಡೆದಿದೆ. ಘಟನೆಯಲ್ಲಿ ಮಂಡ್ಯ ಮೂಲದ ಪ್ರಸನ್ನ(40)ಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಕೆಎಸ್ಆರ್‌ಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us