AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನ್ಯಾಪ್ ಮಾಡಿ 20 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳು ಅರೆಸ್ಟ್!

ಬಂಧಿತ ಆರೋಪಿಗಳು ಸಾಯಿ ಫುಡ್ ಪ್ರೈವೇಟ್ ಲಿಮಿಟೆಡ್​ನ ಒಂದು ವಾಹನ ಹಾಗು ಇಬ್ಬರು ನೌಕರರನ್ನು ಕಿಡ್ನ್ಯಾಪ್ ಮಾಡಿದ್ದರು. ಸಾಯಿ ಫುಡ್ ವಾಹನವನ್ನು ಅಡ್ಡಹಾಕಿ ಲೋನ್ ಕಟ್ಟಬೇಕು ಅಂತ ಹೇಳಿ ಇಬ್ಬರು ಸಿಬ್ಬಂದಿಯನ್ನ ಕರೆದುಕೊಂಡು ಹೋಗುತ್ತಾರೆ.

ಕಿಡ್ನ್ಯಾಪ್ ಮಾಡಿ 20 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳು ಅರೆಸ್ಟ್!
ಬಂಧಿತ ಆರೋಪಿಗಳು
TV9 Web
| Edited By: |

Updated on: Aug 26, 2021 | 11:10 AM

Share

ಬೆಂಗಳೂರು: ಕಿಡ್ನ್ಯಾಪ್ (Kidnap) ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯೂಟ್ಯೂಬ್ ಚಾನಲ್​ವೊಂದರ ವರದಿಗಾರ ಸಂತೋಷ್, ರೌಡಿಶೀಟರ್ ಕುಳ್ಳ ರಮೇಶ್, ದುರ್ಗೇಶ್, ಹರೀಶ್, ವಿವೇಕ್, ಅರವಿಂದ್ ಬಂಧಿತ ಆರೋಪಿಗಳು. ಲೋನ್ ಕಟ್ಟಬೇಕು ಅಂತ ಹೇಳಿ ಇಬ್ಬರನ್ನು ಕಿಡ್ನ್ಯಾಪ್ ಮಾಡಿದ್ದ ಅರೋಪಿಗಳು ಸುಮಾರು ಇಪ್ಪತ್ತು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಸದ್ಯ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಸಾಯಿ ಫುಡ್ ಪ್ರೈವೇಟ್ ಲಿಮಿಟೆಡ್​ನ ಒಂದು ವಾಹನ ಹಾಗು ಇಬ್ಬರು ನೌಕರರನ್ನು ಕಿಡ್ನ್ಯಾಪ್ ಮಾಡಿದ್ದರು. ಸಾಯಿ ಫುಡ್ ವಾಹನವನ್ನು ಅಡ್ಡಹಾಕಿ ಲೋನ್ ಕಟ್ಟಬೇಕು ಅಂತ ಹೇಳಿ ಇಬ್ಬರು ಸಿಬ್ಬಂದಿಯನ್ನ ಕರೆದುಕೊಂಡು ಹೋಗುತ್ತಾರೆ. ನಂತರ ಕಂಪನಿ ಮಾಲೀಕ ಶ್ರೀನಿವಾಸ್ಗೆ ಹಣ ಕೊಡಿ. ಇಲ್ಲದಿದ್ದರೆ ವಾಹನ ಹಾಗು ನೌಕರರನ್ನು ಬಿಡುವುದಿಲ್ಲ ಅಂತ ಹೆದರಿಸುತ್ತಾರೆ. ಗಾಬರಿಯಾಗಿದ್ದ ಮಾಲೀಕ ಶ್ರೀನಿವಾಸ್ ಮಹಾಲಕ್ಷ್ಮಿ ಲೇಔಟ್ ಪೊಲೀಸರಿಗೆ ದೂರು ನೀಡಿದರು.

ಪೊಲೀಸರಿಗೆ ದೂರು ನೀಡಿರುವುದು ತಿಳಿಯುತ್ತಿದ್ದಂತೆ ಮೆಜೆಸ್ಟಿಕ್ ಬಳಿ ಸಿಬ್ಬಂದಿಯನ್ನು ಬಿಟ್ಟು ಆರೋಪಿಗಳು ಪರಾರಿಯಾಗುತ್ತಾರೆ. ಆದರೆ ಎಸ್ಕೇಪ್ ಆಗಿದ್ದ ಆರೋಪಿಗಳನ್ನು ಖಾಕಿಪಡೆ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿಸಿದ ಬಳಿಕ ಕೆಲ ಮಾಹಿತಿಗಳು ಬಯಲಿಗೆ ಬಂದಿದೆ. ಅರೋಪಿಗಳು ಮೊದಲು ಮಾಡಿದ್ದ ಪ್ಲಾನ್ ಬೇರೆ, ಆಗಿದ್ದೆ ಬೇರೆಯಾಗಿತ್ತು. ಫುಡ್ ಕಂಪನಿಗೆ ಬ್ಲ್ಯಾಕ್​ಮೇಲ್​ ಮಾಡುವುದಕ್ಕೆ ಮೊದಲು ಪ್ಲ್ಯಾನ್ ಮಾಡಿದ್ದರು. ಅವಧಿ ಮುಗಿದ ಆಹಾರ ಪದಾರ್ಥವನ್ನು ಮಾರಾಟ ಮಾಡುತ್ತೀರಾ ಅಂತ ಆರೋಪಿಸಿ ಫುಡ್ ಕಂಪನಿ ಮಾಲೀಕನಿಗೆ ಬೆದರಿಸಲು ಯೋಚಿಸಿದ್ದರು. ಆದರೆ ಇದು ಸಾಧ್ಯವಾಗದ ಕಾರಣ ಕಿಡ್ನ್ಯಾಪ್ ಮಾಡಿದ್ದಾರೆ ಅಂತ ತಿಳಿದುಬಂದಿದೆ.

ಇದನ್ನೂ ಓದಿ

ಜಮೀನಿನ ಬೌಂಡರಿ ಲೈನ್​ ಫಿಕ್ಸ್ ಮಾಡಲು 70 ಲಕ್ಷ ಲಂಚಕ್ಕೆ ಬೇಡಿಕೆ: ಎಸಿಬಿ ದಾಳಿ, ಹಿರಿಯ ರೆವೆನ್ಯೂ ಅಧಿಕಾರಿ ಅರೆಸ್ಟ್​

ಕತ್ತು ಕುಯ್ದು, ಸಿಕ್ಕಸಿಕ್ಕಲ್ಲೆಲ್ಲಾ ಚಾಕುವಿನಿಂದ ಚುಚ್ಚಿ ಹತ್ಯೆಗೈದ ಕಿರಾತಕರು; ಕುರಿಕೋಟಾ ಸೇತುವೆ ಬಳಿ ಗುರುತು ಸಿಗದ ಶವ ಪತ್ತೆ

(Police have arrested the accused for kidnapping and demanding Rs 20 lakh in Bengaluru)

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್