AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ಚಾಳಿ ಮುಂದುವರಿಸಿದ್ದಾನಾ ಹ್ಯಾಕರ್ ಶ್ರೀಕಿ? ನ್ಯಾಯಾಲಯದ ಅನುಮತಿ ಪಡೆದು ಲ್ಯಾಪ್‌ಟಾಪ್ ರಿಟ್ರೀವ್​ಗೆ ಮುಂದಾದ ಪೊಲೀಸ್

ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಮತ್ತೆ ತನ್ನ ಹಳೇ ಚಾಳಿ ಮುಂದುವರಿಸಿದ್ದಾನಾ ಎಂಬ ಅನುಮಾನ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ಹೋಟೆಲ್‌ಗೆ ಹೋಗಿರಬಹುದೆಂಬ ಅನುಮಾನ ಹುಟ್ಟಿಕೊಂಡಿದೆ. ಹೋಟೆಲ್ ರೂಂನಲ್ಲಿದ್ದ ಲ್ಯಾಪ್‌ಟಾಪ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀಕೃಷ್ಣನ ಲ್ಯಾಪ್‌ಟಾಪ್ ರಿಟ್ರೀವ್‌ಗೆ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದಿದ್ದಾರೆ.

ಹಳೇ ಚಾಳಿ ಮುಂದುವರಿಸಿದ್ದಾನಾ ಹ್ಯಾಕರ್ ಶ್ರೀಕಿ? ನ್ಯಾಯಾಲಯದ ಅನುಮತಿ ಪಡೆದು ಲ್ಯಾಪ್‌ಟಾಪ್ ರಿಟ್ರೀವ್​ಗೆ ಮುಂದಾದ ಪೊಲೀಸ್
ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ
TV9 Web
| Edited By: ಆಯೇಷಾ ಬಾನು|

Updated on: Nov 09, 2021 | 12:48 PM

Share

ಬೆಂಗಳೂರು: ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ವಿಷ್ಣು ಭಟ್, ಶ್ರೀಕೃಷ್ಣನ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನೂ ಪೊಲೀಸರು ಅರೆಸ್ಟ್ ಮಾಡಿ ಅನೇಕ ವಿಚಾರಗಳ ಬಗ್ಗೆ ಬಾಯ್ಬಿಡಿಸುತ್ತಿದ್ದಾರೆ. ಸದ್ಯ ಈಗ ವಿಷ್ಣು ಭಟ್‌ಗೂ ಶ್ರೀಕೃಷ್ಣಗೂ ಏನು ಸಂಬಂಧ, ಕುಡಿದ ನಶೆಯಲ್ಲಿ ಸ್ಟಾರ್ ಹೋಟೆಲ್ಗೆ ಶ್ರೀಕೀಯನ್ನ ವಿಷ್ಣು ಹುಡುಕಿ ಬಂದದ್ದು ಏಕೆ? ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಬೆಂಗಳೂರಿನ ಜೆ.ಬಿ.ನಗರ ಠಾಣೆ ಪೊಲೀಸರು ವಿಷ್ಣು ಭಟ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಡ್ರಗ್ಸ್ ನಶೆಯಲ್ಲಿ ವಿಷ್ಣು ಭಟ್ ಹೋಟೆಲ್‌ಗೆ ಹೋಗಿದ್ದ. ಆದ್ರೆ ಯಾವ ಕಾರಣಕ್ಕೆ ಶ್ರೀಕೃಷ್ಣನಿಗಾಗಿ ವಿಷ್ಣು ಭಟ್ ಹೋಗಿದ್ದನು ಎಂಬ ಬಗ್ಗೆ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಈ ಬಗ್ಗೆ ಜೆ.ಬಿ.ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಪೋಲಿಸರ ವಿಚಾರಣೆ ವೇಳೆ ಡ್ರಗ್ಸ್ ಪೂರೈಸಿದ ವ್ಯಕ್ತಿ ಬಗ್ಗೆ ವಿಷ್ಣು ಭಟ್ ಮಾಹಿತಿ ಬಾಯ್ಬಿಟ್ಟಿದ್ದಾನೆ. ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್‌ಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ ಮೇಲೆ ಅನುಮಾನ ಇನ್ನು ಮತ್ತೊಂದೆಡೆ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಮತ್ತೆ ತನ್ನ ಹಳೇ ಚಾಳಿ ಮುಂದುವರಿಸಿದ್ದಾನಾ ಎಂಬ ಅನುಮಾನ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ಹೋಟೆಲ್‌ಗೆ ಹೋಗಿರಬಹುದೆಂಬ ಅನುಮಾನ ಹುಟ್ಟಿಕೊಂಡಿದೆ. ಹೋಟೆಲ್ ರೂಂನಲ್ಲಿದ್ದ ಲ್ಯಾಪ್‌ಟಾಪ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀಕೃಷ್ಣನ ಲ್ಯಾಪ್‌ಟಾಪ್ ರಿಟ್ರೀವ್‌ಗೆ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದಿದ್ದಾರೆ. ಶ್ರೀಕೃಷ್ಣನ ಲ್ಯಾಪ್‌ಟಾಪ್ ರಿಟ್ರೀವ್ ವೇಳೆ ಕ್ರಿಪ್ಟೋ ಕರೆನ್ಸಿ, ಬಿಟ್ ಕಾಯಿನ್ ವ್ಯವಹಾರ ಕಂಡು ಬಂದರೆ ಪೊಲೀಸರು ಶ್ರೀಕಿಗೆ ಮತ್ತೆ ಚಳಿಬಿಡಿಸಲಿದ್ದಾರೆ.

ಶ್ರೀಕಿ ಈ ಹಿಂದೆ ಹಲವು ಬಾರಿ ಸ್ಟಾರ್ ಹೋಟೆಲ್ನಲ್ಲಿ ತಂಗಿದ್ದಾಗ ಇದೇ ಕೃತ್ಯ ಎಸಗಿದ್ದ. ಸರ್ಕಾರದ ಇ-ಪ್ರಕ್ಯೂರ್ ಮೆಂಟ್ ವೆಬ್ ಸೈಟ್ ಸೇರಿದಂತೆ ಪ್ರತಿಷ್ಟಿತ ಕಂಪೆನಿಗಳ ಡಾಟಾ ಕದ್ದಿದ್ದ. ಬಳಿಕ ಬ್ಲಾಕ್ ಮೇಲ್ ಮಾಡಿದ್ದರ ಬಗ್ಗೆ ಸಿಸಿಬಿ ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಿತ್ತು. ಕಳೆದ ಫೆಬ್ರವರಿಯಲ್ಲಿ 1 ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆ ಶ್ರೀಕಿ ಲ್ಯಾಪ್ ಟಾಪ್ ರಿಟ್ರೀವ್ ಮಾಡಲಿದ್ದಾರೆ.

ಇದನ್ನೂ ಓದಿ: ಇಂದು ಕೋರ್ಟ್‌ಗೆ ಹಾಜರಾಗಲಿರುವ ಹ್ಯಾಕರ್ ಶ್ರೀಕಿ ಮತ್ತು ಭೀಮಾ ಜ್ಯುವೆಲ್ಲರ್ಸ್ ಮಾಲೀಕನ ಪುತ್ರ ವಿಷ್ಣು ಭಟ್

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ