AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಲಕ್ಷಕ್ಕೆ ಬೇಡಿಕೆಯಿಟ್ಟು ಪೊಲೀಸರ ಸೋಗಿನಲ್ಲಿ ಉದ್ಯಮಿಯನ್ನ ಕಿಡ್ನಾಪ್ ಮಾಡಿದ್ದ ಮೂವರು ಬಂಧನ

ಪೊಲೀಸರ ಸೋಗಿನಲ್ಲಿ ಬಂದಿದ್ದ ಆರೋಪಿಗಳು ಚಿನ್ನದ ವ್ಯಾಪಾರದಲ್ಲಿ ಅವ್ಯವಹಾರ ಮಾಡಿದ್ದೀರಾ ಎಂದು ಬೆದರಿಸಿದ್ದರು. ಆ ಬಳಿಕ ಕೋರಮಂಗಲದ ರೂಂನಲ್ಲಿಟ್ಟು 10 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು.

10 ಲಕ್ಷಕ್ಕೆ ಬೇಡಿಕೆಯಿಟ್ಟು ಪೊಲೀಸರ ಸೋಗಿನಲ್ಲಿ ಉದ್ಯಮಿಯನ್ನ ಕಿಡ್ನಾಪ್ ಮಾಡಿದ್ದ ಮೂವರು ಬಂಧನ
ಬಂಧಿತ ಆರೋಪಿಗಳು
TV9 Web
| Edited By: sandhya thejappa|

Updated on: Aug 10, 2021 | 11:41 AM

Share

ಬೆಂಗಳೂರು: ಹಣಕ್ಕಾಗಿ ಉದ್ಯಮಿಯನ್ನ ಅಪಹರಿಸಿದ್ದ ಮೂವರನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ. ನದೀಮ್ ಶರೀಫ್, ಸಂತೋಷ್, ಅಜರ್ ಬಂಧಿತ ಆರೋಪಿಗಳು. ಜುಲೈ 7ರಂದು ಉದ್ಯಮಿ ದಿವಾಕರ್ ರೆಡ್ಡಿಯನ್ನು ಅಪಹರಿಸಿದ್ದರು (Kidnap). ಪೊಲೀಸರ ಸೋಗಿನಲ್ಲಿ ಬಂದಿದ್ದ ಆರೋಪಿಗಳು ಚಿನ್ನದ ವ್ಯಾಪಾರದಲ್ಲಿ ಅವ್ಯವಹಾರ ಮಾಡಿದ್ದೀರಾ ಎಂದು ಬೆದರಿಸಿದ್ದರು. ಆ ಬಳಿಕ ಕೋರಮಂಗಲದ ರೂಂನಲ್ಲಿಟ್ಟು 10 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು. ದಿವಾಕರ್ ಸ್ನೇಹಿತ ಹಲಸೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮದ್ಯದ ನಶೆಯಲ್ಲಿ ಲಾರಿ ಚಾಲನೆ; 3-4 ವಾಹನ ಜಖಂ ದಾವಣಗೆರೆ: ಮದ್ಯದ ನಶೆಯಲ್ಲಿ ಚಾಲಕನೊಬ್ಬ ಲಾರಿ ಓಡಿಸಿದ್ದಾನೆ. ಈ ವೇಳೆ ಮೂರರಿಂದ ನಾಲ್ಕು ವಾಹನಗಳು ಜಖಂ ಆಗಿವೆ. ದಾವಣಗೆರೆ ತಾಲೂಕಿನ ಹದಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಂಠಪೂರ್ತಿ ಕುಡಿದು ಮನೆಗಳ ಒಳಗೆ ಲಾರಿ ನುಗ್ಗಿಸಿದ್ದಾನೆ. ಲಾರಿ ದಾವಣಗೆರೆಯಿಂದ ಚನ್ನಗಿರಿ ಕಡೆಗೆ ಹೊರಟ್ಟಿತ್ತು. ಲಾರಿ ಚಾಲಕನ ಅವಾಂತರಕ್ಕೆ ಓಮಿನಿ ಸೇರಿ ಮೂರ್ನಾಲ್ಕು ವಾಹನ ಜಖಂ ಆಗಿವೆ. ಹದಡಿ ಠಾಣೆ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿದ್ದಾರೆ.

ಪಾರಿವಾಳ ಹಿಡಿಯಲು ಹೋಗಿದ್ದ ಯುವಕ ಸಾವು ಪಾರಿವಾಳ ಹಿಡಿಯಲು ಹೋಗಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನ ವಿನಾಯಕ ಲೇಔಟ್​ನಲ್ಲಿ ನಡೆದಿದೆ. 19 ವರ್ಷದ ಫಾರೂಕ್ ಮೃತ ದುರ್ದೈವಿ. ಪಾರಿವಾಳ ಹಿಡಿಯುವ ಅಭ್ಯಾಸ ಹೊಂದಿದ್ದ ಯುವಕ 4 ಮಹಡಿಯ ಕಟ್ಟಡದಿಂದ ಬಿದ್ದು ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ಸಂಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ

ಚಿತ್ರೀಕರಣ ವೇಳೆ ನಿಯಮಗಳನ್ನು ಪಾಲಿಸುತ್ತಿಲ್ಲ, ಕಠಿಣ ನಿಯಮಗಳನ್ನು ಜಾರಿ ಮಾಡಿ ಶೀಘ್ರದಲ್ಲೇ ಆದೇಶ; ಸಿಎಂ ಬಸವರಾಜ ಬೊಮ್ಮಾಯಿ

ಸಂಜಯನಗರದಲ್ಲಿ ಪಾರಿವಾಳ ಹಿಡಿಯಲು ಹೋದ ಯುವಕ ನಾಲ್ಕನೇ ಮಹಡಿಯಿಂದ ಬಿದ್ದು ಸಾವು

(Police have arrested three persons who abducted a businessman demanding Rs 10 lakh)

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!