AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಬೈಕ​ನ್ನೇ ಕದ್ದ ಕಳ್ಳ, ತಡರಾತ್ರಿ ನಡೆದ ಕೊಲೆ ಪ್ರಕರಣದ 5 ಆರೋಪಿಗಳು ಅರೆಸ್ಟ್

ಖದೀಮನ ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಕೆಎಸ್​ಆರ್​​ಪಿ 4ನೇ ಬೇಟಾಲಿಯನ್ ಹೆಡ್ ಕಾನ್ಸ್‌ಟೇಬಲ್ ಆಗಿರುವ ಉಮೇಶ್ ಬೈಕ್ ಕಳವಾಗಿದೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿಕೊಂಡು ಖದೀಮನಿಗೆ ಬಲೆ ಬೀಸಿದ್ದಾರೆ.

Bengaluru Crime: ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಬೈಕ​ನ್ನೇ ಕದ್ದ ಕಳ್ಳ, ತಡರಾತ್ರಿ ನಡೆದ ಕೊಲೆ ಪ್ರಕರಣದ 5 ಆರೋಪಿಗಳು ಅರೆಸ್ಟ್
ಕೊಲೆ ಪ್ರಕರಣದ ಆರೋಪಿಗಳಾದ ಸೈಯದ್ ಮೋಹಿನ್ ಮತ್ತು ಅದ್ನಾನ್ ಖಾನ್
TV9 Web
| Edited By: |

Updated on:Mar 09, 2022 | 10:03 AM

Share

ಬೆಂಗಳೂರು: ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಉಮೇಶ್ ಎಂಬವರ ಬೈಕ್​ನ್ನೇ ಕಳ್ಳನೊಬ್ಬ ಕದ್ದು ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಇಲ್ಲಿನ ಕೋರಮಂಗಲದ ಮಹಾರಾಜ ಸಿಗ್ನಲ್ ಬಳಿ ಫೆಬ್ರವರಿ 9 ರಂದು ಘಟನೆ ನಡೆದಿದೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪೊಲೀಸ್ ಕಾನ್ಸ್​ಟೇಬಲ್ ಬ್ಯಾಂಕ್​ಗೆ ಹೋಗಿ ಬರುವಷ್ಟರಲ್ಲಿ ಖದೀಮ ಕೈಚಳಕ ತೋರಿಸಿದ್ದಾನೆ. ಕೋರಮಂಗಲದ ಮಹಾರಾಜ ಸಿಗ್ನಲ್ ಬ್ಯಾಂಕ್ ಮುಂದೆ ಘಟನೆ ನಡೆದಿದೆ. ಖದೀಮನ ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಕೆಎಸ್​ಆರ್​​ಪಿ 4ನೇ ಬೇಟಾಲಿಯನ್ ಹೆಡ್ ಕಾನ್ಸ್‌ಟೇಬಲ್ ಆಗಿರುವ ಉಮೇಶ್ ಬೈಕ್ ಕಳವಾಗಿದೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿಕೊಂಡು ಖದೀಮನಿಗೆ ಬಲೆ ಬೀಸಿದ್ದಾರೆ.

ಇತ್ತ ಹುಳಿಮಾವು ಪೊಲೀಸರಿಂದ 8 ಕೋಟಿ ಮೌಲ್ಯದ ಹ್ಯಾಶಿಶ್ ಆಯಿಲ್, ಗಾಂಜಾ ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮತ್ತಷ್ಟು ಮಾಹಿತಿ ಲಭಿಸಿದೆ. 12 ಲೀಟರ್ 940 ಗ್ರಾಂ ಹ್ಯಾಶಿಶ್ ಆಯಿಲ್, 26 ಕೆಜಿ 250 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದ ಪೊಲೀಸರಿಗೆ ಆರೋಪಿಗಳ ಮೊಬೈಲ್​​ನಲ್ಲಿ ಕೆಲವಷ್ಟು ವಿಡಿಯೋಗಳು ಲಭಿಸಿವೆ. ಮೊಬೈಲ್ ನಲ್ಲಿ ಮತ್ತೇರಿಸಕೊಳ್ತಿರೊ ವಿಡಿಯೋ ಸಿಕ್ಕಿದ್ದು ಆರೋಪಿಗಳು ಮೊಬೈಲ್ ಮೇಲೆ ಡ್ರಗ್ಸ್ ಹಾಕಿ ಮೂಗಿನ‌ ಮೂಲಕ ಎಳೆದುಕೊಳ್ಳುತ್ತಿರುವುದು ಕಂಡುಬಂದಿದೆ. ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಡ್ರಗ್ಸ್ ದಂಧೆ ನಡೆಸುತ್ತಿದ್ದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಮಹಮ್ಮದ್ ಉಸ್ಮಾನ್ ಕೊಲೆ ಪ್ರಕರಣ; ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನಲ್ಲಿ ತಡರಾತ್ರಿ ವ್ಯಕ್ತಿಯೊಬ್ಬನ ಕೊಲೆ ನಡೆದಿದೆ. ಬೆಂಗಳೂರಿನ ಪುಲಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೆಜಿ ಹಳ್ಳಿ ನಿವಾಸಿ ಮಹಮ್ಮದ್ ಉಸ್ಮಾನ್ ಕೊಲೆಯಾಗಿರುವ ವ್ಯಕ್ತಿ. ರಾತ್ರಿ ಹನ್ನೊಂದು ಗಂಟೆ ಸಮಯದಲ್ಲಿ ಮೋಹಿನ್ ಮತ್ತು ಉಸ್ಮಾನ್ ಎಂಬವರ ನಡುವೆ ಗಲಾಟೆ ನಡೆದಿತ್ತು. ಬಳಿಕ ಶಿವಾಜಿ ನಗರದಿಂದ ಅರೋಪಿಗಳು ಹುಡುಗರನ್ನು ಕರೆಸಿದ್ದರು. ಹುಡುಗಿ ವಿಚಾರಕ್ಕೆ ಇಬ್ಬರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.

Bengaluru Police

ಆರೋಪಿಗಳನ್ನು ಯಶಸ್ವಿಯಾಗಿ ಬಂಧಿಸಿದ ಪೊಲೀಸರು. ಪಿಎಸ್​ಐ ರುಮಾನ್ ಹಾಗೂ ಪಿಎಸ್​ಐ ಆನಂದ್

ರಾತ್ರಿ ಹನ್ನೊಂದು ಮೂವತ್ತಕ್ಕೆ ಪುಲಕೇಶಿ ನಗರದ ಡೌನ್​ಟೌನ್ ಬಳಿ ಕೊಲೆ ನಡೆದಿದೆ. ಬೆಳಗಿನ ಜಾವ ಕೊಲೆ ಅರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೂ ಆರೋಪಿ ಅಟ್ಯಾಕ್ ಮಾಡಲು ಯತ್ನಿಸಿದ್ದ. ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಸೂಚಿಸಿದ್ದರು. ಆಗಲೂ ಹಲ್ಲೆಗೆ ಮುಂದಾದ ಆರೋಪಿಗಳಾದ ಸೈಯದ್ ಮೋಹಿನ್ ಮತ್ತು ಅದ್ನಾನ್ ಖಾನ್ ಕಾಲುಗಳಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡಲಾಗಿದೆ. ಬಳಿಕ ಉಳಿದ ಮೂರು ಅರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Crime News: ಬೆಂಗಳೂರಿನಲ್ಲಿ ಮುಂಬೈನ ಗ್ಯಾಂಗ್​ಸ್ಟರ್ ಬಂಧನ, ಮೈಸೂರು ದೇವು ಹತ್ಯೆ ಪ್ರಕರಣದ 11 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಇದನ್ನೂ ಓದಿ: Bengaluru Crime: ಹಣ, ಚಿನ್ನ ಮುಟ್ಟದೆ ಕೇವಲ ಲ್ಯಾಪ್​ಟಾಪ್, ಮೊಬೈಲ್ ಕದಿಯುವ ಡಿಫರೆಂಟ್ ಕಳ್ಳ ಪೊಲೀಸರ ಬಲೆಗೆ!

Published On - 8:39 am, Wed, 9 March 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ