AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ನೆನಪಿನಲ್ಲಿ ಪೊಲೀಸರಿಂದ 50 ಕಿಲೋಮೀಟರ್ ಸೈಕಲ್ ಜಾಥಾ, ಮಹಾರಾಷ್ಟ್ರದ ಅನಾಥಾಶ್ರಮದಲ್ಲಿ ಅಭಿಮಾನಿ ಅನ್ನದಾನ

ಸೈಕಲ್ ಜಾಥಾಕ್ಕೆ ನಟ ಶಿವರಾಜ್‌ಕುಮಾರ್ ಚಾಲನೆ ನೀಡಲಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್, ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹಾಗೂ ಕೆಎಸ್ಆರ್ಪಿ ಬೆಂಗಳೂರು ಸಂಚಾರಿ ಪೊಲೀಸರು ಜಾಥದಲ್ಲಿ ಭಾಗಿಯಾಗಲಿದ್ದಾರೆ.

ಪುನೀತ್ ನೆನಪಿನಲ್ಲಿ ಪೊಲೀಸರಿಂದ 50 ಕಿಲೋಮೀಟರ್ ಸೈಕಲ್ ಜಾಥಾ, ಮಹಾರಾಷ್ಟ್ರದ ಅನಾಥಾಶ್ರಮದಲ್ಲಿ ಅಭಿಮಾನಿ ಅನ್ನದಾನ
ಪುನೀತ್ ರಾಜ್‍ಕುಮಾರ್ ನೆನಪಿನಲ್ಲಿ ಪೊಲೀಸರಿಂದ 50 ಕಿಲೋಮೀಟರ್ ಸೈಕಲ್ ಜಾಥಾ, ಮಹಾರಾಷ್ಟ್ರದ ಅನಾಥಾಶ್ರಮದಲ್ಲಿ ಅಭಿಮಾನಿಯಿಂದ ಅನ್ನದಾನ
TV9 Web
| Updated By: ಆಯೇಷಾ ಬಾನು|

Updated on:Nov 21, 2021 | 8:16 AM

Share

ಬೆಂಗಳೂರು: ನಟ, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್(Puneeth Rajkumar) ನೆನಪಿನಲ್ಲಿ ಪೊಲೀಸರು ಇಂದು ಬೆಂಗಳೂರಿನಲ್ಲಿ ಸೈಕಲ್ ಜಾಥಾ ಆರಂಭಿಸಿದ್ದಾರೆ. ಕೆಎಸ್ಆರ್ಪಿ (KSRP), ಬೆಂಗಳೂರು ಸಂಚಾರಿ ಪೊಲೀಸರು ಇಂದು ಕಂಠೀರವ ಸ್ಟೇಡಿಯಂನಿಂದ 50 ಕಿಲೋಮೀಟರ್ ವರೆಗೆ ಸೈಕಲ್ ಜಾಥಾ ಹಮ್ಮಿಕೊಂಡಿದ್ದಾರೆ. ಪೊಲೀಸ್ ಹಾಕಿ ಗ್ರೌಂಡ್‌ನಲ್ಲಿ ಜಾಥಾ ಅಂತ್ಯಗೊಳ್ಳಲಿದೆ.

ಸೈಕಲ್ ಜಾಥಾಕ್ಕೆ ನಟ ಶಿವರಾಜ್‌ಕುಮಾರ್ ಚಾಲನೆ ನೀಡಲಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್, ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹಾಗೂ ಕೆಎಸ್ಆರ್ಪಿ ಬೆಂಗಳೂರು ಸಂಚಾರಿ ಪೊಲೀಸರು ಜಾಥದಲ್ಲಿ ಭಾಗಿಯಾಗಲಿದ್ದಾರೆ. ನಟ ಪುನೀತ್ ರಾಜ್‍ಕುಮಾರ್ ನೆನಪು ಹಾಗೂ ಕನ್ನಡಕ್ಕಾಗಿ ನಾವು, ಮಾತಾಡ್ ಮಾತಾಡ್ ಕನ್ನಡ ಎಂಬ ಘೋಷ ವಾಕ್ಯದಡಿ ಜಾಥ ನಡೆಯಲಿದೆ.

ಕಂಠೀರವ ಸ್ಟೇಡಿಯಂನಿಂದ ಚಾಲುಕ್ಯ ಸರ್ಕಲ್, ಮೇಖ್ರಿ ಸರ್ಕಲ್‌, ಹೆಬ್ಬಾಳ, ಬಿಇಎಲ್ ಸರ್ಕಲ್, ಗೋರಗುಂಟೆಪಾಳ್ಯ, ರಾಜ್ ಕುಮಾರ್ ಸಮಾಧಿ ಕಡೆಗೆ ಸಾಗಿ ಪುನೀತ್ ಸಮಾಧಿ ಬಳಿ ಬ್ರೇಕ್ ಪಡೆದು ನಾಗರಭಾವಿ, ದೇವೆಗೌಡ ಪೆಟ್ರೋಲ್ ಬಂಕ್, ಸಾರಕ್ಕಿ ಸರ್ಕಲ್, ಬಿಟಿಎಂ ಜಕ್ಷನ್, ಸಿಲ್ಕ್ ಬೋರ್ಡ್, ಆಡುಗೋಡಿ, ರಿಚ್ಮಂಡ್ ಸರ್ಕಲ್, ಮೇಯೋ ಹಾಲ್, ಕಡೆಯಿಂದ ಸಾಗಿ ಪೊಲೀಸ್ ಹಾಕಿ ಗ್ರೌಂಡ್ ನಲ್ಲಿ ಸೈಕಲ್ ಜಾಥ ಅಂತ್ಯಗೊಳ್ಳಲಿದೆ.

ಪೊಲೀಸರಿಂದ ಹಾಕಿ ಕ್ರೀಡಾ ಕೂಟ ಆಯೋಜನೆ ಮಾಡಬೇಕಿತ್ತು. ಇದಕ್ಕೆ ಅಪ್ಪುರನ್ನ ಕರೆಸಿ ಅವರಿಂದಲೇ ಚಾಲನೆ ಕೊಡಿಸಬೇಕಿತ್ತು. ಆದ್ರೆ ಅದು ಸಾಧ್ಯ ಆಗಲಿಲ್ಲ ಬಹಳ ನೋವಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ವೇದಿಕೆ ಮೇಲೆ ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನೀನೇ ರಾಜ ಕುಮಾರ ಹಾಡನ್ನು ಹಾಡಿ ಭಾವುಕರಾದ್ರು.

ಅಪ್ಪು ಎಲ್ಲೂ ಹೋಗಿಲ್ಲ ಇಲ್ಲೇ ಇದ್ದಾನೆ ಇನ್ನು ಜಾಥಕ್ಕೆ ಚಾಲನೆ ನೀಡಿದ ಶಿವರಾಜ್ ಕುಮಾರ್, ಸೈಕಲ್ ರೈಡ್ ಅಂದ್ರೆ ಅಪ್ಪುಗೆ ತುಂಬಾ ಇಷ್ಟ. ಅವ್ನಿದ್ರೆ ನಿಮ್ ಜೊತೆ ಸೈಕಲ್ ಜಾಥಾಗೆ ಬರ್ತಿದ್ದ. ನನ್ನ ಹುಟ್ಟು ಹಬ್ಬಕ್ಕೆ ಅಪ್ಪು ಸೈಕಲ್ ಗಿಫ್ಟ್ ಮಾಡಿದ್ದ. ಈ 50 ಕಿಮೀ ಜಾಥಾದಲ್ಲಿ ಅಪ್ಪು ಇದ್ದಿದ್ರೇ ಖಂಡಿತ ಭಾಗವಹಿಸ್ತಿದ್ದ. ಆದ್ರೆ ನನ್ನ ತಮ್ಮ ಈಗಿಲ್ಲ. ಅಪ್ಪು ಎಲ್ಲೂ ಹೋಗಿಲ್ಲ. ಇಲ್ಲೇ ಇದ್ದಾನೆ. ಇರ್ತಾನೆ. ಎಲ್ಲರ ಹೃದಯದಲ್ಲೂ ಅಪ್ಪು ಶಾಶ್ವತ. ನಾನು ಅಪ್ಪುಗೆ ಅಣ್ಣನಲ್ಲ, ಅವ್ನೇ ನನಗೆ ಅಣ್ಣನಾಗಿ ಹೋಗಿದ್ದಾನೆ ಎಂದು ನಟ ಶಿವರಾಜ್ ಕುಮಾರ್ ಪುನೀತ್ ನೆನೆದು ಭಾವುಕ ನುಡಿಗಳನ್ನಾಡಿದ್ದಾರೆ.

ಅಭಿಮಾನಿಯಿಂದ ಅನ್ನ ಸಂತರ್ಪಣೆ ಇನ್ನು ಮತ್ತೊಂದೆಡೆ ಕನ್ನಡದ ಮೇರು ನಟ ಪುನೀತ್ ಗಾಗಿ ಮಹಾರಾಷ್ಟ್ರದ ಮನಗಳು ಮಿಡಿಯುತ್ತಿವೆ. ಮಹರಾಷ್ಟ್ರದ ಅಹ್ಮದ್ ನಗರದ ಅನಾಥಾಶ್ರಮದಲ್ಲಿ ದಿವಂಗತ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಅನ್ನ ಸೇವೆಯನ್ನ ನೆರವೇರಿಸಲಾಗುತ್ತಿದೆ. ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸುವ ನಿಮಿತ್ತ ಮಹದೇವ ಕಲ್ಯಾಣಪ್ಪ ತಿಮ್ಮಲಾಪುರ್ ಎನ್ನುವವರು ಅನ್ನದಾನ ಸಲ್ಲಿಸುತ್ತಿದ್ದಾರೆ. ಮಹಾರಾಷ್ಟ್ರದ ಅಹ್ಮದಾಬಾದ್ ನಗರದ ಆಶ್ರಮದ ನೂರಾರು ಅನಾಥ ಮಕ್ಕಳು ಪ್ರತಿದಿನ ಪುನೀತ್ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿ ಕನ್ನಡದ ಮೇರು ನಟನಿಗೆ ಗೌರವ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: Petrol Price Today: ಸತತ ಹದಿನೇಳನೇ ದಿನವೂ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!

Published On - 8:03 am, Sun, 21 November 21

‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?