ನೂತನ ಪೊಲೀಸ್​ ಆಯುಕ್ತರ ಖಡಕ್​ ಸೂಚನೆ: ಬೆಂಗಳೂರಿನಲ್ಲಿ ಬೆಳ್ಳಂಬೆಳ್ಳಗೆ ರೌಡಿ ಶೀಟರ್​ಗಳಿಗೆ ಶಾಕ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗಿರುವ ಕ್ರೈಂ ಚಟುವಟಿಕೆ ಹಾಗೂ ಗಾಂಜಾ ಪ್ರಕರಣಗಳ ಹಿನ್ನಲೆಯಲ್ಲಿ ಪೊಲೀಸರು ಬೆಳ್ಳಂ ಬೆಳ್ಳಗೆ ರೌಡಿಶೀಟರ್‌ಗಳಿಗೆ ಶಾಕ್ ನೀಡಿದ್ದಾರೆ.

ನೂತನ ಪೊಲೀಸ್​ ಆಯುಕ್ತರ ಖಡಕ್​ ಸೂಚನೆ: ಬೆಂಗಳೂರಿನಲ್ಲಿ ಬೆಳ್ಳಂಬೆಳ್ಳಗೆ ರೌಡಿ ಶೀಟರ್​ಗಳಿಗೆ ಶಾಕ್
ರೌಡಿಶೀಟರ್​ ಮನೆಗಳ ಪೊಲೀಸರ ದಾಳಿ
Follow us
|

Updated on: Jun 08, 2023 | 8:31 AM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗಿರುವ ಕ್ರೈಂ ಚಟುವಟಿಕೆ ಹಾಗೂ ಗಾಂಜಾ ಪ್ರಕರಣಗಳ ಹಿನ್ನಲೆಯಲ್ಲಿ ಪೊಲೀಸರು ಬೆಳ್ಳಂ ಬೆಳ್ಳಗೆ ರೌಡಿಶೀಟರ್‌ಗಳಿಗೆ ಶಾಕ್ ನೀಡಿದ್ದಾರೆ. ನೂತನ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ಮೇರೆಗೆ ದಾಳಿ​​ ನಗರದ 8 ವಿಭಾಗದ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್​ಗಳ ಮನೆ ಮೇಲೆ ದಾಳಿ ಮಾಡಲಾಗಿದ್ದು, 1 ಸಾವಿರಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆಗಳಲ್ಲಿ ಪರಿಶೀಲನೆ ಮಾಡಲಾಗಿದೆ. ದಾಳಿ ವೇಳೆ ಹಲವರ ಮನೆಗಳಲ್ಲಿ ಮಾರಕಾಸ್ತ್ರಗಳು, ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Bengaluru News: ನೈತಿಕ ಪೊಲೀಸ್​​ಗಿರಿ, ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷದ ಪೋಸ್ಟ್; ಖಡಕ್ ಎಚ್ಚರಿಕೆ ನೀಡಿದ ಬೆಂಗಳೂರು ಪೊಲೀಸರು

ಬೆಂಗಳೂರು ಪೂರ್ವ ವಿಭಾಗದ ಪೋಲಿಸರು ಹಲಸೂರು, ಪುಲಕೇಶಿನಗರ, ಡಿಜೆ ಹಳ್ಳಿ, KG ಹಳ್ಳಿ ಠಾಣಾ ವ್ಯಾಪ್ತಿಯ ರೌಡಿಶೀಟರ್‌ಗಳ ಮನೆಗಳ ಮೇಲೆ ಡಿಸಿಪಿ ಭೀಮಾಶಂಕರ ಗುಳೇದ್ ನೇತೃತ್ವದಲ್ಲಿ ದಾಳಿ ಮಾಡಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇನ್ನು ಆಗ್ನೇಯ ವಿಭಾಗದ ರೌಡಿಶೀಟರ್‌ಗಳ ಮನೆಗಳ ಮೇಲೂ ದಾಳಿ ನಡೆಸಲಾಗಿದೆ. ಚುನಾವಣಾ ಸಂದರ್ಭದಲ್ಲಿ ಜೈಲು ಸೇರಿ ಬಿಡುಗಡೆಗೊಂಡಿರುವ ರೌಡಿಶೀಟರ್‌ಗಳಿಗೆ ಮತ್ತೆ ಎಚ್ಚರಿಕೆ ಕೊಡುವ ಸಲುವಾಗಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ರೌಡಿ ಆಕ್ಟಿವಿಟಿಗಳಲ್ಲಿ ಭಾಗಿಯಾಗದಂತೆಯೂ ಎಚ್ಚರಿಕೆ ಕೊಡಲಾಗಿದೆ. ಡಿಸಿಪಿ ಸಿಕೆ ಬಾಬ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಕೋರಮಂಗಲ, ಮಡಿವಾಳ, ಆಡುಗೋಡಿ, ಮೈಕೋ ಲೇ ಔಟ್ ಸೇರಿ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಲಾಗಿದೆ. ಸದ್ಯ ಹಲವು ರೌಡಿಶೀಟರ್‌ಗಳ ಮನೆಗಳಲ್ಲಿ ಮಾರಕಾಸ್ತ್ರ ಪತ್ತೆಯಾಗಿದೆ.

ಇನ್ನು ಪೊಲೀಸ್ ಆಯುಕ್ತ ಬಿ ದಯಾನಂದ ಸೂಚನೆ ಮೇರೆಗೆ ನಗರದ ಎಂಟು ವಿಭಾಗದ ಪೊಲೀಸರಿಂದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ರೌಡಿಗಳ ನಿವಾಸದ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಹಲವಾರು ರೌಡಿಗಳ ನಿವಾಸದಲ್ಲಿ ಮಾರಕಾಸ್ತ್ರಗಳು ಮತ್ತು ಗಾಂಜಾ ಪತ್ತೆಯಾಗಿದೆ. ಎಂಟು ವಿಭಾಗದ ಪೊಲೀಸರು ದಾಳಿಯಲ್ಲಿ ಭಾಗಿಯಾಗಿದ್ದರು.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!