AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಂಟದಲ್ಲಿ ಪಿಸ್ತೂಲ್​ ಇಟ್ಕೊಂಡು ಬಂದು ಸಿಎಂಗೆ ಹಾರ ಹಾಕಿದ ವ್ಯಕ್ತಿ ಯಾರು? ಪತ್ತೆ ಹಚ್ಚಿದ ಪೊಲೀಸ್ರು ಹೇಳಿದ್ದೇನು?

ವ್ಯಕ್ತಿಯೋರ್ವ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೂವಿನ ಹಾರ ಹಾಕಿ ತೆರಳಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಾರ ಹಾಕುವಾಗ ಸೊಂಟದಲ್ಲಿ ಪಿಸ್ತೂಲ್ ಇರುವುದು ಕಂಡುಬಂದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್​ ಆಗಿದ್ದು, ಇದು ಆತಂಕಕ್ಕೆ ಕಾರಣವಾಗಿದೆ. ಇನ್ನು ಗನ್​ನೊಂದಿಗೆ ಬಂದು ಸಿಎಂಗೆ ಹಾರ ಹಾಕಿದ್ಯಾರು? ಪೊಲೀಸರು ಹೇಳಿದ್ದೇನು? ಎನ್ನುವ ವಿವರ ಇಲ್ಲಿದೆ.

ಸೊಂಟದಲ್ಲಿ ಪಿಸ್ತೂಲ್​ ಇಟ್ಕೊಂಡು ಬಂದು ಸಿಎಂಗೆ ಹಾರ ಹಾಕಿದ ವ್ಯಕ್ತಿ ಯಾರು? ಪತ್ತೆ ಹಚ್ಚಿದ ಪೊಲೀಸ್ರು ಹೇಳಿದ್ದೇನು?
TV9 Web
| Edited By: |

Updated on:Apr 08, 2024 | 10:01 PM

Share

ಬೆಂಗಳೂರು, (ಏಪ್ರಿಲ್ 08): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಏಪ್ರಿಲ್ 08) ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಭರ್ಜರಿ ಪ್ರಚಾರ ಮಾಡಿದರು. ಈ ವೇಳೆ ವ್ಯಕ್ತಿಯೋರ್ವ ಗನ್​ ಇಟ್ಟುಕೊಂಡು ಬಂದು ಸಿದ್ದರಾಮಯ್ಯಗೆ ಹೂವಿನ ಹಾರ ಹಾಕಿ ತೆರಳಿದ್ದಾನೆ. ಕ್ಯಾಂಪೇನ್ ವಾಹನ ಏರಿ ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿದ್ದು, ಈ ವೇಳೆ ವ್ಯಕ್ತಿ ಸೊಂಟದಲ್ಲಿ ಪಿಸ್ತೂಲ್​ ಇಟ್ಟುಕೊಂಡಿರುವುದು ಕಂಡುಬಂದಿದೆ. ಇದರಿಂದ ಪೊಲೀಸರ ಭದ್ರತಾ ಲೋಪ ಎಂದು ಹೇಳಲಾಗುತ್ತಿದೆ.  ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದ್ದಂತೆಯೇ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು,  ಸದ್ಯ ಗನ್ ಇಟ್ಟುಕೊಂಡು ಬಂದು ಸಿಎಂಗೆ ಹಾರ ಹಾಕಿದ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಗನ್ ಇಟ್ಟುಕೊಂಡು ಬಂದು ಸಿಎಂಗೆ ಹಾರ ಹಾಕಿದ್ದು ರಿಯಾಜ್​ ಎಂದು ಗೊತ್ತಾಗಿದ್ದು, ಆತನನ್ನು ತೀವ್ರ  ವಿಚಾರಣೆಗೊಳಪಡಿಸಿದ್ದಾರೆ.

ಜೀವಭಯವಿದೆ ಎಂದು ರಿಯಾಜ್​ ಅರ್ಜಿ ನೀಡಿ ಗನ್ ಪಡೆದುಕೊಂಡಿದ್ದ. ಅಲ್ಲದೇ ಎಲೆಕ್ಷನ್ ಟೈಮಲ್ಲಿ ಗನ್ ಸರೆಂಡರ್ ಮಾಡದಿರಲು ಸಹ ಅನುಮತಿ ಪಡೆದಿದ್ದ. ಆದ್ರೆ ಸಿಎಂ ಬಳಿ ಹೋಗುವಾಗ ಗನ್ ತೆಗೆದುಕೊಂಡು ಹೋಗಬಾರದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ರಿಯಾಜ್​ನನ್ನು ಸಿದ್ದಾಪುರ ಪೊಲೀಸ್ ಠಾಣೆಗೆ ಕರೆಯಿಸಿಕೊಂಡು ತೀವ್ರ ವಿಚಾರಣೆ ನಡೆಸಿದ್ದಾರೆ. ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಹ ಸಿದ್ದಾಪುರ ಠಾಣೆ ಎನ್.ಸತೀಶ್ ಭೇಟಿ ನೀಡಿ ರಿಯಾಜ್​ನನ್ನು ಗನ್ ಇಟ್ಟುಕೊಂಡು ಸಿಎಂ ಬಳಿಗೆ ಹೋಗಿದ್ಯಾಕೆ ಎಂಬ ಆಯಾಮದಲ್ಲಿ ವಿಚಾರಣೆ ನಡೆಸಿದ್ದಾರೆ. ನಂತರ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಸಹ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ: ಗನ್‌ ಇಟ್ಟುಕೊಂಡು ಬಂದು ಸಿಎಂಗೆ ಹಾರ ಹಾಕಿದ ಅನಾಮಿಕ, ಆತಂಕ ಮೂಡಿಸಿದ ವ್ಯಕ್ತಿ!

ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಹೇಳಿದ್ದೇನು?

ರಿಯಾಜ್​ ಗನ್ ಪ್ರಕರಣದ ಮಾಹಿತಿ ಪಡೆದ ಬಳಿಕ ಠಾಣೆಯಿಂದ ಹೋಗುವಾಗ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಘಟನೆ ಸಂಬಂಧ ರಿಯಾಜ್ ಎಂಬಾತನನ್ನು ವಿಚಾರಣೆ ನಡೆಸುತ್ತಿದ್ದೇವೆ. ಈ ಹಿಂದೆ ತನ್ನ ಮೇಲೆ ಅಟ್ಯಾಕ್ ಆಗಿದೆ ಎಂದು ದೂರು ನೀಡಿದ್ದ. ಅಲ್ಲದೇ ತನಗೆ ಜೀವಬೆದರಿಕೆ ಇದೆ, ಹಾಗಾಗಿ ಗನ್ ಇಟ್ಟುಕೊಳ್ಳಲು ಮನವಿ ಮಾಡಿದ್ದ. ಚುನಾವಣೆ ಸಂದರ್ಭದಲ್ಲೂ ಜೀವಭಯವಿದೆ ಎಂದು ಉಲ್ಲೇಖಿಸಿ ಪೊಲೀಸರ ಬಳಿ ಅನುಮತಿ ಪಡೆದುಕೊಂಡಿದ್ದಾನೆ. ಆದ್ರೆ, ಈಗ ಗನ್ ಇಟ್ಟುಕೊಂಡು ಸಿಎಂ ಬಳಿ ಹೋದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:53 pm, Mon, 8 April 24

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ