AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟರ್​ ಐಡಿ ಅಕ್ರಮ: 15 ಬಿಬಿಎಂಪಿ ಆರ್​ಒಗಳಿಗೆ ಪೊಲೀಸರಿಂದ ನೊಟೀಸ್

ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಬಿಬಿಎಂಪಿಯ 15 ಆರ್​ಒಗಳಿಗೆ ನೊಟೀಸ್ ಜಾರಿ ಮಾಡಿದ್ದಾರೆ.

ವೋಟರ್​ ಐಡಿ ಅಕ್ರಮ: 15 ಬಿಬಿಎಂಪಿ ಆರ್​ಒಗಳಿಗೆ ಪೊಲೀಸರಿಂದ ನೊಟೀಸ್
ಸಾಂಧರ್ಬಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 22, 2022 | 12:53 PM

ಬೆಂಗಳೂರು: ನಗರದಲ್ಲಿ ಮತದಾರರ ಗುರುತಿನ ಚೀಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 15 ರಿಟರ್ನಿಂಗ್ ಆಫೀಸರ್​ಗಳಿಗೆ (ಆರ್​ಒ) ನೊಟೀಸ್ ಜಾರಿ ಮಾಡಿದ್ದಾರೆ. ಚಿಲುಮೆ ಸಂಸ್ಥೆಯು ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹಿಸುತ್ತಿರುವ ವಿಚಾರ ಆರ್​ಒಗಳಿಗೆ ತಿಳಿದಿದ್ದರೂ ಅವರು ಏನೂ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಆರೋಪಿಸಲಾಗಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಹಲವು ಹಂತಗಳಲ್ಲಿ ಎಲ್ಲ 15 ಮಂದಿಯ ವಿಚಾರಣೆ ನಡೆಯಲಿದೆ.

ದೂರು ವಾಪಸ್ ಪಡೆಯಲು ಒತ್ತಡ: ಸುಮಂಗಲ

ಬೆಂಗಳೂರಿನಲ್ಲಿ ಮತದಾರರ ಯಾದಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಚಿಲುಮೆ’ ಸಂಸ್ಥೆಯ ವಿರುದ್ಧ ನೀಡಿರುವ ದೂರು ಹಿಂದಕ್ಕೆ ಪಡೆಯುವಂತೆ ನನ್ನ ಮೇಲೆ ಒತ್ತಡ ಹಾಕಲಾಗುತ್ತಿದೆ ಎಂದು ‘ಸಮನ್ವಯ’ ಸಂಸ್ಥೆಯ ಸುಮಂಗಲಾ ‘ಟಿವಿ9’ ಸುದ್ದಿ ವಾಹಿನಿಗೆ ಪ್ರತಿಕ್ರಿಯಿಸಿದ್ದಾರೆ. ದೂರು ನೀಡಿದಾಗ ನಮ್ಮ ಕಚೇರಿಗೆ ಬಂದಿದ್ದ ಚಿಲುಮೆ ಸಂಸ್ಥೆಯ ರವಿಕುಮಾರ್, ದೂರು ವಾಪಸ್​ ಪಡೆಯುವಂತೆ ಒತ್ತಡ ಹಾಕಿದ್ದರು. ನನ್ನ ದೂರಿನ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ ಪ್ರಾದೇಶಿಕ ಆಯುಕ್ತರು ನನಗೆ ನೊಟೀಸ್ ನೀಡಿ, ಸಂಗ್ರಹಿಸಿರುವ ಸಾಕ್ಷ್ಯಗಳನ್ನು ನೀಡುವಂತೆ ಸೂಚಿಸಿದ್ದಾರೆ. ವರದಿ ಸಲ್ಲಿಸುವುದಕ್ಕೆ ನಮಗೆ ಹೆಚ್ಚಿನ ಕಾಲಾವಕಾಶವನ್ನೂ ನೀಡಿಲ್ಲ ಎಂದು ಆರೋಪ ಮಾಡಿದ್ದಾರೆ.

ಪೊಲೀಸರಿಂದ ಕಿಂಗ್​ಪಿನ್ ರವಿಕುಮಾರ್ ವಿಚಾರಣೆ

ಚಿಲುಮೆ ಸಂಸ್ಥೆಯಿಂದ ಮತದಾರರ ಖಾಸಗಿ ಮಾಹಿತಿ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಕಿಂಗ್​ಪಿನ್ ರವಿಕುಮಾರ್​ನನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ತನ್ನ ಮೇಲಿದ್ದ ಒತ್ತಾಯ, ತಾನು ಮಾಡಿದ ಕೆಲಸಗಳ ಬಗ್ಗೆ ಪೊಲೀಸರ ಮುಂದೆ ರವಿಕುಮಾರ್ ಬಾಯಿಬಿಡುತ್ತಿದ್ದಾನೆ. ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ವಿಚಾರಣೆಯ ನಿಗಾವಹಿಸಿದ್ದಾರೆ. ‘ತಪ್ಪು ಮಾಡಿದ್ದೀನಿ ಸರ್, ಕ್ಷಮಿಸಿ ಬಿಡಿ. ಕೆಲವರ ಒತ್ತಡದಿಂದ ಈ ರೀತಿ ಮಾಡಿದ್ದೇನೆ’ ಎಂದು ರವಿಕುಮಾರ್ ಪೊಲೀಸರ ಎದುರು ಗೋಗರೆಯುತ್ತಿದ್ದಾನೆ ಎಂದು ತಿಳಿದುಬಂದಿದೆ.

ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು