AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಯ ಪ್ರಾಣ ಉಳಿಸಲು ಮೆಕಾನಿಕ್ ಆದ ಪೊಲೀಸ್ ಸಿಬ್ಬಂದಿ; ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಸಹಾಯ, ಪೊಲೀಸ್ ಕಾರ್ಯಕ್ಕೆ ಬಿಗ್​ ಸೆಲ್ಯೂಟ್!

ಫೆಬ್ರವರಿ 2ರ ಮಧ್ಯಾಹ್ನ ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಸಿಐಡಿ ಕಚೇರಿ ಬಳಿ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ.

ರೋಗಿಯ ಪ್ರಾಣ ಉಳಿಸಲು ಮೆಕಾನಿಕ್ ಆದ ಪೊಲೀಸ್ ಸಿಬ್ಬಂದಿ; ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಸಹಾಯ, ಪೊಲೀಸ್  ಕಾರ್ಯಕ್ಕೆ ಬಿಗ್​ ಸೆಲ್ಯೂಟ್!
ಕಾನ್ಸ್ಟೇಬಲ್ ಕಾಸಪ್ಪ ಕಲ್ಲೂರು
TV9 Web
| Edited By: |

Updated on:Feb 02, 2022 | 11:38 AM

Share

ಬೆಂಗಳೂರು: ರೋಗಿಯೊಬ್ಬನ ಪ್ರಾಣ ಉಳಿಸಲು ಪೊಲೀಸ್ ಸಿಬ್ಬಂದಿ(Police Constable) ತಾನೇ ಮೆಕಾನಿಕ್ ಆಗಿ ಆ್ಯಂಬುಲೆನ್ಸ್ (Ambulance)ಟೈರ್ ಚೇಂಜ್ ಮಾಡಿ ವ್ಯಕ್ತಿಯ ಪ್ರಾಣ ಉಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಚಾರಿ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಫೆಬ್ರವರಿ 2ರಂದು ಮಧ್ಯಾಹ್ನ ಸಿಐಡಿ ಕಚೇರಿ ಬಳಿ ಈ ಘಟನೆ ನಡೆದಿದೆ. ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ. ಈ ವೇಳೆ ಪೊಲೀಸ್ ಸಿಬ್ಬಂದಿ ರೋಗಿಯ ಪ್ರಾಣ ಉಳಿಸಲು ಸಹಾಯ ಮಾಡಿದ್ದಾರೆ.

ಫೆಬ್ರವರಿ 2ರ ಮಧ್ಯಾಹ್ನ ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಸಿಐಡಿ ಕಚೇರಿ ಬಳಿ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ. ಆಗ ವಿಷಯ ತಿಳಿದ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣಾ ಕಾನ್ಸ್ಟೇಬಲ್ ಕಾಸಪ್ಪ ಕಲ್ಲೂರು ಸಮಯ ಪ್ರಜ್ಞೆ ಮೆರೆದಿದ್ದಾರೆ. ಆ್ಯಂಬುಲೆನ್ಸ್ ಟೈರ್ ಪಂಚರ್ ಆಗುತ್ತಿದ್ದಂತೆ ರೋಗಿಯ ಪತ್ನಿ ಹಾಗೂ ಮಗಳು ದಿಕ್ಕು ಕಾಣದೆ ಕಂಗಾಲಾದ್ರು. ಆಗ ಆ್ಯಂಬುಲೆನ್ಸ್ ನಲ್ಲಿ ರೋಗಿಯ ಪರಿಸ್ಥಿತಿ ನೋಡಿದ ಸಂಚಾರಿ ಪೊಲೀಸ್ ಸಿಬ್ಬಂದಿ ಕಾಸಪ್ಪ ಕಲ್ಲೂರು ರೋಗಿಯ ಪ್ರಾಣ ಉಳಿಸಲು ಸ್ವತಃ ತಾನೇ ಮೆಕಾನಿಕ್ ಆಗಿ ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಆಸ್ಪತ್ರೆಗೆ ಹೋಗಲು ಸಹಾಯ ಮಾಡಿದ್ದಾರೆ. ಸದ್ಯ ಕಾನ್ಸ್ಟೇಬಲ್ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಲವ್​ ಮಾಕ್ಟೇಲ್​ 3’ ಮಾಡ್ತೀರಾ ಎಂಬ ಪ್ರಶ್ನೆಗೆ ಮಿಲನಾ ನಾಗರಾಜ್​ ಏನ್​ ಅಂದ್ರು?

Published On - 10:08 am, Wed, 2 February 22

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ