AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ; ಭಕ್ತವತ್ಸಲ ಸಮಿತಿಯ ಮೂರು ಶಿಫಾರಸ್ಸಿಗೆ ಸಂಪುಟ ಅಸ್ತು

ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾತನಾಡಿದ ಹೆಚ್​ಕೆ ಪಾಟೀಲ್​ ‘ ಸುಪ್ರಿಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕೆ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ ರಚಿಸಲಾಗಿತ್ತು. ಈ ಸಮಿತಿಯ 5 ಶಿಫಾರಸ್ಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಂಪುಟ ಒಪ್ಪಿದೆ ಎಂದರು.

ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ; ಭಕ್ತವತ್ಸಲ ಸಮಿತಿಯ ಮೂರು ಶಿಫಾರಸ್ಸಿಗೆ ಸಂಪುಟ ಅಸ್ತು
ಹೆಚ್​ಕೆ ಪಾಟೀಲ್​
ಪ್ರಸನ್ನ ಗಾಂವ್ಕರ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 05, 2023 | 7:11 PM

Share

ಬೆಂಗಳೂರು, ಅ.05: ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಿಂದುಳಿದ ವರ್ಗಗಳಿಗೆ (Backward Class) ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಸಚಿವ ಹೆಚ್‌.ಕೆ ಪಾಟೀಲ್ (HK Patil) ಹೇಳಿದರು. ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾತನಾಡಿದ ಅವರು ‘ ಸುಪ್ರಿಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕೆ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ ರಚಿಸಲಾಗಿತ್ತು. ಈ ಸಮಿತಿಯ 5 ಶಿಫಾರಸ್ಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಂಪುಟ ಒಪ್ಪಿದೆ ಎಂದರು.

‘ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಚುನಾವಣೆ ನಿರ್ವಹಣ ಆಡಳಿತ ಸುಧಾರಣಾ ಇಲಾಖಾ ವ್ಯಾಪ್ತಿಗೆ ತರುವ ಶಿಫಾರಸ್ಸನ್ನು ಇದೀಗ ಕ್ಯಾಬಿನೆಟ್ ಒಪ್ಪಿದ್ದು, ಈ ಹಿಂದೆ ಪಂಚಾಯತ್ ರಾಜ್ ಇಲಾಖೆ ಜೊತೆಗೆ ಚುನಾವಣಾ ಆಯೋಗ ಸಮನ್ವಯ ಸಾಧಿಸುತ್ತಿತ್ತು. ಇದೀಗ ಆಡಳಿತ ಸುಧಾರಣಾ ಇಲಾಖೆ ಅಡಿಯಲ್ಲಿ ನಿರ್ವಹಣೆ ಮಾಡಲಾಗುವುದು. ರಾಜ್ಯ ಮುಖ್ಯ ಚುನಾವಣಾ ಆಯೋಗ ಕೂಡ ಇನ್ನುಮುಂದೆ ಆಡಳಿತ ಸುಧಾರಣಾ ಇಲಾಖೆ ಜೊತೆಗೆ ಚರ್ಚೆ ಮಾಡಬೇಕು ಎಂದರು.

ಇದನ್ನೂ ಓದಿ:ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ, ನಿರ್ಧಾರಗಳು ಏನೇನು?

ಬ್ರೇನ್ ಹೆಲ್ತ್ ಇನಿಶಿಯೇಟಿವ್ ಪ್ರೊಗ್ರಾಂಗೆ ಆಡಳಿತಾತ್ಮಕ ಅನುಮೋದನೆ

ಹಬ್ ಮತ್ತು ಸ್ಪೋಕ್ಸ್ ಮಾದರಿಯಲ್ಲಿ ಬ್ರೇನ್ ಹೆಲ್ತ್ ಇನಿಶಿಯೇಟಿವ್ ಪ್ರೊಗ್ರಾಂಗೆ 25 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಲ್ಲಿ ಸ್ಥಾಪನೆ ಮಾಡಲು ನಿರ್ಧಾರ ಮಾಡಲಾಗಿದೆ. ಬ್ರೇನ್ ಹೆಲ್ತ್ ಇನಿಶಿಯೇಟಿವ್ ಅಡಿಯಲ್ಲಿ ಮೆದುಳಿನ ಆರೋಗ್ಯ, ಆರೈಕೆ, ತಲೆನೋವು ಹಾಗೂ ಒತ್ತಡ ನಿರ್ವಹಣೆ ಸೇರಿ ಹಲವು ಕಾರ್ಯಕ್ರಮಗಳಿಗೆ  ಬ್ರೇನ್ ಹೆಲ್ತ್ ಇನಿಶಿಯೇಟಿವ್ ಅನುವು ಮಾಡಲಿದೆ ಎಂದರು.

ಅನಿಮಿಯಾ ರಕ್ತಹೀನತೆ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಗೆ 185 ಕೋಟಿ

ಹೌದು, ಅನಿಮಿಯಾ ರಕ್ತಹೀನತೆ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಗೆ 185 ಕೋಟಿ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಐದು ವರ್ಷದ ಒಳಗಿನ ಮಕ್ಕಳು, ಗರ್ಭಿಣಿಯರಲ್ಲದ ಮಹಿಳೆಯರು ಸೇರಿದಂತೆ 15 ವರ್ಷ ಮೇಲ್ಪಟ್ಟ ಮಹಿಳೆಯರು ಇದರ ಸದುಪಯೋಗವನ್ನು ಪಡೆಯಬಹುದು. ಸಮೀಕ್ಷೆ ಆಧರಿಸಿ ಯೋಜನೆಯಡಿ ತರುವ ನಿರ್ಧಾರ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More