Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಮ, ಲಘು ವಾಹನಗಳು ಬೆಂಗಳೂರು ನಗರ ಪ್ರವೇಶಿಕ್ಕೆ ಪೊಲೀಸ್ ಇಲಾಖೆಯಿಂದ ಗ್ರೀನ್ ಸಿಗ್ನಲ್

ಲಾರಿ ಮಾಲೀಕರ ಸಂಘದ ಬೇಡಿಕೆ ಈಡೇರಿಕೆ ಬೆನ್ನೆಲ್ಲೇ ಫೆಡರೇಷನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ಸ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್​ ಮುಷ್ಕರ ವಾಪಸ್ಸು ಪಡೆದುಕೊಂಡಿದೆ.

ಮಧ್ಯಮ, ಲಘು ವಾಹನಗಳು ಬೆಂಗಳೂರು ನಗರ ಪ್ರವೇಶಿಕ್ಕೆ ಪೊಲೀಸ್ ಇಲಾಖೆಯಿಂದ ಗ್ರೀನ್ ಸಿಗ್ನಲ್
ಪ್ರಾತಿನಿಧಿಕ ಚಿತ್ರImage Credit source: indiatimes.com
Follow us
ಗಂಗಾಧರ​ ಬ. ಸಾಬೋಜಿ
|

Updated on: Mar 16, 2023 | 6:06 PM

ಬೆಂಗಳೂರು: ಲಾರಿ ಮಾಲೀಕರ (Lorry Drivers) ಸಂಘದ ಬೇಡಿಕೆ ಈಡೇರಿಕೆ ಬೆನ್ನೆಲ್ಲೇ ಫೆಡರೇಷನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ಸ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್​ ಮುಷ್ಕರ ವಾಪಸ್ಸು ಪಡೆದುಕೊಂಡಿದೆ. ಈ ಹಿನ್ನೆಲೆ ಲಘು ಮತ್ತು ಮಧ್ಯಮ ಸರಕು ಸಾಗಾಣಿಕೆ ವಾಹನಗಳು ಇನ್ನು ಮುಂದೆ ನಗರದಲ್ಲಿ ಸಂಚರಿಸಬಹುದಾಗಿದೆ. 7.5 ಮೆಟ್ರಿಕ್ ಟನ್ ಲಗೇಜ್ ಹೊತ್ತ ವಾಹನಗಳ ಓಡಾಟಕ್ಕೆ ಟ್ರಾಫಿಕ್ ಕಮೀಷನರ್​ ಅಸ್ತು ಎಂದಿದ್ದಾರೆ. ಮಧ್ಯಮ ಹಾಗೂ ಲಘು ಸರಕು ಸಾಗಾಣಿಕೆ ವಾಹನಗಳನ್ನು ನಗರದ ಒಳಗೆ ನಿಷೇಧ ಮಾಡಿರುವುದಕ್ಕೆ ಬೆಂಗಳೂರು ನಗರ ಟೆಂಪೋ ಮಾಲೀಕರ ಸಂಘಗಳ ಒಕ್ಕೂಟದಿಂದ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ರಾತ್ರಿ 12 ಗಂಟೆಯಿಂದ ಲಾರಿ ಮಾಲೀಕರ ಅನಿರ್ದಿಷ್ಟವಧಿ ಮುಷ್ಕರ ನಡೆಯಬೇಕಿತ್ತು. ಆದರೆ ಬೇಡಿಕೆ ಈಡೇರಿದ ಬೆನ್ನೆಲ್ಲೇ ಮುಷ್ಕರ ವಾಪಸ್ಸು ಪಡೆಯಲಾಗಿದೆ.

ವಾಣಿಜ್ಯ ವಾಹನಗಳ ಎಫ್‌.ಸಿ ನವೀಕರಣಕ್ಕೆ ಕ್ಯೂಆರ್‌ ಕೋಡ್‌ ಇರುವ ರೆಟ್ರೋ ರಿಫ್ಲೆಕ್ಟರ್‌ ಟೇಪ್ ಅಳವಡಿಸಿಕೊಂಡು ಬರುವಂತೆ ಸರ್ಕಾರ ಆದೇಶ ಹೊರಡಿಸಿದ್ದು ಇದಕ್ಕೆ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಹಾಗೂ ಬೆಂಗಳೂರು ನಗರದಲ್ಲಿ ಸರಕು ಸಾಗಣೆ ವಾಹನಗಳ ಪ್ರವೇಶ ರದ್ದು ಪಡಿಸಿರುವುದನ್ನು ಖಂಡಿಸಿ 16ರ ಮಧ್ಯರಾತ್ರಿಯಿಂದ ಅಗತ್ಯ ವಸ್ತುಗಳ ಪೂರೈಕೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿತ್ತು.

ಇದನ್ನೂ ಓದಿ: ಇಂದು ಮಧ್ಯರಾತ್ರಿ 12ರಿಂದ ಲಾರಿ ಮುಷ್ಕರ; ಸರಕು ಸಾಗಣೆಯಲ್ಲಿ ವ್ಯತ್ಯಯ ಸಾಧ್ಯತೆ

ಲಾರಿ ಮಾಲೀಕರ ಸಂಘದ ಬೇಡಿಕೆಗಳೇನು?

  • ಕ್ಯೂಆರ್ ಕೋಡ್ ಆಧರಿತ ರಿಫ್ಲ್ಕ್ಟರ್ ಟೇಪುಗಳನ್ನು ಅಳವಡಿಸಿಕೊಳ್ಳಬೇಕು ಅನ್ನೋ ನಿಯಮ ತೆಗೆಯಬೇಕು
  • ಬೆಂಗಳೂರು- ಮೈಸೂರು ರಸ್ತೆಯಲ್ಲಿ ದ್ವಿಚಕ್ರ ಮತ್ತು ಮಂದಗತಿಯಲ್ಲಿ ಚಲಿಸುವ ಟ್ರಾಕ್ಟರ್ ಆಟೋರಿಕ್ಷಾಗಳ ಓಡಾಟ ನಿಷೇಧಿಸಬೇಕು
  • ನೈಸ್ ರಸ್ತೆಯಲ್ಲಿ ಕಳೆದ 10 ವರ್ಷಗಳಿಂದ ಹೆಚ್ಚು ಟೋಲ್ ಹಣ ತೆಗೆದುಕೊಳ್ಳುತ್ತಿದ್ದಾರೆ. ಆದ್ರಿಂದ ಹಗಲು ದರೋಡೆ ಮಾಡಲಾಗುತ್ತಿದೆ ಅದನ್ನು ಈ ಕೂಡಲೇ ತಡೆಯಬೇಕು
  • ಲಾರಿ ಬಾಡಿಗೆಯೊಂದಿಗೆ ಟೋಲ್ ಸುಂಕವನ್ನು ಬಾಡಿಗೆ ನೀಡಿದವರೇ ಕೊಡಬೇಕು
  • ನಗರದ ಒಳಗೆ ಅವೈಜ್ಞಾನಿಕ ವಾಹನಗಳನ್ನ ನಿಷೇಧಿಸಿರುವ ನಿಯಮವನ್ನ ವಾಪಸ್ಸು ಪಡೆಯಬೇಕು

ಮಾ, 20ರಂದು ಬಿಬಿಎಂಪಿ ಪೌರಕಾರ್ಮಿಕರಿಂದ ಪ್ರತಿಭಟನೆಗೆ ಕರೆ

ಬಿಬಿಎಂಪಿ ಕಸ ಸಾಗಣೆ ಕಾರ್ಮಿಕರು ಮಾರ್ಚ್ 20ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಕಾಂಪ್ಯಾಕ್ಟ್ ವಾಹನ ಮತ್ತು ಆಟೋ-ಟಿಪ್ಪರ್ ಚಾಲಕರು, ಸಹಾಯಕರು ಮತ್ತು ಲೋಡರ್‌ಗಳಿಗೆ ನೇರ ಪಾವತಿ ವ್ಯವಸ್ಥೆ ಮತ್ತು ಖಾಯಂ ಉದ್ಯೋಗ ಸ್ಥಾನಮಾನಕ್ಕೆ ಒತ್ತಾಯಿಸಿ ಬಿಬಿಎಂಪಿ ಕಸ ಸಾಗಣೆ ಕಾರ್ಮಿಕರು ಮಾರ್ಚ್ 20ರ ಸೋಮವಾರ ಪ್ರತಿಭಟನೆ ನಡೆಸಲಿದ್ದಾರೆ.

ಇದನ್ನೂ ಓದಿ: ನಾವು ಮುಷ್ಕರದಿಂದ ಹಿಂದೆ ಸರಿಯುವ ಮಾತೇ ಇಲ್ಲ: ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅನಂತ ಸುಬ್ಬರಾವ್

ಚಾಲಕರು, ಸಹಾಯಕರು ಮತ್ತು ಲೋಡರ್‌ಗಳು ಮಾರ್ಚ್ 20 ರಂದು ಮುಷ್ಕರಕ್ಕೆ ಕರೆ ನೀಡಿದ್ದು, ಅಂದು ನಗರದಲ್ಲಿ ಕಸ ಸಂಗ್ರಹಣೆಗೆ ತೊಂದರೆಯಾಗುವ ಸಾಧ್ಯತೆ ಇದೆ. ಕಳೆದ ವಾರ ಪೌರಕಾರ್ಮಿಕರು ಮುಷ್ಕರ ನಡೆಸಿದ್ದರು. ಆದ್ರೆ ಸರ್ಕಾರದಿಂದ ಖಾಯಂ ಉದ್ಯೋಗ ಸ್ಥಾನಮಾನದ ಭರವಸೆ ಸಿಕ್ಕ ನಂತರ ಅದನ್ನು ಹಿಂಪಡೆದಿದ್ದರು. ಆದ್ರೆ ಈ ಬಾರಿ ಮತ್ತೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ 593 ಕಾಂಪ್ಯಾಕ್ಟರ್ ವಾಹನ ಚಾಲಕರು, 9,300 ಆಟೊ ಟಿಪ್ಪರ್ ಚಾಲಕರು ಮತ್ತು ಸಹಾಯಕರು, 1,800 ಲೋಡರ್‌ಗಳಿಗೂ ಕಾಯಂ ಉದ್ಯೋಗ ನೀಡಬೇಕು ಎಂದು ಅಖಿಲ ಭಾರತ ಕೇಂದ್ರೀಯ ಕಾರ್ಮಿಕ ಸಂಘಗಳ ಒಕ್ಕೂಟದ ಬಿಬಿಎಂಪಿ ಪೌರಕಾರ್ಮಿಕರ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ. ಹಾಗೂ ಈ ಬಗ್ಗೆ ಬಿಬಿಎಂಪಿಯ SWM ವಿಭಾಗದ ಜಂಟಿ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.