AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಪೊಲೀಸ್​ ಆಯುಕ್ತರ ಖಡಕ್​ ಸೂಚನೆ: ಬೆಂಗಳೂರಿನಲ್ಲಿ ಬೆಳ್ಳಂಬೆಳ್ಳಗೆ ರೌಡಿ ಶೀಟರ್​ಗಳಿಗೆ ಶಾಕ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗಿರುವ ಕ್ರೈಂ ಚಟುವಟಿಕೆ ಹಾಗೂ ಗಾಂಜಾ ಪ್ರಕರಣಗಳ ಹಿನ್ನಲೆಯಲ್ಲಿ ಪೊಲೀಸರು ಬೆಳ್ಳಂ ಬೆಳ್ಳಗೆ ರೌಡಿಶೀಟರ್‌ಗಳಿಗೆ ಶಾಕ್ ನೀಡಿದ್ದಾರೆ.

ನೂತನ ಪೊಲೀಸ್​ ಆಯುಕ್ತರ ಖಡಕ್​ ಸೂಚನೆ: ಬೆಂಗಳೂರಿನಲ್ಲಿ ಬೆಳ್ಳಂಬೆಳ್ಳಗೆ ರೌಡಿ ಶೀಟರ್​ಗಳಿಗೆ ಶಾಕ್
ರೌಡಿಶೀಟರ್​ ಮನೆಗಳ ಪೊಲೀಸರ ದಾಳಿ
ರಮೇಶ್ ಬಿ. ಜವಳಗೇರಾ
|

Updated on: Jun 08, 2023 | 8:31 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗಿರುವ ಕ್ರೈಂ ಚಟುವಟಿಕೆ ಹಾಗೂ ಗಾಂಜಾ ಪ್ರಕರಣಗಳ ಹಿನ್ನಲೆಯಲ್ಲಿ ಪೊಲೀಸರು ಬೆಳ್ಳಂ ಬೆಳ್ಳಗೆ ರೌಡಿಶೀಟರ್‌ಗಳಿಗೆ ಶಾಕ್ ನೀಡಿದ್ದಾರೆ. ನೂತನ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ಮೇರೆಗೆ ದಾಳಿ​​ ನಗರದ 8 ವಿಭಾಗದ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್​ಗಳ ಮನೆ ಮೇಲೆ ದಾಳಿ ಮಾಡಲಾಗಿದ್ದು, 1 ಸಾವಿರಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆಗಳಲ್ಲಿ ಪರಿಶೀಲನೆ ಮಾಡಲಾಗಿದೆ. ದಾಳಿ ವೇಳೆ ಹಲವರ ಮನೆಗಳಲ್ಲಿ ಮಾರಕಾಸ್ತ್ರಗಳು, ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Bengaluru News: ನೈತಿಕ ಪೊಲೀಸ್​​ಗಿರಿ, ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷದ ಪೋಸ್ಟ್; ಖಡಕ್ ಎಚ್ಚರಿಕೆ ನೀಡಿದ ಬೆಂಗಳೂರು ಪೊಲೀಸರು

ಬೆಂಗಳೂರು ಪೂರ್ವ ವಿಭಾಗದ ಪೋಲಿಸರು ಹಲಸೂರು, ಪುಲಕೇಶಿನಗರ, ಡಿಜೆ ಹಳ್ಳಿ, KG ಹಳ್ಳಿ ಠಾಣಾ ವ್ಯಾಪ್ತಿಯ ರೌಡಿಶೀಟರ್‌ಗಳ ಮನೆಗಳ ಮೇಲೆ ಡಿಸಿಪಿ ಭೀಮಾಶಂಕರ ಗುಳೇದ್ ನೇತೃತ್ವದಲ್ಲಿ ದಾಳಿ ಮಾಡಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇನ್ನು ಆಗ್ನೇಯ ವಿಭಾಗದ ರೌಡಿಶೀಟರ್‌ಗಳ ಮನೆಗಳ ಮೇಲೂ ದಾಳಿ ನಡೆಸಲಾಗಿದೆ. ಚುನಾವಣಾ ಸಂದರ್ಭದಲ್ಲಿ ಜೈಲು ಸೇರಿ ಬಿಡುಗಡೆಗೊಂಡಿರುವ ರೌಡಿಶೀಟರ್‌ಗಳಿಗೆ ಮತ್ತೆ ಎಚ್ಚರಿಕೆ ಕೊಡುವ ಸಲುವಾಗಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ರೌಡಿ ಆಕ್ಟಿವಿಟಿಗಳಲ್ಲಿ ಭಾಗಿಯಾಗದಂತೆಯೂ ಎಚ್ಚರಿಕೆ ಕೊಡಲಾಗಿದೆ. ಡಿಸಿಪಿ ಸಿಕೆ ಬಾಬ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಕೋರಮಂಗಲ, ಮಡಿವಾಳ, ಆಡುಗೋಡಿ, ಮೈಕೋ ಲೇ ಔಟ್ ಸೇರಿ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಲಾಗಿದೆ. ಸದ್ಯ ಹಲವು ರೌಡಿಶೀಟರ್‌ಗಳ ಮನೆಗಳಲ್ಲಿ ಮಾರಕಾಸ್ತ್ರ ಪತ್ತೆಯಾಗಿದೆ.

ಇನ್ನು ಪೊಲೀಸ್ ಆಯುಕ್ತ ಬಿ ದಯಾನಂದ ಸೂಚನೆ ಮೇರೆಗೆ ನಗರದ ಎಂಟು ವಿಭಾಗದ ಪೊಲೀಸರಿಂದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ರೌಡಿಗಳ ನಿವಾಸದ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಹಲವಾರು ರೌಡಿಗಳ ನಿವಾಸದಲ್ಲಿ ಮಾರಕಾಸ್ತ್ರಗಳು ಮತ್ತು ಗಾಂಜಾ ಪತ್ತೆಯಾಗಿದೆ. ಎಂಟು ವಿಭಾಗದ ಪೊಲೀಸರು ದಾಳಿಯಲ್ಲಿ ಭಾಗಿಯಾಗಿದ್ದರು.