AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲಿಗೆ ಗುಂಡು ಹಾರಿಸಿ ಕಿಡ್ನ್ಯಾಪ್, ಕೊಲೆ ಆರೋಪಿಗಳ ಬಂಧನ

ಜುಲೈ 5ರಂದು ವಿಜಯ್ ಕುಮಾರ್ರನ್ನ ಆರೋಪಿಗಳು ಕಿಡ್ನಾಪ್ ಮಾಡಿದ್ದರು. ಕಿಡ್ನಾಪ್ ಬಳಿಕ ಹಣಕ್ಕೆ ಬೇಡಿಕೆ ಇಟ್ಟಿದ್ರು. ಹಣ ನೀಡುವುದು ತಡವಾಗಿದ್ದಾಗ ಕೊಲೆ ಮಾಡಿ ಹೊಸೂರು ಬಳಿ ಹೂತು ಹಾಕಿದ್ರು.

ಕಾಲಿಗೆ ಗುಂಡು ಹಾರಿಸಿ ಕಿಡ್ನ್ಯಾಪ್, ಕೊಲೆ ಆರೋಪಿಗಳ ಬಂಧನ
ಅಂಬರೀಶ್, ಕವಿರಾಜ್‌ ಬಂಧಿತ ಆರೋಪಿಗಳು
TV9 Web
| Edited By: ಆಯೇಷಾ ಬಾನು|

Updated on: Jul 28, 2021 | 7:17 AM

Share

ಬೆಂಗಳೂರು: ಕಾಲಿಗೆ ಗುಂಡು ಹಾರಿಸಿ ಕಿಡ್ನ್ಯಾಪ್, ಕೊಲೆ ಆರೋಪಿಗಳನ್ನು ಸೆರೆ ಹಿಡಿದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಅಂಬರೀಶ್, ಕವಿರಾಜ್‌ ಬಂಧಿತ ಆರೋಪಿಗಳು. ಇಂದಿರಾನಗರ ಫೈನಾನ್ಸಿಯರ್ ವಿಜಯ್‌ಕುಮಾರ್ ಎಂಬುವವರನ್ನು ಅಪಹರಿಸಿ ಹತ್ಯೆಗೈದಿದ್ದರು. ಕೇಸ್ ಸಂಬಂಧ ಆರೋಪಿಗಳ ಬಂಧನಕ್ಕೆ ಎಸಿಪಿ ಕುಮಾರ್, ಇನ್ಸ್‌ಪೆಕ್ಟರ್ ಹರೀಶ್ ತಂಡ ತೆರಳಿತ್ತು. ಈ ವೇಳೆ ಬೆಳಗ್ಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಅಂಬರೀಶ್, ಕವಿರಾಜ್‌ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.

ಜುಲೈ 5ರಂದು ವಿಜಯ್ ಕುಮಾರ್ರನ್ನ ಆರೋಪಿಗಳು ಕಿಡ್ನಾಪ್ ಮಾಡಿದ್ದರು. ಕಿಡ್ನಾಪ್ ಬಳಿಕ ಹಣಕ್ಕೆ ಬೇಡಿಕೆ ಇಟ್ಟಿದ್ರು. ಹಣ ನೀಡುವುದು ತಡವಾಗಿದ್ದಾಗ ಕೊಲೆ ಮಾಡಿ ಹೊಸೂರು ಬಳಿ ಹೂತು ಹಾಕಿದ್ರು. ಇನ್ನು ಮಾಜಿ ಶಾಸಕ ವರ್ತೂರು ಪ್ರಕಾಶ್ರನ್ನ ಕಿಡ್ನಾಪ್ ಮಾಡಿದ್ದು ಇದೇ ತಂಡ. ಸದ್ಯ ಈ ಬಗ್ಗೆ ಇಂದಿರಾನಗರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇನ್ನು ಮತ್ತೊಂದೆಡೆ ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆಯಲ್ಲಿ ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿಶೀಟರ್ ರಮೇಶ್ ಅಲಿಯಾಸ್ ಪಾಯ್ಸನ್ ರಾಮ(51) ಅರೆಸ್ಟ್ ಮಾಡಲಾಗಿದೆ. ಆರೋಪಿ ಹತ್ಯೆ, ಹತ್ಯೆ ಯತ್ನ ಸೇರಿ 28 ಕೇಸ್‌ನಲ್ಲಿ ಭಾಗಿಯಾಗಿರುವ ಆರೋಪ ಕೇಳಿ ಬಂದಿದೆ. ಮಾದನಾಯಕನಹಳ್ಳಿ ಪೊಲೀಸರಿಂದ ರಮೇಶ್ ಅರೆಸ್ಟ್.

ಇದನ್ನೂ ಓದಿ: Basavaraj Bommai: ಬಸವರಾಜ ಬೊಮ್ಮಾಯಿ ಆಯ್ಕೆಯ ಮೂಲಕ ತನಗೆ ಹಿಡಿಶಾಪ ಹಾಕಿದ ಸ್ವಾಮೀಜಿಗಳಿಗೆ ತಿರುಗೇಟು ನೀಡಿದೆಯೇ ಬಿಜೆಪಿ?

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ