AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗೋದಿಂದ ಬಂದ ವ್ಯಕ್ತಿಯನ್ನ ಕಿಡ್ನಾಪ್ ಮಾಡಿದ್ದ ಗ್ಯಾಂಗ್ ಅರೆಸ್ಟ್!

ನಾಗರಾಜ್ ಆರೋಪಿ ಉಪೇಂದ್ರನಿಗೆ ಪರಿಚಯದವನಾಗಿದ್ದ. ಲೋನ್​ಗಾಗಿ ಅಲೆಯುತ್ತಿದ್ದ ನಾಗರಾಜ್​ಗೆ ಲೋನ್ ಕೊಡಿಸುವುದಾಗಿ ಆರೋಪಿ ಉಪೇಂದ್ರ ಹೇಳಿದ್ದ. ಉಪೇಂದ್ರಗೆ ದಾಖಲೆಗಳನ್ನು ನೀಡಿ ಕೆಲಸಕ್ಕಾಗಿ ನಾಗರಾಜ್ ಕಾಂಗೋಗೆ ತೆರಳಿದ್ದ.

ಕಾಂಗೋದಿಂದ ಬಂದ ವ್ಯಕ್ತಿಯನ್ನ ಕಿಡ್ನಾಪ್ ಮಾಡಿದ್ದ ಗ್ಯಾಂಗ್ ಅರೆಸ್ಟ್!
ಆರೋಪಿ ಉಪೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ
TV9 Web
| Edited By: |

Updated on:Nov 16, 2021 | 3:55 PM

Share

ಬೆಂಗಳೂರು: ಸುಮಾರು 1 ಕೋಟಿ ಲೋನ್ ಆಸೆಗೆ ಕಾಂಗೋದಿಂದ ಬಂದ ವ್ಯಕ್ತಿಯನ್ನ ಕಿಡ್ನಾಪ್ ಮಾಡಿದ್ದ ಗ್ಯಾಂಗ್ನ ಪೊಲೀಸರು ಬಂಧಿಸಿದ್ದಾರೆ. ಇಂದಿರಾನಗರ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಉಪೇಂದ್ರ, ಸಮೀರ್ ಹಾಗೂ ನೀಲಮ್ಮ ಬಂಧಿತ ಆರೋಪಿಗಳು. ಬಂಧಿತರು ನಾಗರಾಜ್ ಎಂಬಾತನನ್ನ ಅಪಹರಿಸಿ 4.45 ಲಕ್ಷ ಹಣ ವಸೂಲಿ ಮಾಡಿದ್ದರು.

ನಾಗರಾಜ್ ಆರೋಪಿ ಉಪೇಂದ್ರನಿಗೆ ಪರಿಚಯದವನಾಗಿದ್ದ. ಲೋನ್​ಗಾಗಿ ಅಲೆಯುತ್ತಿದ್ದ ನಾಗರಾಜ್​ಗೆ ಲೋನ್ ಕೊಡಿಸುವುದಾಗಿ ಆರೋಪಿ ಉಪೇಂದ್ರ ಹೇಳಿದ್ದ. ಉಪೇಂದ್ರಗೆ ದಾಖಲೆಗಳನ್ನು ನೀಡಿ ಕೆಲಸಕ್ಕಾಗಿ ನಾಗರಾಜ್ ಕಾಂಗೋಗೆ ತೆರಳಿದ್ದ. ನಾಗರಾಜ್​ಗಾಗಿ ಉಪೇಂದ್ರ ಲೋನ್ ಅಪ್ಲೈ ಮಾಡಿದ್ದ. ನಾಗರಾಜ್​ಗೆ 1 ಕೋಟಿಯವರೆಗೂ ಲೋನ್ ಸಿಗಲಿದೆ ಅಂತ ಬ್ಯಾಂಕಿನ ಸಿಬ್ಬಂದಿ ತಿಳಿಸಿದ್ದರು. ಅದಕ್ಕಾಗಿ ನಾಗರಾಜ್ ಹೊಂದಿರುವ 5 ಲಕ್ಷ ಲೋನ್ ಕ್ಲಿಯರ್ ಆಗಬೇಕು ಅಂದಿದ್ರು.

1 ಕೋಟಿ ಆಸೆಗೆ ನಾಗರಾಜ್ ಹೊಂದಿದ್ದ 5 ಲಕ್ಷ ಸಾಲವನ್ನು ಉಪೇಂದ್ರ ತೀರಿಸಿದ್ದ. ಕೆಲವೇ ದಿನಗಳಲ್ಲಿ ಕೊವಿಡ್ನಿಂದ ಕೆಲಸ ಕಳೆದುಕೊಂಡು ನಾಗರಾಜ್ ಭಾರತಕ್ಕೆ ಬಂದಿದ್ದ. ಈ ವೇಳೆ ಲೋನ್ ಹಣ ಬಿಡುಗಡೆ ವಿಚಾರವಾಗಿ ಬ್ಯಾಂಕಿನವರು ಸಹಿ ಪಡೆಯಲು ಕರೆದಿದ್ದರು. ಬ್ಯಾಂಕಿಗೆ ಹೋದಾಗ 1 ಕೋಟಿ ಸಾಲಕ್ಕೆ ಅಪ್ಲೈ ಮಾಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ನಾಗರಾಜ್ ಲೋನ್ ಪಡೆಯಲು ನಿರಾಕರಿಸಿದ್ದ. ನಾಗರಾಜ್ ನಿರ್ಧಾರದಿಂದ ಕಂಗಾಲಾಗಿದ್ದ ಉಪೇಂದ್ರ, ತಾನು ಖರ್ಚು ಮಾಡಿರುವ 5 ಲಕ್ಷಕ್ಕೆ ಬಡ್ಡಿ ಸಮೇತ ನೀಡುವಂತೆ ಧಮ್ಕಿ ಹಾಕಿದ್ದ.

ಹಣ ನೀಡಲು ನಿರಾಕರಿಸಿದಾಗ ಸಮೀರ್ ಎಂಬಾತನಿಗೆ ಉಪೇಂದ್ರ ಸುಪಾರಿ ನೀಡಿದ್ದ. ಸಮೀರ್ ಮೂಲಕ ನಾಗರಾಜನನ್ನ ಕಿಡ್ನಾಪ್ ಮಾಡಿಸಿದ್ದ. ನಾಗರಾಜ್ ನನ್ನ ಮುದ್ದಿನಪಾಳ್ಯದ ನೀಲಮ್ಮ ಎಂಬಾಕೆಯ ಮನೆಯಲ್ಲಿರಿಸಿ ಹಲ್ಲೆ ಮಾಡಿದ್ದರು. ಅಕೌಂಟಿನಲ್ಲಿ 4 ಲಕ್ಷದ 45 ಸಾವಿರ ಹಣ ಕಿತ್ತುಕೊಂಡು ಆರೋಪಿಗಳು ಬಿಟ್ಟು ಕಳಿಸಿದ್ದರು. ಇಂದಿರಾನಗರ ಠಾಣೆಯಲ್ಲಿ ನಾಗರಾಜ್ ದೂರು ನೀಡಿದ್ದ. ದೂರಿನನ್ವಯ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ನಕ್ಷತ್ರ ಆಮೆಗಳ ಮಾರಾಟಕ್ಕೆ ಯತ್ನಿಸಿದ್ದ ಆರೋಪಿ ಸೆರೆ ನಕ್ಷತ್ರ ಆಮೆಗಳ ಮಾರಾಟಕ್ಕೆ ಯತ್ನಿಸಿದ್ದ ಆರೋಪಿಯನ್ನು ಬೆಂಗಳೂರಿನ ಕಲಾಸಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ತಮಿಳುನಾಡು ಮೂಲದ ಮುತ್ತು ಹಮೀದ್ ಮೀರಾನ ಬಂಧಿಸಿ 401 ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆಯಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಬೀಳಗಿ ಶುಗರ್ಸ್​ ಕಾರ್ಖಾನೆ ಸಮೀಪ ರೈತ ಬಣಗಳಿಂದ ಪರ-ವಿರೋಧ ಹೋರಾಟ

ಮಧ್ಯರಾತ್ರಿ ಹಸುವನ್ನು ರಕ್ಷಿಸಿದ ಪಂಜಾಬ್ ಮುಖ್ಯಮಂತ್ರಿ; ಸಾಮಾಜಿಕ ಮಾಧ್ಯಮದಲ್ಲಿ ಚನ್ನಿ ಕಾರ್ಯಕ್ಕೆ  ಶ್ಲಾಘನೆ

Published On - 3:46 pm, Tue, 16 November 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್