AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹೊಸವರ್ಷ ಆಚರಣೆಗೆ ಬ್ರೇಕ್​: ಗಲ್ಲಿಗಲ್ಲಿಗಳಲ್ಲಿ ನಾಕಾಬಂದಿ ಹಾಕಿ ಪೊಲೀಸರ ಬಿಗಿ ಬಂದೊಬಸ್ತ್​​

ಇಂದಿನಿಂದ ರಾತ್ರಿ 10ರಿಂದ ಬೆಳಗ್ಗೆ 5ರವರಗೆ ನೈಟ್​ ಕರ್ಫ್ಯೂ ವಿಧಿಸಲಾಗಿದೆ. ಹೀಗಾಗಿ ಹೊಸ ವರ್ಷ ಸಂಭ್ರಮಾಚರಣೆ ಮೇಲೆ ಖಾಕಿ ಹದ್ದಿನ ಕಣ್ಣು ಇರಿಸಿದ್ದು, ನಗರದಲ್ಲಿ ಕಾರ್ಯಾಚರಣೆ ಆರಂಭಿಸಿದೆ.  ನಗರದ ಗಲ್ಲಿ ಗಲ್ಲಿಯಲ್ಲಿ ನಾಕಾಬಂದಿಹಾಕಿ ಬಂದೋಬಸ್ತ್ ಮಾಡಲು‌ ಪೊಲೀಸರ ತಯಾರಿ ನಡೆಸುತ್ತಿದ್ದಾರೆ.

ಬೆಂಗಳೂರು: ಹೊಸವರ್ಷ ಆಚರಣೆಗೆ ಬ್ರೇಕ್​: ಗಲ್ಲಿಗಲ್ಲಿಗಳಲ್ಲಿ ನಾಕಾಬಂದಿ ಹಾಕಿ ಪೊಲೀಸರ ಬಿಗಿ ಬಂದೊಬಸ್ತ್​​
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 28, 2021 | 5:53 PM

Share

ಈ ಬಾರಿಯೂ ರಾಜ್ಯದಲ್ಲಿ ಹೊಸವರ್ಷ ಸಂಭ್ರಮಾಚರಣೆಗೆ ಬ್ರೆಕ್​ ಬಿದ್ದಿದೆ. ಇಂದಿನಿಂದ ರಾತ್ರಿ 10ರಿಂದ ಬೆಳಗ್ಗೆ 5ರವರಗೆ ನೈಟ್​ ಕರ್ಫ್ಯೂ ವಿಧಿಸಲಾಗಿದೆ. ಹೀಗಾಗಿ ಹೊಸ ವರ್ಷ ಸಂಭ್ರಮಾಚರಣೆ ಮೇಲೆ ಖಾಕಿ ಹದ್ದಿನ ಕಣ್ಣು ಇರಿಸಿದ್ದು, ನಗರದಲ್ಲಿ ಕಾರ್ಯಾಚರಣೆ ಆರಂಭಿಸಿದೆ.  ನಗರದ ಗಲ್ಲಿ ಗಲ್ಲಿಯಲ್ಲಿ ನಾಕಾಬಂದಿ ಹಾಕಿ ಬಂದೋಬಸ್ತ್ ಮಾಡಲು‌ ಪೊಲೀಸರು ತಯಾರಿ ನಡೆಸುತ್ತಿದ್ದಾರೆ. ಆಗ್ನೇಯ ವಿಭಾಗ ಒಂದರಲ್ಲಿ ಹಿರಿಯ ಅಧಿಕಾರಿಗಳ ಟೀಂ ಜತೆ 1410 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದರ ಜತೆಗೆ ಆಯ ಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ ಜೊತೆ ಜೊತೆಗೆ ಡ್ರೋನ್ ಕ್ಯಾಮೆರಾದ ವ್ಯವಸ್ಥೆ ಕೂಡ ಮಾಡಲಾಗಿದೆ. ಬೆಂಗಳೂರಿನ ಹಲವು ನಗರಗಳನ್ನು ಪೊಲೀಸರು ಬಿಗಿ ಬಂದೋಬಸ್ತ್​ ಮಾಡುತ್ತಿದ್ದಾರೆ. ರಾತ್ರಿ 10 ಗಂಟೆಯ ಬಳಿಕ ಬಾರ್​, ರೆಸ್ಟೋರೆಂಟ್​ಗಳನ್ನು ಮುಚ್ಚುವಂತೆ ಬೆಂಗಳೂರು ಕಮಿಷನರ್​ ಖಡಕ್​ ಆದೇಶ ನೀಡಿದ್ದಾರೆ. 

ಇನ್ನು ಬೆಂಗಳೂರಿನ ಪೂರ್ವದ ಪ್ರಮುಖ ಬೀದಿಗಳಾದ ಶಿವಾಜಿ ನಗರ, ರಿಂಗ್ ರೋಡ್, ಕಬ್ಬನ್ ರೋಡ್, ಬಿಆರ್ ವಿ ಜಂಕ್ಷನ್, ಕಿತ್ತುರು ರಾಣಿ ಚೆನ್ನಮ್ಮ‌ ಕ್ರೀಡಾಂಗಣ,  ಕಾಸ್ಮೋಟಿಕ್ ಕ್ಲಬ್, ಗರುಡ ಸ್ವಾಗತ್ ಮಾಲ್, ಆಟೋ ಸ್ಟಾಂಡ್, ಸೀಮಾ ಟವರ್ ಜಂಕ್ಷನ್ ಸೇರಿದಂತೆ ಎಲ್ಲೆಡೆ ನಾಕಾಬಂದಿ ಹಾಕಿ ಪೊಲೀಸರು ಜನ ಅನಗತ್ಯವಾಗಿ ಓಡಾಡದಂತೆ ಬಿಗಿ ಬಂದೋಬಸ್ತ್​ ಮಾಡಿದ್ದಾರೆ. ಅದೇ ರೀತಿ ಬೆಂಗಳೂರು ಪಶ್ಚಿಮ ವಿಭಾಗದಲ್ಲಿ ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಕಾಳಿದಾಸ ರೋಡ್, ಮಾರ್ಕೇಟ, ಕಲಾಸಿಪಾಳ್ಯ, ಚಾಮರಾಜಪೇಟೆ ಸೇರಿ ಹಲವು ಗಲ್ಲಿಗಳಲ್ಲಿ ಪೊಲೀಸರು ಹದ್ದಿನ ಕಣ್ಣು ಇರಿಸಿದ್ದಾರೆ.  ಸುಖಾಸುಮ್ಮನೆ ಓಡಾಡಿದರೆ ಬಿಗಿ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.

ಕೊರೋನಾ , ಒಮಿಕ್ರಾನ್ ಆತಂಕದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹೊಸ ವರ್ಷ ಆಚರಣೆಗೆ ನಿಷೇಧ ಹೇರಿದ್ದು ಇಂದಿನಿಂದ 10 ದಿನಗಳ ಕಾಲ ನೈಟ್​ ಕರ್ಫ್ಯೂ ವಿಧಿಸಿದೆ.

ಇದನ್ನು ಓದಿ:

Bengaluru: ಮಂಗಳವಾರ ಫ್ಲೈಓವರ್​ಗಳನ್ನು ಮುಚ್ಚುವುದಿಲ್ಲ; ಬುಧವಾರದಿಂದ ಫ್ಲೈಓವರ್ ಕ್ಲೋಸ್ ಆಗಿರಲಿದೆ- ಕಮಲ್ ಪಂತ್

Published On - 5:32 pm, Tue, 28 December 21

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ