AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ಚಾಳಿ ಮುಂದುವರಿಸಿದ್ದಾನಾ ಹ್ಯಾಕರ್ ಶ್ರೀಕಿ? ನ್ಯಾಯಾಲಯದ ಅನುಮತಿ ಪಡೆದು ಲ್ಯಾಪ್‌ಟಾಪ್ ರಿಟ್ರೀವ್​ಗೆ ಮುಂದಾದ ಪೊಲೀಸ್

ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಮತ್ತೆ ತನ್ನ ಹಳೇ ಚಾಳಿ ಮುಂದುವರಿಸಿದ್ದಾನಾ ಎಂಬ ಅನುಮಾನ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ಹೋಟೆಲ್‌ಗೆ ಹೋಗಿರಬಹುದೆಂಬ ಅನುಮಾನ ಹುಟ್ಟಿಕೊಂಡಿದೆ. ಹೋಟೆಲ್ ರೂಂನಲ್ಲಿದ್ದ ಲ್ಯಾಪ್‌ಟಾಪ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀಕೃಷ್ಣನ ಲ್ಯಾಪ್‌ಟಾಪ್ ರಿಟ್ರೀವ್‌ಗೆ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದಿದ್ದಾರೆ.

ಹಳೇ ಚಾಳಿ ಮುಂದುವರಿಸಿದ್ದಾನಾ ಹ್ಯಾಕರ್ ಶ್ರೀಕಿ? ನ್ಯಾಯಾಲಯದ ಅನುಮತಿ ಪಡೆದು ಲ್ಯಾಪ್‌ಟಾಪ್ ರಿಟ್ರೀವ್​ಗೆ ಮುಂದಾದ ಪೊಲೀಸ್
ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ
TV9 Web
| Edited By: ಆಯೇಷಾ ಬಾನು|

Updated on: Nov 09, 2021 | 12:48 PM

Share

ಬೆಂಗಳೂರು: ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ವಿಷ್ಣು ಭಟ್, ಶ್ರೀಕೃಷ್ಣನ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನೂ ಪೊಲೀಸರು ಅರೆಸ್ಟ್ ಮಾಡಿ ಅನೇಕ ವಿಚಾರಗಳ ಬಗ್ಗೆ ಬಾಯ್ಬಿಡಿಸುತ್ತಿದ್ದಾರೆ. ಸದ್ಯ ಈಗ ವಿಷ್ಣು ಭಟ್‌ಗೂ ಶ್ರೀಕೃಷ್ಣಗೂ ಏನು ಸಂಬಂಧ, ಕುಡಿದ ನಶೆಯಲ್ಲಿ ಸ್ಟಾರ್ ಹೋಟೆಲ್ಗೆ ಶ್ರೀಕೀಯನ್ನ ವಿಷ್ಣು ಹುಡುಕಿ ಬಂದದ್ದು ಏಕೆ? ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಬೆಂಗಳೂರಿನ ಜೆ.ಬಿ.ನಗರ ಠಾಣೆ ಪೊಲೀಸರು ವಿಷ್ಣು ಭಟ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಡ್ರಗ್ಸ್ ನಶೆಯಲ್ಲಿ ವಿಷ್ಣು ಭಟ್ ಹೋಟೆಲ್‌ಗೆ ಹೋಗಿದ್ದ. ಆದ್ರೆ ಯಾವ ಕಾರಣಕ್ಕೆ ಶ್ರೀಕೃಷ್ಣನಿಗಾಗಿ ವಿಷ್ಣು ಭಟ್ ಹೋಗಿದ್ದನು ಎಂಬ ಬಗ್ಗೆ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಈ ಬಗ್ಗೆ ಜೆ.ಬಿ.ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಪೋಲಿಸರ ವಿಚಾರಣೆ ವೇಳೆ ಡ್ರಗ್ಸ್ ಪೂರೈಸಿದ ವ್ಯಕ್ತಿ ಬಗ್ಗೆ ವಿಷ್ಣು ಭಟ್ ಮಾಹಿತಿ ಬಾಯ್ಬಿಟ್ಟಿದ್ದಾನೆ. ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್‌ಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ ಮೇಲೆ ಅನುಮಾನ ಇನ್ನು ಮತ್ತೊಂದೆಡೆ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಮತ್ತೆ ತನ್ನ ಹಳೇ ಚಾಳಿ ಮುಂದುವರಿಸಿದ್ದಾನಾ ಎಂಬ ಅನುಮಾನ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ಹೋಟೆಲ್‌ಗೆ ಹೋಗಿರಬಹುದೆಂಬ ಅನುಮಾನ ಹುಟ್ಟಿಕೊಂಡಿದೆ. ಹೋಟೆಲ್ ರೂಂನಲ್ಲಿದ್ದ ಲ್ಯಾಪ್‌ಟಾಪ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀಕೃಷ್ಣನ ಲ್ಯಾಪ್‌ಟಾಪ್ ರಿಟ್ರೀವ್‌ಗೆ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದಿದ್ದಾರೆ. ಶ್ರೀಕೃಷ್ಣನ ಲ್ಯಾಪ್‌ಟಾಪ್ ರಿಟ್ರೀವ್ ವೇಳೆ ಕ್ರಿಪ್ಟೋ ಕರೆನ್ಸಿ, ಬಿಟ್ ಕಾಯಿನ್ ವ್ಯವಹಾರ ಕಂಡು ಬಂದರೆ ಪೊಲೀಸರು ಶ್ರೀಕಿಗೆ ಮತ್ತೆ ಚಳಿಬಿಡಿಸಲಿದ್ದಾರೆ.

ಶ್ರೀಕಿ ಈ ಹಿಂದೆ ಹಲವು ಬಾರಿ ಸ್ಟಾರ್ ಹೋಟೆಲ್ನಲ್ಲಿ ತಂಗಿದ್ದಾಗ ಇದೇ ಕೃತ್ಯ ಎಸಗಿದ್ದ. ಸರ್ಕಾರದ ಇ-ಪ್ರಕ್ಯೂರ್ ಮೆಂಟ್ ವೆಬ್ ಸೈಟ್ ಸೇರಿದಂತೆ ಪ್ರತಿಷ್ಟಿತ ಕಂಪೆನಿಗಳ ಡಾಟಾ ಕದ್ದಿದ್ದ. ಬಳಿಕ ಬ್ಲಾಕ್ ಮೇಲ್ ಮಾಡಿದ್ದರ ಬಗ್ಗೆ ಸಿಸಿಬಿ ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಿತ್ತು. ಕಳೆದ ಫೆಬ್ರವರಿಯಲ್ಲಿ 1 ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆ ಶ್ರೀಕಿ ಲ್ಯಾಪ್ ಟಾಪ್ ರಿಟ್ರೀವ್ ಮಾಡಲಿದ್ದಾರೆ.

ಇದನ್ನೂ ಓದಿ: ಇಂದು ಕೋರ್ಟ್‌ಗೆ ಹಾಜರಾಗಲಿರುವ ಹ್ಯಾಕರ್ ಶ್ರೀಕಿ ಮತ್ತು ಭೀಮಾ ಜ್ಯುವೆಲ್ಲರ್ಸ್ ಮಾಲೀಕನ ಪುತ್ರ ವಿಷ್ಣು ಭಟ್

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’