AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆಗೊಂಡ ಒಂದೇ ದಿನಕ್ಕೆ ಕಿತ್ತು ಹೋಯ್ತು 30 ಕೋಟಿ ರೂ. ವೆಚ್ಚದ ರಸ್ತೆ; ಕಮರ್ಷಿಯಲ್​ ಸ್ಟ್ರೀಟ್​ನ ಹೊಸ ರಸ್ತೆಗೆ ದುರಸ್ತಿ ಭಾಗ್ಯ

ಈ ಕಾಮಗಾರಿಗೆ ಬರೋಬ್ಬರಿ 30 ಕೋಟಿ ರೂಪಾಯಿ ವೆಚ್ಚ ತಗುಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನೇ ಕರೆಯಿಸಿ ಉದ್ಘಾಟನೆಯನ್ನೂ ಮಾಡಲಾಗಿತ್ತು. ಆದರೆ, ಬಹುಕೋಟಿ ವೆಚ್ಚದ ಕಾಮಗಾರಿಯಲ್ಲಾದ ಲೋಪ ದೋಷಗಳನ್ನು ಬೆಂಗಳೂರಿನ ಮಳೆ ಬಯಲು ಮಾಡಿದೆ.

ಉದ್ಘಾಟನೆಗೊಂಡ ಒಂದೇ ದಿನಕ್ಕೆ ಕಿತ್ತು ಹೋಯ್ತು 30 ಕೋಟಿ ರೂ. ವೆಚ್ಚದ ರಸ್ತೆ; ಕಮರ್ಷಿಯಲ್​ ಸ್ಟ್ರೀಟ್​ನ ಹೊಸ ರಸ್ತೆಗೆ ದುರಸ್ತಿ ಭಾಗ್ಯ
ಮಳೆಗೆ ಸಿಲುಕಿ ಹಾಳಾದ ಹೊಸ ರಸ್ತೆ
TV9 Web
| Updated By: Skanda|

Updated on:Jul 25, 2021 | 7:22 AM

Share

ಬೆಂಗಳೂರು: ಕರ್ನಾಟಕದಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲೂ ಪ್ರತಿನಿತ್ಯ ಸುರಿಯುತ್ತಿರುವ ಮಳೆಯಿಂದ (Bengaluru Rain) ಜನರು ತೊಂದರೆ ಅನುಭವಿಸುತ್ತಿದ್ದಾರೆ. ಇದರ ನಡುವೆ ಕಳಪೆ ಕಾಮಗಾರಿಯ ಕಾರಣಕ್ಕೆ ಹೊಸದಾಗಿ ಮಾಡಿದ ರಸ್ತೆಗಳು ಕೂಡಾ ಮಳೆಗೆ ಕೊಚ್ಚಿ ಹೋಗುತ್ತಿದ್ದು, ಓಡಾಟಕ್ಕೆ ಮತ್ತಷ್ಟು ಅಡೆತಡೆ ಉಂಟಾಗಿದೆ. ಬೆಂಗಳೂರಿನ ಕಮರ್ಷಿಯಲ್​ ಸ್ಟ್ರೀಟ್​ನಲ್ಲಿ (Commercial Street) ಮೊನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ (CM B.S Yediyurappa) ಖುದ್ದು ಹಾಜರಾಗಿ ಉದ್ಘಾಟಿಸಿದ್ದ ರಸ್ತೆ ಒಂದೇ ದಿನಕ್ಕೆ ಮಳೆಯಿಂದ ಹಾಳಾಗಿ ಹೋಗಿದೆ. ಭಾರೀ ಖರ್ಚು ಮಾಡಿ ನಿರ್ಮಿಸಿದ್ದ ರಸ್ತೆ ಒಂದು ಮಳೆಗೆ ಕಿತ್ತು ಹೋಗಿರುವುದು (Damage) ಕಳಪೆ ಕಾಮಗಾರಿಗೆ ಹಿಡಿದ ಕೈಗನ್ನಡಿಯಾಗಿದೆ.

ಕಮರ್ಷಿಯಲ್​ ಸ್ಟ್ರೀಟ್​ನಲ್ಲಿ ಓಡಾಟಕ್ಕೆ ಅನುವಾಗಲೆಂದು ಹೊಸದಾಗಿ ರಸ್ತೆ ನಿರ್ಮಿಸಿ ಅದಕ್ಕೆ ಇಂಟರ್​ಲಾಕ್​ ನಮೂನೆಯ ಕಲ್ಲುಗಳನ್ನು ಜೋಡಿಸಲಾಗಿತ್ತು. ಈ ಕಾಮಗಾರಿಗೆ ಬರೋಬ್ಬರಿ 30 ಕೋಟಿ ರೂಪಾಯಿ ವೆಚ್ಚ ತಗುಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನೇ ಕರೆಯಿಸಿ ಉದ್ಘಾಟನೆಯನ್ನೂ ಮಾಡಲಾಗಿತ್ತು. ಆದರೆ, ಬಹುಕೋಟಿ ವೆಚ್ಚದ ಕಾಮಗಾರಿಯಲ್ಲಾದ ಲೋಪ ದೋಷಗಳನ್ನು ಬೆಂಗಳೂರಿನ ಮಳೆ ಬಯಲು ಮಾಡಿದೆ. ಒಂದೇ ಒಂದು ಮಳೆಗೆ ರಸ್ತೆಗೆ ಹಾಕಲಾಗಿದ್ದ ಕಲ್ಲುಗಳೆಲ್ಲಾ ಕಿತ್ತೆದ್ದು ಬಂದಿದ್ದು, ಕಳಪೆ ಕಾಮಗಾರಿ ಮಾಡಿರುವುದು ಬಹಿರಂಗವಾಗಿದೆ.

BENGALURU

ರಸ್ತೆಗೆ ಹಾಕಲಾದ ಕಲ್ಲುಗಳು ಕಿತ್ತೆದ್ದು ಹೋಗಿವೆ

ಭಾರೀ ಖರ್ಚು ಮಾಡಿ ಮೇಲ್ನೋಟಕ್ಕೆ ಅತ್ಯಾಕರ್ಷಕವಾಗಿ ಕಾಣುವಂತೆ ರಸ್ತೆ ನಿರ್ಮಿಸಿ ಕಳಪೆ ಕೆಲಸ ಮಾಡುವ ಬದಲು, ಅಚ್ಚುಕಟ್ಟಾಗಿ ಕೆಲಸ ಮಾಡಿ ಜನರ ಓಡಾಟಕ್ಕೆ ತೊಂದರೆಯಾಗದಂತೆ ಸುಭದ್ರ ರಸ್ತೆಗಳನ್ನು ನಿರ್ಮಾಣ ಮಾಡುವುದು ಉತ್ತಮ. ಕೋಟಿ ಕೋಟಿ ಖರ್ಚು ಮಾಡಿ, ಒಂದೇ ಮಳೆಗೆ ಅದರ ಅಸಲಿ ಬಣ್ಣ ಬಯಲಾಗುವುದಾರೆ ಇಂತಹ ಕಾಮಗಾರಿಗಳು ಏಕೆ ಬೇಕು ಎಂದು ಸಾರ್ವಜನಿಕರು ಈ ರಸ್ತೆಯ ಅವ್ಯವಸ್ಥೆಯನ್ನು ನೋಡಿ ಪ್ರಶ್ನೆ ಎತ್ತಿದ್ದಾರೆ.

ನೆರೆ ಹಾನಿ ವೀಕ್ಷಣೆಗೆ ತೆರಳಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ: ಭಾರೀ ಮಳೆಯಿಂದ ಹಾನಿಗೊಳಗಾಗಿರುವ ಬೆಳಗಾವಿ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡುತ್ತಿದ್ದಾರೆ. ಬೆಳಗ್ಗೆ 9ಕ್ಕೆ ಬೆಂಗಳೂರಿನಿಂದ ಬೆಳಗಾವಿಯತ್ತ ಪ್ರಯಾಣ ಬೆಳೆಸುತ್ತಿರುವ ಅವರು, ಬೆಳಗ್ಗೆ 10.30ರಿಂದ ಮಧ್ಯಾಹ್ನ 1ರವರೆಗೆ ನೆರೆ ಹಾನಿ ವೀಕ್ಷಣೆ ಮಾಡಲಿದ್ದಾರೆ. ಜತೆಗೆ, ಮಳೆ, ನೆರೆಯಿಂದ ಹಾನಿಯಾದ ಪ್ರದೇಶಗಳಿಗೆ ತೆರಳಲಿದ್ದು, ಸಾಂತ್ವನ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 2.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವಗೋವಿಂದ ಕಾರಜೋಳ, ಸಂಸದರು, ಶಾಸಕರು, ಜಿಲ್ಲಾಡಳಿತದ ಜತೆ ಬೆಳಗಾವಿಯ ಸರ್ಕ್ಯೂಟ್​ಹೌಸ್​ನಲ್ಲಿ ಸಭೆ ನಡೆಸಿ, ಸಂಜೆ 4ಕ್ಕೆ ಬೆಳಗಾವಿಯಿಂದ ಬೆಂಗಳೂರಿಗೆ ವಾಪಾಸ್ಸಾಗಲಿದ್ದಾರೆ.

ಇದನ್ನೂ ಓದಿ: 20 ವರ್ಷ ಆದ್ರೂ ಗುಂಡಿ ಬೀಳದಂತೆ ರಸ್ತೆ ಅಭಿವೃದ್ಧಿ ಆಗಿದೆ; ಬೆಂಗಳೂರು ಸಿಟಿ ರೌಂಡ್ಸ್ ವೇಳೆ ಬಿಎಸ್ ಯಡಿಯೂರಪ್ಪ ಹೇಳಿಕೆ

ಮಲೆನಾಡಿನಲ್ಲಿ ಭಾರೀ ಮಳೆ: ಸೋರುತ್ತಿದೆ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆ, ಮುಳುಗುತ್ತಿವೆ ಜಮೀನು, ರಸ್ತೆ; ಎಲ್ಲೆಲ್ಲೂ ಅವ್ಯವಸ್ಥೆ

(Poor construction leads to damage of new road in Commercial street Bengaluru due to Rain)

Published On - 7:19 am, Sun, 25 July 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ