AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆಜಾನ್ ಕಂಪನಿ ಹೆಸರಲ್ಲಿ ವಂಚನೆ! ಬೆಂಗಳೂರಿನಲ್ಲಿ ಗೋಡೌನ್ ಮಾಡಿ ಬಾಡಿಗೆ ಕೊಡುತ್ತೇನೆ ಎಂದು ವಂಚಿಸಿದ್ದ ಅರೋಪಿ ಅರೆಸ್ಟ್

ಬಂಧಿತ ಆರೋಪಿ ಆ್ಯಪ್ ಮೂಲಕ ನಲವತ್ತು ಸಾವಿರ ಹಾಗು ಪೇಟಿಯಮ್ ಮೂಲಕ ಒಂಬತ್ತು ಸಾವಿರ ಸಾಲ ಪಡೆದು ಹಣ ವರ್ಗಾವಣೆ ಮಾಡಿಕೊಂಡಿದ್ದ. ಸಾಲ ಕಟ್ಟುವಂತೆ ನೋಟೀಸ್ ಬಂದಾಗ ಕೃತ್ಯ ಎಸಗಿರುವುದು ಬಯಲಿಗೆ ಬಂದಿದೆ.

ಅಮೆಜಾನ್ ಕಂಪನಿ ಹೆಸರಲ್ಲಿ ವಂಚನೆ! ಬೆಂಗಳೂರಿನಲ್ಲಿ ಗೋಡೌನ್ ಮಾಡಿ ಬಾಡಿಗೆ ಕೊಡುತ್ತೇನೆ ಎಂದು ವಂಚಿಸಿದ್ದ ಅರೋಪಿ ಅರೆಸ್ಟ್
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on:Jan 22, 2022 | 9:03 AM

Share

ಬೆಂಗಳೂರು: ಅಮೆಜಾನ್ (Amazon) ಗೋಡೌನ್ ಮಾಡಿ ಬಾಡಿಗೆ ಕೊಡುತ್ತೇನೆ ಎಂದು ವಂಚಿಸಿದ್ದ ಅರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ವಿ ಎಂಬಾತನನ್ನು ಈಶಾನ್ಯ ವಿಭಾಗದ ಸಿಇಎನ್ (CEN) ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ಅಂಗಡಿಗೆ ಬಂದು ಅಂಗಡಿಯ ಒಂದು ಭಾಗವನ್ನು ಗೋಡೌನ್ ಮಾಡುತ್ತೇವೆ, ಬಾಡಿಗೆಗೆ ಕೊಡಿ ಎಂದಿದ್ದ. ಬಳಿಕ ಅದಕ್ಕೆ ಆ್ಯಪ್ ಮೂಲಕ ಕೆವೈಸಿ ಮಾಡಬೇಕು ಎಂದು ಮಾಲೀಕರ ಮೊಬೈಲ್ ಪಡೆದಿದ್ದ. ಬಳಿಕ ಲೋನ್ (Loan) ಪಡೆಯುವ ಪೋಸ್ಟ್ ಪೇ ಎಂಬ ಆ್ಯಪ್ ಇನ್ಸ್ಟಾಲ್ ಮಾಡಿ ವಂಚಿಸಿದ್ದಾನೆ.

ಬಂಧಿತ ಆರೋಪಿ ಆ್ಯಪ್ ಮೂಲಕ ನಲವತ್ತು ಸಾವಿರ ಹಾಗು ಪೇಟಿಯಮ್ ಮೂಲಕ ಒಂಬತ್ತು ಸಾವಿರ ಸಾಲ ಪಡೆದು ಹಣ ವರ್ಗಾವಣೆ ಮಾಡಿಕೊಂಡಿದ್ದ. ಸಾಲ ಕಟ್ಟುವಂತೆ ನೋಟೀಸ್ ಬಂದಾಗ ಕೃತ್ಯ ಎಸಗಿರುವುದು ಬಯಲಿಗೆ ಬಂದಿದೆ. ಅರೋಪಿ ಅಮೆಜಾನ್ ಕಂಪನಿಯಲ್ಲಿ ಸೆಲ್ಲರ್ ಮತ್ತು ಬೋರ್ಡಿಂಗ್ ಎಕ್ಸಿಕ್ಯುಟಿವ್ ಅಗಿ ಕೆಲಸ ಮಾಡುತ್ತಿದ್ದ. ಕೆಲಸ ಮಾಡುತ್ತಿದ್ದ ಕಂಪನಿಯ ಹೆಸರಲ್ಲೆ ವಂಚನೆ ಮಾಡಿದ್ದು, ಸದ್ಯ ಅರೋಪಿಯನ್ನು ಬಂಧಿಸಿ, ಆತನ ಬಳಿಯಿದ್ದ ಮೂವತ್ತು ಸಾವಿರ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಕಲಿ ಮದ್ಯ ತಯಾರಿಸುತ್ತಿದ್ದ ಮನೆ ಮೇಲೆ ದಾಳಿ ನಕಲಿ ಮದ್ಯ ತಯಾರಿಸುತ್ತಿದ್ದ ಮನೆ ಮೇಲೆ ದಾಳಿ ನಡೆಸಿ, ಇಬ್ಬರನ್ನು ಬಂಧಿಸಲಾಗಿದೆ. ಮೈಸೂರು ತಾಲೂಕಿನ ಗೊರೂರು ಗ್ರಾಮದ ಬಳಿ ಬಂಧಿಸಲಾಗಿದ್ದು, ಮದ್ಯ ತಯಾರಿಕೆಗೆ ಬಳಸುತ್ತಿದ್ದ ಯಂತ್ರೋಪಕರಣ, ಸ್ಪಿರಿಟ್​ನ ಅರಣ್ಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆರೋಪಿಗಳು ತುಮಕೂರಿನಲ್ಲಿ ಕಡಿಮೆ ಬೆಲೆಗೆ ನಕಲಿ ಮದ್ಯ ಮಾರಾಟ ಮಾಡುತ್ತಿದ್ದರು. ನಕಲಿ ಮದ್ಯ ಸರಬರಾಜುದಾರ ನೀಡಿದ ಮಾಹಿತಿಯನ್ನು ಆಧರಿಸಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಅರಣ್ಯ ಅಧಿಕಾರಿಗಳು ನಕಲಿ ಮದ್ಯ ತಯಾರಿಸುತ್ತಿದ್ದ ಆರೋಪಿಗಳನ್ನ ಬಂಧಿಸಿ, ಯಂತ್ರೋಪಕರಣ, ಸ್ಪಿರಿಟ್​ನ  ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ

KL Rahul: ದಾಖಲೆಯ ಮೊತ್ತಕ್ಕೆ ಕೆಎಲ್ ರಾಹುಲ್​ರನ್ನು ಖರೀದಿಸಿದ ಲಖನೌ: ಹಾರ್ದಿಕ್ ಕೂಡ ಸೇಲ್

ಚಿತ್ರದುರ್ಗದಲ್ಲಿ ಬಲವಂತವಾಗಿ ಮತಾಂತರ ಮಾಡಿರುವ ಆರೋಪ! ಹೆಂಡತಿ, ಮಾವನ ವಿರುದ್ಧ ದೂರು ದಾಖಲು

Published On - 8:55 am, Sat, 22 January 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು