AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ಅಂಗಡಿ ಮಾಲೀಕರ ಕಳ್ಳಾಟ: 1 ಲಾರಿ, 3 ಕ್ಯಾಂಟರ್​ಗಳಲ್ಲಿದ್ದ ಪಟಾಕಿ ಜಪ್ತಿ ಮಾಡಿದ ಪೊಲೀಸ್​

ಅಕ್ರಮವಾಗಿ ವಾಹನಗಳಲ್ಲಿ ಲೋಡ್ ಗಟ್ಟಲೇ ಪಟಾಕಿಯನ್ನ ತುಂಬಿ ಖಾಸಗಿ ಜಾಗದಲ್ಲಿ ನಿಲ್ಲಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಹಾಗೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ಮೂಲಕ ಸೂರ್ಯನಗರ ವ್ಯಾಪ್ತಿಯಲ್ಲಿ ಪಟಾಕಿ ಅಂಗಡಿ ಮಾಲೀಕರು ಕಳ್ಳಾಟ ನಡೆಸಿದ್ದರು. 1 ಲಾರಿ, 3 ಕ್ಯಾಂಟರ್​ಗಳಲ್ಲಿದ್ದ ಪಟಾಕಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಪಟಾಕಿ ಅಂಗಡಿ ಮಾಲೀಕರ ಕಳ್ಳಾಟ: 1 ಲಾರಿ, 3 ಕ್ಯಾಂಟರ್​ಗಳಲ್ಲಿದ್ದ ಪಟಾಕಿ ಜಪ್ತಿ ಮಾಡಿದ ಪೊಲೀಸ್​
ಜಪ್ತಿ ಮಾಡಲಾದ ಪಟಾಕಿ
ರಾಮು, ಆನೇಕಲ್​
| Edited By: |

Updated on: Oct 12, 2023 | 10:13 PM

Share

ಆನೇಕಲ್, ಅಕ್ಟೋಬರ್​ 12: ಅಕ್ರಮವಾಗಿ ವಾಹನಗಳಲ್ಲಿ ಲೋಡ್ ಗಟ್ಟಲೇ ಪಟಾಕಿ (firecrackers) ಯನ್ನ ತುಂಬಿ ಖಾಸಗಿ ಜಾಗದಲ್ಲಿ ನಿಲ್ಲಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಹಾಗೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆನೇಕಲ್ ತಾಲ್ಲೂಕಿನ ರಾಮಸಾಗರದ ಖಾಸಗಿ ಜಾಗವೊಂದರಲ್ಲಿ ಒಂದು ಲಾರಿ ಹಾಗೂ ನಾಲ್ಕು ಕ್ಯಾಂಟರ್ ವಾಹನಗಳಲ್ಲಿ ಅಕ್ರಮವಾಗಿ ಪಟಾಕಿಯನ್ನ ಲೋಡ್ ಮಾಡಿ ಇಡಲಾಗಿತ್ತು. ಆ ಮೂಲಕ ಸೂರ್ಯನಗರ ವ್ಯಾಪ್ತಿಯಲ್ಲಿ ಪಟಾಕಿ ಅಂಗಡಿ ಮಾಲೀಕರು ಕಳ್ಳಾಟ ನಡೆಸಿದ್ದರು. 1 ಲಾರಿ, 3 ಕ್ಯಾಂಟರ್​ಗಳಲ್ಲಿದ್ದ ಪಟಾಕಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಅತ್ತಿಬೆಲೆಯಲ್ಲಿ ನಡೆದ ಅಗ್ನಿದುರಂತ ಸಂಭವಿಸಿದ ಬಳಿಕ ತಾಲ್ಲೂಕಿನಲ್ಲಿದ್ದ ಹಲವು ಪಟಾಕಿ ಮಳಿಗೆಗಳ ಮಾಲೀಕರು ಅಂಗಡಿಗಳಲ್ಲಿದ್ದ ಪಟಾಕಿ ಹಾಗೂ ತಮಿಳುನಾಡಿನಿಂದ ಬಂದಿದ್ದ ಪಟಾಕಿಯನ್ನ ವಾಹನಗಳಲ್ಲಿ ಲೋಡ್ ಮಾಡಿ ಅಕ್ರಮವಾಗಿ ಇಡಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಚಿಕಿತ್ಸೆ ಉಚಿತವೆಂದಿದ್ರೂ ಕುಟುಂಬಸ್ಥರಿಂದ ಹಣ ವಸೂಲಿ: ಸಿಎಂ ಮಾತಿಗೆ ಕ್ಯಾರೇ ಎನ್ನದ ಸೇಂಟ್ ಜಾನ್ಸ್ ಆಸ್ಪತ್ರೆ

ಈ ಬಗ್ಗೆ ಖಚಿತ ಮಾಹಿತಿ ಕಲೆಹಾಕಿದ ಸೂರ್ಯನಗರ ಪೊಲೀಸರು ಪುರಸಭೆ ಹಾಗೂ ಕಂದಾಯ ಅಧಿಕಾರಿಗಳ ತಂಡದೊಂದಿಗೆ ದಾಳಿ ನಡೆಸಿ ಪಟಾಕಿ ಲೋಡ್ ತುಂಬಿದ್ದ ವಾಹನಗಳನ್ನ ವಶಕ್ಕೆ ಪಡೆದು ಕ್ರಮಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ಅತ್ತಿಬೆಲೆ ಅಗ್ನಿ ದುರಂತ: ಗಾಯಾಳು ಬಳಿ ಹಣ ಪಡೆದ ಸೇಂಟ್ ಜಾನ್ಸ್ ಆಸ್ಪತ್ರೆ ಮತ್ತು ವೈದ್ಯನ ವಿರುದ್ಧ ಎಫ್​ಐಆರ್​​ ದಾಖಲು

ಅತ್ತಿಬೆಲೆ ಪಟಾಕಿ ಅಗ್ನಿದುರಂತಕ್ಕೆ ಲೋಕಾಯುಕ್ತ ಎಂಟ್ರಿ ಕೊಟ್ಟಿದ್ದು, ಪ್ರಕರಣದ ಗಂಭೀರತೆ ಹೆಚ್ಚಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ರವರು ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡಿದ್ದು, ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಇದರ ನಡುವೆ ಅಗ್ನಿದುರಂತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಮತ್ತೋರ್ವ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಕೋಲಾರ ಜಿಲ್ಲೆಯಾದ್ಯಂತ ಅಕ್ರಮ ಪಟಾಕಿ ಗೋದಾಮು ಮೇಲೆ ದಾಳಿ

ಕೋಲಾರ ಜಿಲ್ಲೆಯಾದ್ಯಂತ ಅಕ್ರಮ ಪಟಾಕಿ ಗೋದಾಮು ಮೇಲೆ ತಹಶೀಲ್ದಾರ್‌ಗಳ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಕೋಲಾರ, ಶ್ರೀನಿವಾಸಪುರ, ಮಾಲೂರು, ಬಂಗಾರಪೇಟೆ, ಕೆಜಿಎಫ್​, ಮುಳಬಾಗಿಲು ತಾಲೂಕುಗಳಲ್ಲಿ ದಾಳಿ ಮಾಡಿ ಲಕ್ಷಾಂತರ ರೂ. ಮೌಲ್ಯದ ಪಟಾಕಿಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ