AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಬೈಕ​ನ್ನೇ ಕದ್ದ ಕಳ್ಳ, ತಡರಾತ್ರಿ ನಡೆದ ಕೊಲೆ ಪ್ರಕರಣದ 5 ಆರೋಪಿಗಳು ಅರೆಸ್ಟ್

ಖದೀಮನ ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಕೆಎಸ್​ಆರ್​​ಪಿ 4ನೇ ಬೇಟಾಲಿಯನ್ ಹೆಡ್ ಕಾನ್ಸ್‌ಟೇಬಲ್ ಆಗಿರುವ ಉಮೇಶ್ ಬೈಕ್ ಕಳವಾಗಿದೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿಕೊಂಡು ಖದೀಮನಿಗೆ ಬಲೆ ಬೀಸಿದ್ದಾರೆ.

Bengaluru Crime: ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಬೈಕ​ನ್ನೇ ಕದ್ದ ಕಳ್ಳ, ತಡರಾತ್ರಿ ನಡೆದ ಕೊಲೆ ಪ್ರಕರಣದ 5 ಆರೋಪಿಗಳು ಅರೆಸ್ಟ್
ಕೊಲೆ ಪ್ರಕರಣದ ಆರೋಪಿಗಳಾದ ಸೈಯದ್ ಮೋಹಿನ್ ಮತ್ತು ಅದ್ನಾನ್ ಖಾನ್
TV9 Web
| Updated By: ganapathi bhat|

Updated on:Mar 09, 2022 | 10:03 AM

Share

ಬೆಂಗಳೂರು: ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಉಮೇಶ್ ಎಂಬವರ ಬೈಕ್​ನ್ನೇ ಕಳ್ಳನೊಬ್ಬ ಕದ್ದು ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಇಲ್ಲಿನ ಕೋರಮಂಗಲದ ಮಹಾರಾಜ ಸಿಗ್ನಲ್ ಬಳಿ ಫೆಬ್ರವರಿ 9 ರಂದು ಘಟನೆ ನಡೆದಿದೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪೊಲೀಸ್ ಕಾನ್ಸ್​ಟೇಬಲ್ ಬ್ಯಾಂಕ್​ಗೆ ಹೋಗಿ ಬರುವಷ್ಟರಲ್ಲಿ ಖದೀಮ ಕೈಚಳಕ ತೋರಿಸಿದ್ದಾನೆ. ಕೋರಮಂಗಲದ ಮಹಾರಾಜ ಸಿಗ್ನಲ್ ಬ್ಯಾಂಕ್ ಮುಂದೆ ಘಟನೆ ನಡೆದಿದೆ. ಖದೀಮನ ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಕೆಎಸ್​ಆರ್​​ಪಿ 4ನೇ ಬೇಟಾಲಿಯನ್ ಹೆಡ್ ಕಾನ್ಸ್‌ಟೇಬಲ್ ಆಗಿರುವ ಉಮೇಶ್ ಬೈಕ್ ಕಳವಾಗಿದೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿಕೊಂಡು ಖದೀಮನಿಗೆ ಬಲೆ ಬೀಸಿದ್ದಾರೆ.

ಇತ್ತ ಹುಳಿಮಾವು ಪೊಲೀಸರಿಂದ 8 ಕೋಟಿ ಮೌಲ್ಯದ ಹ್ಯಾಶಿಶ್ ಆಯಿಲ್, ಗಾಂಜಾ ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮತ್ತಷ್ಟು ಮಾಹಿತಿ ಲಭಿಸಿದೆ. 12 ಲೀಟರ್ 940 ಗ್ರಾಂ ಹ್ಯಾಶಿಶ್ ಆಯಿಲ್, 26 ಕೆಜಿ 250 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದ ಪೊಲೀಸರಿಗೆ ಆರೋಪಿಗಳ ಮೊಬೈಲ್​​ನಲ್ಲಿ ಕೆಲವಷ್ಟು ವಿಡಿಯೋಗಳು ಲಭಿಸಿವೆ. ಮೊಬೈಲ್ ನಲ್ಲಿ ಮತ್ತೇರಿಸಕೊಳ್ತಿರೊ ವಿಡಿಯೋ ಸಿಕ್ಕಿದ್ದು ಆರೋಪಿಗಳು ಮೊಬೈಲ್ ಮೇಲೆ ಡ್ರಗ್ಸ್ ಹಾಕಿ ಮೂಗಿನ‌ ಮೂಲಕ ಎಳೆದುಕೊಳ್ಳುತ್ತಿರುವುದು ಕಂಡುಬಂದಿದೆ. ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಡ್ರಗ್ಸ್ ದಂಧೆ ನಡೆಸುತ್ತಿದ್ದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಮಹಮ್ಮದ್ ಉಸ್ಮಾನ್ ಕೊಲೆ ಪ್ರಕರಣ; ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನಲ್ಲಿ ತಡರಾತ್ರಿ ವ್ಯಕ್ತಿಯೊಬ್ಬನ ಕೊಲೆ ನಡೆದಿದೆ. ಬೆಂಗಳೂರಿನ ಪುಲಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೆಜಿ ಹಳ್ಳಿ ನಿವಾಸಿ ಮಹಮ್ಮದ್ ಉಸ್ಮಾನ್ ಕೊಲೆಯಾಗಿರುವ ವ್ಯಕ್ತಿ. ರಾತ್ರಿ ಹನ್ನೊಂದು ಗಂಟೆ ಸಮಯದಲ್ಲಿ ಮೋಹಿನ್ ಮತ್ತು ಉಸ್ಮಾನ್ ಎಂಬವರ ನಡುವೆ ಗಲಾಟೆ ನಡೆದಿತ್ತು. ಬಳಿಕ ಶಿವಾಜಿ ನಗರದಿಂದ ಅರೋಪಿಗಳು ಹುಡುಗರನ್ನು ಕರೆಸಿದ್ದರು. ಹುಡುಗಿ ವಿಚಾರಕ್ಕೆ ಇಬ್ಬರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.

Bengaluru Police

ಆರೋಪಿಗಳನ್ನು ಯಶಸ್ವಿಯಾಗಿ ಬಂಧಿಸಿದ ಪೊಲೀಸರು. ಪಿಎಸ್​ಐ ರುಮಾನ್ ಹಾಗೂ ಪಿಎಸ್​ಐ ಆನಂದ್

ರಾತ್ರಿ ಹನ್ನೊಂದು ಮೂವತ್ತಕ್ಕೆ ಪುಲಕೇಶಿ ನಗರದ ಡೌನ್​ಟೌನ್ ಬಳಿ ಕೊಲೆ ನಡೆದಿದೆ. ಬೆಳಗಿನ ಜಾವ ಕೊಲೆ ಅರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೂ ಆರೋಪಿ ಅಟ್ಯಾಕ್ ಮಾಡಲು ಯತ್ನಿಸಿದ್ದ. ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಸೂಚಿಸಿದ್ದರು. ಆಗಲೂ ಹಲ್ಲೆಗೆ ಮುಂದಾದ ಆರೋಪಿಗಳಾದ ಸೈಯದ್ ಮೋಹಿನ್ ಮತ್ತು ಅದ್ನಾನ್ ಖಾನ್ ಕಾಲುಗಳಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡಲಾಗಿದೆ. ಬಳಿಕ ಉಳಿದ ಮೂರು ಅರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Crime News: ಬೆಂಗಳೂರಿನಲ್ಲಿ ಮುಂಬೈನ ಗ್ಯಾಂಗ್​ಸ್ಟರ್ ಬಂಧನ, ಮೈಸೂರು ದೇವು ಹತ್ಯೆ ಪ್ರಕರಣದ 11 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಇದನ್ನೂ ಓದಿ: Bengaluru Crime: ಹಣ, ಚಿನ್ನ ಮುಟ್ಟದೆ ಕೇವಲ ಲ್ಯಾಪ್​ಟಾಪ್, ಮೊಬೈಲ್ ಕದಿಯುವ ಡಿಫರೆಂಟ್ ಕಳ್ಳ ಪೊಲೀಸರ ಬಲೆಗೆ!

Published On - 8:39 am, Wed, 9 March 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!