AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಲಾಂಗ್ ಬೀಸಿದ ರೌಡಿಯ ಮೇಲೆ ಗುಂಡು ಹಾರಿಸಿದ ಪೊಲೀಸರು, ಟೆಸ್ಟ್​ ಡ್ರೈವ್ ನೆಪದಲ್ಲಿ ಬೈಕ್ ಕದಿಯುತ್ತಿದ್ದ ಕಳ್ಳರ ಬಂಧನ

ಪೊಲೀಸರ ಮೇಲೆ ಆರೋಪಿಯೂ ಲಾಂಗ್ ಬೀಸಲು ಮುಂದಾದ ಹಿನ್ನೆಲೆಯಲ್ಲಿ ಅವನ ಕಾಲಿಗೆ ಗುಂಡು ಹಾರಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

Crime News: ಲಾಂಗ್ ಬೀಸಿದ ರೌಡಿಯ ಮೇಲೆ ಗುಂಡು ಹಾರಿಸಿದ ಪೊಲೀಸರು, ಟೆಸ್ಟ್​ ಡ್ರೈವ್ ನೆಪದಲ್ಲಿ ಬೈಕ್ ಕದಿಯುತ್ತಿದ್ದ ಕಳ್ಳರ ಬಂಧನ
ಬೈಕ್ ಕಳ್ಳರಾದ ಯಾಸಿನ್ ಬೇಗ್ ಮತ್ತು ಇಮ್ರಾನ್ ಖಾನ್ (ಎಡಚಿತ್ರ).
TV9 Web
| Edited By: |

Updated on:Nov 25, 2022 | 11:22 AM

Share

ಬೆಂಗಳೂರು: ಟೆಸ್ಟ್​ ಡ್ರೈವ್ ನೆಪದಲ್ಲಿ ಬೈಕ್ ಕದಿಯುತ್ತಿದ್ದ ಮೂವರು ಕಳ್ಳರನ್ನು ಯಲಹಂಕ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ₹ 15 ಲಕ್ಷ ಮೌಲ್ಯದ 19 ಬೈಕ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ವಿರುದ್ಧ ನಗರದ ಹಲವು ಠಾಣೆಗಳಲ್ಲಿ ಬೈಕ್ ಕಳವು ಪ್ರಕರಣಗಳು ದಾಖಲಾಗಿವೆ. ಯಾಸೀನ್ ಬೇಗ್, ಇಮ್ರಾನ್ ಖಾನ್ ಬಂಧಿತರು. ನಗರದ ವಿವಿಧೆಡೆ ಬೈಕ್ ಹಲವು ತಂತ್ರಗಳನ್ನು ಬಳಸಿ ಬೈಕ್​ಗಳನ್ನು ಕಳವು ಮಾಡುತ್ತಿದ್ದರು. ಓಎಲ್​ಎಕ್ಸ್​ ಆ್ಯಪ್​ ಮೂಲಕ ನೋಂದಾಯಿಸಿಕೊಂಡಿದ್ದರು. ಟೆಸ್ಟ್ ಡ್ರೈವ್ ನೆಪದಲ್ಲಿ ತಾವಿದ್ದಲ್ಲಿಗೆ ಕರೆಸಿಕೊಂಡು ಕಳವು ಮಾಡುತ್ತಿದ್ದರು. ಮೊದಲ ಆ್ಯಪ್​ ಮೂಲಕ ಬುಕ್ ಮಾಡಿ, ಅಂಥ ಬೈಕ್​ಗಳನ್ನೂ ಕಳವು ಮಾಡುತ್ತಿದ್ದರು. ಬೆಂಗಳೂರು ನಗರ ಜಿಲ್ಲೆಯ ಬಾಣಸವಾಡಿ, ಯಶವಂತಪುರ, ಗೊವಿಂದಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಠಾಣೆಗಳಲ್ಲೂ ಆರೋಪಿಗಳ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ರೌಡಿಶೀಟರ್​ ಮೇಲೆ ಪೊಲೀಸರ ಫೈರಿಂಗ್

ಬೆಂಗಳೂರು ಉತ್ತರ ತಾಲ್ಲೂಕಿನ ಮಾದಾವರದ ನವಿಲೆ ಬಡಾವಣೆಯಲ್ಲಿ ರೌಡಿಶೀಟರ್ ರಾಜರಾಜನ್ ಅಲಿಯಾಸ್​ ಸೇಠು ಮೇಲೆ ಮಾದನಾಯಕನಹಳ್ಳಿ ಪೊಲೀಸರು ಗುಂಡು ಹಾರಿಸಿದ್ದಾರೆ. ಪೊಲೀಸರ ಮೇಲೆ ಆರೋಪಿಯೂ ಲಾಂಗ್ ಬೀಸಲು ಮುಂದಾದ ಹಿನ್ನೆಲೆಯಲ್ಲಿ ಅವನ ಕಾಲಿಗೆ ಗುಂಡು ಹಾರಿಸಲಾಯಿತು. ಈತ ಮಾಚೋಹಳ್ಳಿ ನಟರಾಜ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ. ಈ ವೇಳೆ ಇನ್ಸ್​ಪೆಕ್ಟರ್​​ ಮಂಜುನಾಥ್​ ಆರೋಪಿಯ ಮೇಲೆ ಗುಂಡು ಹಾರಿಸಿದರು. ಘಟನೆಯಲ್ಲಿ ಕಾನ್ಸ್​​ಟೇಬಲ್ ಹಾಜಿ ನಾಮ್​ದಾರ್ ಅವರ ಬಲಗೈಗೆ ಗಾಯವಾಗಿದೆ. ಆರೋಪಿ ರಾಜರಾಜನ್ ಹಾಗೂ ಕಾನ್​ಸ್ಟೆಬಲ್ ನಾಮ್​ದಾರ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನಾ ಸ್ಥಳಕ್ಕೆ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದರು.

ಕಳ್ಳತನದ ಆರೋಪಿಗಳ ಬಂಧನ

ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಮಂಜುನಾತ್ ಆಲಿಯಾಸ್ ಮಂಜ ಎಂಬಾತನನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹ 6.20 ಲಕ್ಷ ಮೌಲ್ಯದ 115 ಗ್ರಾಂಂ‌ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಬಂಧನದಿಂದ 15 ಮನೆಗಳ್ಳತನ ಪ್ರಕರಣ ಬೆಳಕಿಗೆ ಬಂದಂತೆ ಆಗಿದೆ. ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೂಜಾರಿ ವಿರುದ್ಧ ಅತ್ಯಾಚಾರ ಯತ್ನದ ಆರೋಪ

ದೇವಸ್ಥಾನದ ಪೂಜಾರಿಯೇ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಾಯತ ಕಟ್ಟುವ ನೆಪದಲ್ಲಿ ಬಾಲಕಿಯ ಮೇಲೆ ಆರೋಪಿಯು ಅತ್ಯಾಚಾರಕ್ಕೆ ಯತ್ನಿಸಿದ್ದ.

Published On - 11:22 am, Fri, 25 November 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್