AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಐಬಿಎಂ ಕಂಪನಿಯ ನಕಲಿ ಜಾಬ್ ಲೆಟರ್ ನೀಡಿ ವಂಚಿಸುತ್ತಿದ್ದ ಆರೋಪಿ ಅರೆಸ್ಟ್!

ಆರೋಪಿ ಜಾಬ್ ಆಫರ್ ಬಗ್ಗೆ ಒಎಲ್ಎಕ್ಸ್​ನಲ್ಲಿ ಜಾಹಿರಾತು ನೀಡುತ್ತಿದ್ದ. ಸಂಪರ್ಕ ಮಾಡಿದವರಿಗೆ ಐಬಿಎಂನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸುತ್ತಿದ್ದ. ಬಳಿಕ ವಿವಿಧ ಅಕೌಂಟ್​ಗೆ ಹಣ ಹಾಕಿಸಿಕೊಳ್ಳುತ್ತಿದ್ದ.

ಬೆಂಗಳೂರು: ಐಬಿಎಂ ಕಂಪನಿಯ ನಕಲಿ ಜಾಬ್ ಲೆಟರ್ ನೀಡಿ ವಂಚಿಸುತ್ತಿದ್ದ ಆರೋಪಿ ಅರೆಸ್ಟ್!
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on:Jan 24, 2022 | 9:21 AM

Share

ಬೆಂಗಳೂರು: ಐಬಿಎಂ ಕಂಪನಿಯ ನಕಲಿ ಜಾಬ್ ಲೆಟರ್ (Job Letter) ನೀಡಿ ವಂಚಿಸುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಹಾರಾಷ್ಟ್ರ (Maharashtra) ಮೂಲದ ಸಂಜೀವ್ ಗಂಗರಾಮ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತ ಮಾನ್ಯತಾ ಟೆಕ್ ಪಾರ್ಕ್ನಲ್ಲಿರುವ ಐಬಿಎಂ ಕಂಪನಿಯಲ್ಲಿ (IBM Company) ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡುತ್ತಿದ್ದ. ಒಬ್ಬೊಬ್ಬರಿಂದ 15 ರಿಂದ 50 ಸಾವಿರದ ವರೆಗೆ ಹಣ ಪಡೆಯುತ್ತಿದ್ದ. ಇದುವರೆಗೆ ಸುಮಾರು 40 ಕ್ಕೂ ಹೆಚ್ಚು ಜನರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಐಬಿಎಂ ಹೆಚ್ಆರ್ ಅಭಿಜಿತ್ ರಾಯ್ ನೀಡಿರುವ ದೂರಿನ ಆಧಾರದ ಮೇಲೆ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಜಾಬ್ ಆಫರ್ ಬಗ್ಗೆ ಒಎಲ್ಎಕ್ಸ್​ನಲ್ಲಿ ಜಾಹಿರಾತು ನೀಡುತ್ತಿದ್ದ. ಸಂಪರ್ಕ ಮಾಡಿದವರಿಗೆ ಐಬಿಎಂನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸುತ್ತಿದ್ದ. ಬಳಿಕ ವಿವಿಧ ಅಕೌಂಟ್​ಗೆ ಹಣ ಹಾಕಿಸಿಕೊಳ್ಳುತ್ತಿದ್ದ. ನಂತರ ಐಬಿಎಂ ಹೆಸರು ಹಾಗೂ ಲೋಗೊ ಬಳಸಿಕೊಂಡು ಜಾಬ್ ಆಫರ್ ಲೆಟರ್ ಕಳಿಸುತ್ತಿದ್ದ. ಐಬಿಎಂ ಹೆಚ್ ಆರ್ ಪ್ರದೀಪ್ ಅವರನ್ನು ಭೇಟಿ ಮಾಡುವಂತೆ ತಿಳಿಸಿದ್ದ. ಈತನ ಮಾತು ನಂಬಿ ಐಬಿಎಂ ಕಂಪನಿಗೆ ಹೋದಾಗ ಅಸಲಿಯತ್ತು ಬಯಲಿಗೆ ಬಂದಿದೆ.

ಆರೋಪಿ ಹೇಳುತ್ತಿದ್ದ ಪ್ರದೀಪ್ ಎಂಬ ಹೆಸರಿನ ಹೆಚ್ ಆರ್ ಕಂಪನಿಯಲ್ಲಿ ಇಲ್ಲ. ಹೀಗಾಗಿ ಉದ್ಯೋಗಾಕಾಂಕ್ಷಿಗಳು ಮೋಸ ಹೋಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಸಂಪಿಗೆಹಳ್ಳಿ ಠಾಣೆಯಲ್ಲಿ ಐಬಿಎಂ ಹೆಚ್ ಆರ್ ಅಭಿಜಿತ್ ರಾಯ್ ದೂರು ದಾಖಲಿಸಿದ್ದರು. ದೂರಿನನ್ವಯ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಬಂಧನ ಕಲಬುರಗಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ನಜೀರ್ ಅಹ್ಮದ್, ರಾಮಲಿಂಗಪ್ಪ ಎಂಬುವವರನ್ನ ಬಂಧಿಸಿದ್ದು, ಬಂಧಿತರಿಂದ 6 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಬಂಧಿತರು ಕಲಬುರಗಿ ನಗರದ ನಿವಾಸಿಗಳು ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಸುಭಾಷ್​ ಚಂದ್ರ ಬೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ.ದಂಡ ವಿಧಿಸಿದ ಡಿಜಿಸಿಎ

ಗೋಕರ್ಣದಲ್ಲಿ ಅಡ್ಡಾದಿಡ್ಡಿ ಬೈಕ್ ಓಡಿಸಿ, ಪೊಲೀಸರ ಜೊತೆನೇ ಯುವತಿ, ಯುವಕ ರಂಪಾಟ

Published On - 9:14 am, Mon, 24 January 22

Follow Us
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ