AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಐಬಿಎಂ ಕಂಪನಿಯ ನಕಲಿ ಜಾಬ್ ಲೆಟರ್ ನೀಡಿ ವಂಚಿಸುತ್ತಿದ್ದ ಆರೋಪಿ ಅರೆಸ್ಟ್!

ಆರೋಪಿ ಜಾಬ್ ಆಫರ್ ಬಗ್ಗೆ ಒಎಲ್ಎಕ್ಸ್​ನಲ್ಲಿ ಜಾಹಿರಾತು ನೀಡುತ್ತಿದ್ದ. ಸಂಪರ್ಕ ಮಾಡಿದವರಿಗೆ ಐಬಿಎಂನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸುತ್ತಿದ್ದ. ಬಳಿಕ ವಿವಿಧ ಅಕೌಂಟ್​ಗೆ ಹಣ ಹಾಕಿಸಿಕೊಳ್ಳುತ್ತಿದ್ದ.

ಬೆಂಗಳೂರು: ಐಬಿಎಂ ಕಂಪನಿಯ ನಕಲಿ ಜಾಬ್ ಲೆಟರ್ ನೀಡಿ ವಂಚಿಸುತ್ತಿದ್ದ ಆರೋಪಿ ಅರೆಸ್ಟ್!
ಪ್ರಾತಿನಿಧಿಕ ಚಿತ್ರ
TV9 Web
| Updated By: sandhya thejappa|

Updated on:Jan 24, 2022 | 9:21 AM

Share

ಬೆಂಗಳೂರು: ಐಬಿಎಂ ಕಂಪನಿಯ ನಕಲಿ ಜಾಬ್ ಲೆಟರ್ (Job Letter) ನೀಡಿ ವಂಚಿಸುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಹಾರಾಷ್ಟ್ರ (Maharashtra) ಮೂಲದ ಸಂಜೀವ್ ಗಂಗರಾಮ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತ ಮಾನ್ಯತಾ ಟೆಕ್ ಪಾರ್ಕ್ನಲ್ಲಿರುವ ಐಬಿಎಂ ಕಂಪನಿಯಲ್ಲಿ (IBM Company) ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡುತ್ತಿದ್ದ. ಒಬ್ಬೊಬ್ಬರಿಂದ 15 ರಿಂದ 50 ಸಾವಿರದ ವರೆಗೆ ಹಣ ಪಡೆಯುತ್ತಿದ್ದ. ಇದುವರೆಗೆ ಸುಮಾರು 40 ಕ್ಕೂ ಹೆಚ್ಚು ಜನರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಐಬಿಎಂ ಹೆಚ್ಆರ್ ಅಭಿಜಿತ್ ರಾಯ್ ನೀಡಿರುವ ದೂರಿನ ಆಧಾರದ ಮೇಲೆ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಜಾಬ್ ಆಫರ್ ಬಗ್ಗೆ ಒಎಲ್ಎಕ್ಸ್​ನಲ್ಲಿ ಜಾಹಿರಾತು ನೀಡುತ್ತಿದ್ದ. ಸಂಪರ್ಕ ಮಾಡಿದವರಿಗೆ ಐಬಿಎಂನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸುತ್ತಿದ್ದ. ಬಳಿಕ ವಿವಿಧ ಅಕೌಂಟ್​ಗೆ ಹಣ ಹಾಕಿಸಿಕೊಳ್ಳುತ್ತಿದ್ದ. ನಂತರ ಐಬಿಎಂ ಹೆಸರು ಹಾಗೂ ಲೋಗೊ ಬಳಸಿಕೊಂಡು ಜಾಬ್ ಆಫರ್ ಲೆಟರ್ ಕಳಿಸುತ್ತಿದ್ದ. ಐಬಿಎಂ ಹೆಚ್ ಆರ್ ಪ್ರದೀಪ್ ಅವರನ್ನು ಭೇಟಿ ಮಾಡುವಂತೆ ತಿಳಿಸಿದ್ದ. ಈತನ ಮಾತು ನಂಬಿ ಐಬಿಎಂ ಕಂಪನಿಗೆ ಹೋದಾಗ ಅಸಲಿಯತ್ತು ಬಯಲಿಗೆ ಬಂದಿದೆ.

ಆರೋಪಿ ಹೇಳುತ್ತಿದ್ದ ಪ್ರದೀಪ್ ಎಂಬ ಹೆಸರಿನ ಹೆಚ್ ಆರ್ ಕಂಪನಿಯಲ್ಲಿ ಇಲ್ಲ. ಹೀಗಾಗಿ ಉದ್ಯೋಗಾಕಾಂಕ್ಷಿಗಳು ಮೋಸ ಹೋಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಸಂಪಿಗೆಹಳ್ಳಿ ಠಾಣೆಯಲ್ಲಿ ಐಬಿಎಂ ಹೆಚ್ ಆರ್ ಅಭಿಜಿತ್ ರಾಯ್ ದೂರು ದಾಖಲಿಸಿದ್ದರು. ದೂರಿನನ್ವಯ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಬಂಧನ ಕಲಬುರಗಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ನಜೀರ್ ಅಹ್ಮದ್, ರಾಮಲಿಂಗಪ್ಪ ಎಂಬುವವರನ್ನ ಬಂಧಿಸಿದ್ದು, ಬಂಧಿತರಿಂದ 6 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಬಂಧಿತರು ಕಲಬುರಗಿ ನಗರದ ನಿವಾಸಿಗಳು ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಸುಭಾಷ್​ ಚಂದ್ರ ಬೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ.ದಂಡ ವಿಧಿಸಿದ ಡಿಜಿಸಿಎ

ಗೋಕರ್ಣದಲ್ಲಿ ಅಡ್ಡಾದಿಡ್ಡಿ ಬೈಕ್ ಓಡಿಸಿ, ಪೊಲೀಸರ ಜೊತೆನೇ ಯುವತಿ, ಯುವಕ ರಂಪಾಟ

Published On - 9:14 am, Mon, 24 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ