AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನ್ಯಾಪ್ ಮಾಡಿ 20 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳು ಅರೆಸ್ಟ್!

ಬಂಧಿತ ಆರೋಪಿಗಳು ಸಾಯಿ ಫುಡ್ ಪ್ರೈವೇಟ್ ಲಿಮಿಟೆಡ್​ನ ಒಂದು ವಾಹನ ಹಾಗು ಇಬ್ಬರು ನೌಕರರನ್ನು ಕಿಡ್ನ್ಯಾಪ್ ಮಾಡಿದ್ದರು. ಸಾಯಿ ಫುಡ್ ವಾಹನವನ್ನು ಅಡ್ಡಹಾಕಿ ಲೋನ್ ಕಟ್ಟಬೇಕು ಅಂತ ಹೇಳಿ ಇಬ್ಬರು ಸಿಬ್ಬಂದಿಯನ್ನ ಕರೆದುಕೊಂಡು ಹೋಗುತ್ತಾರೆ.

ಕಿಡ್ನ್ಯಾಪ್ ಮಾಡಿ 20 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳು ಅರೆಸ್ಟ್!
ಬಂಧಿತ ಆರೋಪಿಗಳು
TV9 Web
| Updated By: sandhya thejappa|

Updated on: Aug 26, 2021 | 11:10 AM

Share

ಬೆಂಗಳೂರು: ಕಿಡ್ನ್ಯಾಪ್ (Kidnap) ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯೂಟ್ಯೂಬ್ ಚಾನಲ್​ವೊಂದರ ವರದಿಗಾರ ಸಂತೋಷ್, ರೌಡಿಶೀಟರ್ ಕುಳ್ಳ ರಮೇಶ್, ದುರ್ಗೇಶ್, ಹರೀಶ್, ವಿವೇಕ್, ಅರವಿಂದ್ ಬಂಧಿತ ಆರೋಪಿಗಳು. ಲೋನ್ ಕಟ್ಟಬೇಕು ಅಂತ ಹೇಳಿ ಇಬ್ಬರನ್ನು ಕಿಡ್ನ್ಯಾಪ್ ಮಾಡಿದ್ದ ಅರೋಪಿಗಳು ಸುಮಾರು ಇಪ್ಪತ್ತು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಸದ್ಯ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಸಾಯಿ ಫುಡ್ ಪ್ರೈವೇಟ್ ಲಿಮಿಟೆಡ್​ನ ಒಂದು ವಾಹನ ಹಾಗು ಇಬ್ಬರು ನೌಕರರನ್ನು ಕಿಡ್ನ್ಯಾಪ್ ಮಾಡಿದ್ದರು. ಸಾಯಿ ಫುಡ್ ವಾಹನವನ್ನು ಅಡ್ಡಹಾಕಿ ಲೋನ್ ಕಟ್ಟಬೇಕು ಅಂತ ಹೇಳಿ ಇಬ್ಬರು ಸಿಬ್ಬಂದಿಯನ್ನ ಕರೆದುಕೊಂಡು ಹೋಗುತ್ತಾರೆ. ನಂತರ ಕಂಪನಿ ಮಾಲೀಕ ಶ್ರೀನಿವಾಸ್ಗೆ ಹಣ ಕೊಡಿ. ಇಲ್ಲದಿದ್ದರೆ ವಾಹನ ಹಾಗು ನೌಕರರನ್ನು ಬಿಡುವುದಿಲ್ಲ ಅಂತ ಹೆದರಿಸುತ್ತಾರೆ. ಗಾಬರಿಯಾಗಿದ್ದ ಮಾಲೀಕ ಶ್ರೀನಿವಾಸ್ ಮಹಾಲಕ್ಷ್ಮಿ ಲೇಔಟ್ ಪೊಲೀಸರಿಗೆ ದೂರು ನೀಡಿದರು.

ಪೊಲೀಸರಿಗೆ ದೂರು ನೀಡಿರುವುದು ತಿಳಿಯುತ್ತಿದ್ದಂತೆ ಮೆಜೆಸ್ಟಿಕ್ ಬಳಿ ಸಿಬ್ಬಂದಿಯನ್ನು ಬಿಟ್ಟು ಆರೋಪಿಗಳು ಪರಾರಿಯಾಗುತ್ತಾರೆ. ಆದರೆ ಎಸ್ಕೇಪ್ ಆಗಿದ್ದ ಆರೋಪಿಗಳನ್ನು ಖಾಕಿಪಡೆ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿಸಿದ ಬಳಿಕ ಕೆಲ ಮಾಹಿತಿಗಳು ಬಯಲಿಗೆ ಬಂದಿದೆ. ಅರೋಪಿಗಳು ಮೊದಲು ಮಾಡಿದ್ದ ಪ್ಲಾನ್ ಬೇರೆ, ಆಗಿದ್ದೆ ಬೇರೆಯಾಗಿತ್ತು. ಫುಡ್ ಕಂಪನಿಗೆ ಬ್ಲ್ಯಾಕ್​ಮೇಲ್​ ಮಾಡುವುದಕ್ಕೆ ಮೊದಲು ಪ್ಲ್ಯಾನ್ ಮಾಡಿದ್ದರು. ಅವಧಿ ಮುಗಿದ ಆಹಾರ ಪದಾರ್ಥವನ್ನು ಮಾರಾಟ ಮಾಡುತ್ತೀರಾ ಅಂತ ಆರೋಪಿಸಿ ಫುಡ್ ಕಂಪನಿ ಮಾಲೀಕನಿಗೆ ಬೆದರಿಸಲು ಯೋಚಿಸಿದ್ದರು. ಆದರೆ ಇದು ಸಾಧ್ಯವಾಗದ ಕಾರಣ ಕಿಡ್ನ್ಯಾಪ್ ಮಾಡಿದ್ದಾರೆ ಅಂತ ತಿಳಿದುಬಂದಿದೆ.

ಇದನ್ನೂ ಓದಿ

ಜಮೀನಿನ ಬೌಂಡರಿ ಲೈನ್​ ಫಿಕ್ಸ್ ಮಾಡಲು 70 ಲಕ್ಷ ಲಂಚಕ್ಕೆ ಬೇಡಿಕೆ: ಎಸಿಬಿ ದಾಳಿ, ಹಿರಿಯ ರೆವೆನ್ಯೂ ಅಧಿಕಾರಿ ಅರೆಸ್ಟ್​

ಕತ್ತು ಕುಯ್ದು, ಸಿಕ್ಕಸಿಕ್ಕಲ್ಲೆಲ್ಲಾ ಚಾಕುವಿನಿಂದ ಚುಚ್ಚಿ ಹತ್ಯೆಗೈದ ಕಿರಾತಕರು; ಕುರಿಕೋಟಾ ಸೇತುವೆ ಬಳಿ ಗುರುತು ಸಿಗದ ಶವ ಪತ್ತೆ

(Police have arrested the accused for kidnapping and demanding Rs 20 lakh in Bengaluru)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ