AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕುಟುಂಬದ 5 ಮಂದಿ ಆತ್ಮಹತ್ಯೆ ಪ್ರಕರಣ: ಪೊಲೀಸರಿಗೆ ಸಿಕ್ಕಿದ್ದು ಒಟ್ಟು 27 ಪುಟಗಳ ಡೆತ್ ನೋಟ್!

Bengaluru: ಮಗ ಮಧುಸಾಗರ್ ಎಂಬವರು ಬರೆದಿದ್ದ 19 ಪುಟಗಳ ಡೆತ್​​ನೋಟ್ ಪತ್ತೆ ಆಗಿತ್ತು. ಅದರಲ್ಲಿ ತಂದೆ ಮೇಲೆ ಸಾಲು ಸಾಲು ಆರೋಪ ಮಾಡಲಾಗಿತ್ತು. ಸಿಂಚನಾ, ಸಿಂಧೂರಾಣಿ ಕನ್ನಡದಲ್ಲಿ ಡೆತ್​​ನೋಟ್ ಬರೆದಿದ್ದರು. ಮಧುಸಾಗರ್ ಇಂಗ್ಲಿಷ್​ನಲ್ಲಿ 19 ಪುಟದ ನೋಟ್ ಬರೆದಿದ್ದರು.

ಒಂದೇ ಕುಟುಂಬದ 5 ಮಂದಿ ಆತ್ಮಹತ್ಯೆ ಪ್ರಕರಣ: ಪೊಲೀಸರಿಗೆ ಸಿಕ್ಕಿದ್ದು ಒಟ್ಟು 27 ಪುಟಗಳ ಡೆತ್ ನೋಟ್!
ಸಿಂಚನಾ ಮತ್ತು ಸಿಂಧುರಾಣಿ
TV9 Web
| Edited By: |

Updated on:Sep 20, 2021 | 2:55 PM

Share

ಬೆಂಗಳೂರು: ನಗರದಲ್ಲಿ ಶಂಕರ್ ಎಂಬವರ ಕುಟುಂಬದ ಐವರ ಸಾವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ತನಿಖೆ ಚುರುಕುಗೊಂಡಿದೆ. ಈ ವೇಳೆ, ಪ್ರತ್ಯೇಕವಾಗಿ ಬರೆದಿದ್ದ 27 ಪುಟಗಳ ಡೆತ್​​ನೋಟ್ ಪತ್ತೆಯಾಗಿದೆ. ಈ ಮೊದಲು ಮನೆಯಲ್ಲಿ 3 ಪ್ರತ್ಯೇಕ ಡೆತ್​​ನೋಟ್ ಪತ್ತೆಯಾಗಿತ್ತು. ಸಿಂಚನಾ ಎಂಬವರ ಕೊಠಡಿಯಲ್ಲಿ 4 ಪುಟಗಳ ಡೆತ್​​ನೋಟ್ ಸಿಕ್ಕಿತ್ತು. ಸಿಂಧೂರಾಣಿ ಕೊಠಡಿಯಲ್ಲಿ 4 ಪುಟದ ಡೆತ್​​ನೋಟ್ ಸಿಕ್ಕಿತ್ತು. ಇಬ್ಬರೂ ತಮ್ಮ ಗಂಡನ ಮನೆ ಮತ್ತು ತಂದೆ ವಿರುದ್ಧ ಆರೋಪ ಮಾಡಿದ್ದರು.

ಬಳಿಕ ಮಗ ಮಧುಸಾಗರ್ ಎಂಬವರು ಬರೆದಿದ್ದ 19 ಪುಟಗಳ ಡೆತ್​​ನೋಟ್ ಪತ್ತೆ ಆಗಿತ್ತು. ಅದರಲ್ಲಿ ತಂದೆ ಮೇಲೆ ಸಾಲು ಸಾಲು ಆರೋಪ ಮಾಡಲಾಗಿತ್ತು. ಸಿಂಚನಾ, ಸಿಂಧೂರಾಣಿ ಕನ್ನಡದಲ್ಲಿ ಡೆತ್​​ನೋಟ್ ಬರೆದಿದ್ದರು. ಮಧುಸಾಗರ್ ಇಂಗ್ಲಿಷ್​ನಲ್ಲಿ 19 ಪುಟದ ನೋಟ್ ಬರೆದಿದ್ದರು.

ವಿನಾಯಕನಗರದಲ್ಲಿ ಒಂದೇ ಕುಟುಂಬದ ಐವರು ಸಾವು ಪ್ರಕರಣ ಜನರ ಮನಸನ್ನು ತಲ್ಲಣಗೊಳಿಸಿತ್ತು. ಈ ಸಂಬಂಧ ಇದೀಗ ಮನೆಯಲ್ಲಿ ಒಟ್ಟಾರೆ 3 ಡೆತ್ ನೋಟ್ ಸಿಕ್ಕಿದೆ. ಸಿಂಚನಾ (32), ಸಿಂಧೂರಾಣಿ (29), ಮಧುಸಾಗರ್ (25) ಬರೆದ ಡೆತ್ ನೋಟ್ ಸಹಿತ ಮೂವರಿಂದ 27 ಪುಟಗಳ ಡೆತ್ ನೋಟ್ ಲಭಿಸಿದೆ.

ಶಂಕರ್ ಪುತ್ರ ಹಾಗೂ ಇಬ್ಬರು ಪುತ್ರಿಯರಿಂದ ಡೆತ್‌ ನೋಟ್ಸ್ ಲಭಿಸಿದೆ. ಹಲ್ಲೇಗೆರೆ ಶಂಕರ್ ಕುಟುಂಬದ ಐವರ ಸಾವಿನ ಪ್ರಕರಣವನ್ನು ಇದೀಗ ಡೆತ್ ನೋಟ್ಸ್‌ ಆಧಾರದಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ತಂದೆಯ ವಿರುದ್ಧ ಮಕ್ಕಳಿಂದ ಸಾಲು ಸಾಲು ಆರೋಪ ತಿಳಿದುಬಂದಿದೆ.

ತಂದೆ ಬಗ್ಗೆ ಮಗನ ಆರೋಪ ಏನೇನಿತ್ತು? ತಂದೆ ವಿರುದ್ಧ ಗಂಭೀರ ಆರೋಪ ಮಾಡಿದ್ದ ಮಧುಸಾಗರ್, ದೂರಿನ ಪ್ರತಿಗಳನ್ನು ಜೆರಾಕ್ಸ್ ಮಾಡಿ ಹಂಚಿದ್ದರಂತೆ. ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಂದೆಯ ಬಗ್ಗೆ ಮಗ ಆರೋಪಗಳ ಸುರಿ ಮಳೆ ಮಾಡಿದ್ದರು. ಮಹಿಳಾಪೀಡಕ, ಸೈಕೋಪಾಥ್ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದರಂತೆ. ಶಂಕರ್ ಸಮಾಜದಲ್ಲಿ ‘ಪ್ರತಿಷ್ಠೆ’ಗಾಗಿ ಏನು ಬೇಕಾದರೂ ಮಾಡಬಲ್ಲರು. ನನ್ನ ತಾಯಿಗೆ ಹಲವು ವರ್ಷಗಳಿಂದ ಕಿರುಕುಳ ಕೊಟ್ಟಿದ್ದಾರೆ. ಶಂಕರ್‌ನದ್ದು ದುರ್ವರ್ತನೆಯಿಂದ ಕೂಡಿದ ಜೀವನವಾಗಿತ್ತು. ಶಂಕರ್ ಹೊರ ಜಗತ್ತಿಗೆ ‘ಮುಖವಾಡ’ ಹಾಕಿ ಬದುಕುತ್ತಿದ್ದ. ಅಪ್ಪ ಶಂಕರ್ ತುಂಬಾ ಸ್ವಾರ್ಥಿ ಎಂದು ಮಧುಸಾಗರ್ ದೂರಿನಲ್ಲಿ ಉಲ್ಲೇಖಿಸಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಅಪ್ಪ ಶಂಕರ್​​ಗೆ ಕಾಲ್​ಗರ್ಲ್ಸ್, ವೇಶ್ಯೆಯರ ಸಹವಾಸ ಇತ್ತು; ಶಂಕರ್ ಹೊರ ಜಗತ್ತಿಗೆ ಮುಖವಾಡ ಹಾಕಿ ಬದುಕುತ್ತಿದ್ದ: ಪುತ್ರನ ವರಸೆ

ಇದನ್ನೂ ಓದಿ: ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

Published On - 2:54 pm, Mon, 20 September 21

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್