AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಯ ಪ್ರಾಣ ಉಳಿಸಲು ಮೆಕಾನಿಕ್ ಆದ ಪೊಲೀಸ್ ಸಿಬ್ಬಂದಿ; ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಸಹಾಯ, ಪೊಲೀಸ್ ಕಾರ್ಯಕ್ಕೆ ಬಿಗ್​ ಸೆಲ್ಯೂಟ್!

ಫೆಬ್ರವರಿ 2ರ ಮಧ್ಯಾಹ್ನ ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಸಿಐಡಿ ಕಚೇರಿ ಬಳಿ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ.

ರೋಗಿಯ ಪ್ರಾಣ ಉಳಿಸಲು ಮೆಕಾನಿಕ್ ಆದ ಪೊಲೀಸ್ ಸಿಬ್ಬಂದಿ; ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಸಹಾಯ, ಪೊಲೀಸ್  ಕಾರ್ಯಕ್ಕೆ ಬಿಗ್​ ಸೆಲ್ಯೂಟ್!
ಕಾನ್ಸ್ಟೇಬಲ್ ಕಾಸಪ್ಪ ಕಲ್ಲೂರು
TV9 Web
| Edited By: |

Updated on:Feb 02, 2022 | 11:38 AM

Share

ಬೆಂಗಳೂರು: ರೋಗಿಯೊಬ್ಬನ ಪ್ರಾಣ ಉಳಿಸಲು ಪೊಲೀಸ್ ಸಿಬ್ಬಂದಿ(Police Constable) ತಾನೇ ಮೆಕಾನಿಕ್ ಆಗಿ ಆ್ಯಂಬುಲೆನ್ಸ್ (Ambulance)ಟೈರ್ ಚೇಂಜ್ ಮಾಡಿ ವ್ಯಕ್ತಿಯ ಪ್ರಾಣ ಉಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಚಾರಿ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಫೆಬ್ರವರಿ 2ರಂದು ಮಧ್ಯಾಹ್ನ ಸಿಐಡಿ ಕಚೇರಿ ಬಳಿ ಈ ಘಟನೆ ನಡೆದಿದೆ. ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ. ಈ ವೇಳೆ ಪೊಲೀಸ್ ಸಿಬ್ಬಂದಿ ರೋಗಿಯ ಪ್ರಾಣ ಉಳಿಸಲು ಸಹಾಯ ಮಾಡಿದ್ದಾರೆ.

ಫೆಬ್ರವರಿ 2ರ ಮಧ್ಯಾಹ್ನ ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಸಿಐಡಿ ಕಚೇರಿ ಬಳಿ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ. ಆಗ ವಿಷಯ ತಿಳಿದ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣಾ ಕಾನ್ಸ್ಟೇಬಲ್ ಕಾಸಪ್ಪ ಕಲ್ಲೂರು ಸಮಯ ಪ್ರಜ್ಞೆ ಮೆರೆದಿದ್ದಾರೆ. ಆ್ಯಂಬುಲೆನ್ಸ್ ಟೈರ್ ಪಂಚರ್ ಆಗುತ್ತಿದ್ದಂತೆ ರೋಗಿಯ ಪತ್ನಿ ಹಾಗೂ ಮಗಳು ದಿಕ್ಕು ಕಾಣದೆ ಕಂಗಾಲಾದ್ರು. ಆಗ ಆ್ಯಂಬುಲೆನ್ಸ್ ನಲ್ಲಿ ರೋಗಿಯ ಪರಿಸ್ಥಿತಿ ನೋಡಿದ ಸಂಚಾರಿ ಪೊಲೀಸ್ ಸಿಬ್ಬಂದಿ ಕಾಸಪ್ಪ ಕಲ್ಲೂರು ರೋಗಿಯ ಪ್ರಾಣ ಉಳಿಸಲು ಸ್ವತಃ ತಾನೇ ಮೆಕಾನಿಕ್ ಆಗಿ ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಆಸ್ಪತ್ರೆಗೆ ಹೋಗಲು ಸಹಾಯ ಮಾಡಿದ್ದಾರೆ. ಸದ್ಯ ಕಾನ್ಸ್ಟೇಬಲ್ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಲವ್​ ಮಾಕ್ಟೇಲ್​ 3’ ಮಾಡ್ತೀರಾ ಎಂಬ ಪ್ರಶ್ನೆಗೆ ಮಿಲನಾ ನಾಗರಾಜ್​ ಏನ್​ ಅಂದ್ರು?

Published On - 10:08 am, Wed, 2 February 22

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್