AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಂದ ಪಾಕ್ ಪರ ಘೋಷಣೆ ಪ್ರಕರಣ: ಬೆಂಗಳೂರು ಪೊಲೀಸರಿಂದ ತೀವ್ರಗೊಂಡ ವಿಚಾರಣೆ

ಪಾಕ್ ಪರ ಘೋಷಣೆಯ ಹಿಂದೆ ಯಾವುದಾದರೂ ಸಂಘಟನೆಗಳು ಇವೆಯೇ? ಈ ವಿದ್ಯಾರ್ಥಿಗಳು ಯಾವುದಾದರೂ ಉಗ್ರಗಾಮಿ ಸಂಘಟನೆಯನ್ನು ಸಂಪರ್ಕಿಸಿದ್ದರೇ ಎನ್ನುವ ವಿಚಾರದ ಬಗ್ಗೆಯೂ ಪೊಲೀಸರು ಗಮನ ಹರಿಸಿದ್ದಾರೆ.

ವಿದ್ಯಾರ್ಥಿಗಳಿಂದ ಪಾಕ್ ಪರ ಘೋಷಣೆ ಪ್ರಕರಣ: ಬೆಂಗಳೂರು ಪೊಲೀಸರಿಂದ ತೀವ್ರಗೊಂಡ ವಿಚಾರಣೆ
ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ ವಿದ್ಯಾರ್ಥಿಗಳು
TV9 Web
| Edited By: |

Updated on: Nov 20, 2022 | 2:10 PM

Share

ಬೆಂಗಳೂರು: ನ್ಯೂ ಹೊರೈಜಾನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದ ಪ್ರಕರಣದ ವಿಚಾರಣೆಯನ್ನು ಬೆಂಗಳೂರು ಪೊಲೀಸರು ತೀವ್ರಗೊಳಿಸಿದ್ದಾರೆ. ವಿದ್ಯಾರ್ಥಿಗಳು ತಮಾಷೆಗೆ ಘೋಷಣೆ ಕೂಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಮಾರತ್ತಹಳ್ಳಿ‌ ಪೊಲೀಸರು ವಿಚಾರಣೆ ಮುಂದುವರಿಸಲು ನಿರ್ಧರಿಸಿದ್ದಾರೆ. ಮತ್ತೊಮ್ಮೆ ನಾಳೆ (ನ 21) ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗಬೇಕೆಂದು ಮೂವರೂ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.

ಮೂವರ ಮೊಬೈಲ್ ವಶಕ್ಕೆ ಪಡೆದಿರುವ ಪೊಲೀಸರು ವಿಧಿವಿಜ್ಞಾನ (ಎಫ್​ಎಸ್ಎಲ್) ಪ್ರಯೋಗಶಾಲೆಗೆ ತಪಾಸಣೆಗೆ ಕಳುಹಿಸಲಾಗಿದೆ. ಪಾಕ್ ಪರ ಘೋಷಣೆಯ ಹಿಂದೆ ಯಾವುದಾದರೂ ಸಂಘಟನೆಗಳು ಇವೆಯೇ? ಈ ವಿದ್ಯಾರ್ಥಿಗಳು ಯಾವುದಾದರೂ ಉಗ್ರಗಾಮಿ ಸಂಘಟನೆಯನ್ನು ಸಂಪರ್ಕಿಸಿದ್ದರೇ? ವಿದ್ಯಾರ್ಥಿಗಳಿಗೆ ಪಾಕಿಸ್ತಾನ ಮೂಲದ ವ್ಯಕ್ತಿಗಳ ಸಂಪರ್ಕವಿದೆಯೇ ಎಂಬ ಸಂಗತಿ ತಿಳಿಯಲು ಪೊಲೀಸರು ಯತ್ನಿಸುತ್ತಿದ್ದಾರೆ. ಇದೀಗ ಮೊಬೈಲ್​ನ ದತ್ತಾಂಶವನ್ನು ರಿಟ್ರೀವ್ ಮಾಡಲು ಎಫ್​ಎಸ್ಎಲ್​ಗೆ ಕಳಿಸಲಾಗಿದೆ.

ಮೂವರು ವಿದ್ಯಾರ್ಥಿಗಳ ನಂಬರ್​ಗಳಿಂದ ಹೋಗಿರುವ ಮತ್ತು ಅವರ ಮೊಬೈಲ್​ಗೆ ಬಂದಿರುವ ಕರೆಗಳ ವಿವರವನ್ನೂ ಪರಿಶೀಲಿಸಲಾಗುತ್ತಿದೆ. ಮೂವರು ವಿದ್ಯಾರ್ಥಿಗಳು ವಾಸಿಸುತ್ತಿರುವ ಮನೆ ಹಾಗೂ ಕೊಠಡಿಗಳನ್ನೂ ಪೊಲೀಸರು ಪರಿಶೀಲಿಸಿದ್ದಾರೆ. ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಎನ್​ಐ ಜೊತೆಗೆ ಹಂಚಿಕೊಳ್ಳಲಾಗಿದೆ. ದೇಶದ‌ ಭದ್ರತೆಗೆ ಸಮಬಂಧಿಸಿದ ವಿಷಯವಾಗಿರುವುದರಿಂದ ಪೊಲೀಸರು ಈ ಪ್ರಕರಣವನ್ನು ಸಂಪೂರ್ಣವಾಗಿ ಪರಿಶೀಲಿಸಲು ಮುಂದಾಗಿದ್ದಾರೆ.

ಮೊದಲ ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಾದ ಆರ್ಯನ್, ದಿನಕರ್‌, ರಿಯಾ ರವಿಚಂದ್ರ ಕಾಮೇಡ್ಕರ್‌ ಘೋಷಣೆ ಕೂಗಿದ ವಿದ್ಯಾರ್ಥಿಗಳು. ಇವರನ್ನು ಇತರ ವಿದ್ಯಾರ್ಥಿಗಳು ಥಳಿಸಲು ಮುಂದಾಗಿದ್ದರು. ಇವರು ನಂತರ ಉಳಿದ ವಿದ್ಯಾರ್ಥಿಗಳ ಬಳಿ ಕ್ಷಮೆಯಾಚಿಸಿದರು. ‘ತಮಾಷೆಗೆಂದು ಹೀಗೆ ಮಾಡಿದೆವು’ ಎಂದು ವಿದ್ಯಾರ್ಥಿಗಳು ನಂತರ ಸ್ಪಷ್ಟನೆ ನೀಡಿದರು. ಮಾರತ್ತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ