AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ ಕಾಮಗಾರಿಯಿಂದ ಬೆಂಗಳೂರಿನಲ್ಲಿ ಅನಾಹುತ, ರಸ್ತೆಯೊಳಕ್ಕೆ ಇಳಿಯಿತು ಲಾರಿ ಚಕ್ರ

ಕಳಪೆ ರಸ್ತೆಕಾಮಗಾರಿಯಿಂದ ನೆಲ ಕುಸಿದು ಟಿಪ್ಪರ್ ಗಾಡಿ ಪಲ್ಟಿಯಾಗಿದೆ. ರಿಚ್‌ಮಂಡ್ ರಸ್ತೆಯ ವುಡ್ಲ್ಯಾಂಡ್ ಹೋಟೆಲ್ ಬಳಿ ಟಿಪ್ಪರ್ ಲಾರಿ ಭಾರಕ್ಕೆ ರಸ್ತೆ ಕುಸಿದಿದೆ.

ಕಳಪೆ ಕಾಮಗಾರಿಯಿಂದ ಬೆಂಗಳೂರಿನಲ್ಲಿ ಅನಾಹುತ, ರಸ್ತೆಯೊಳಕ್ಕೆ ಇಳಿಯಿತು ಲಾರಿ ಚಕ್ರ
ಕಳಪೆ ಕಾಮಗಾರಿಯಿಂದ ಬೆಂಗಳೂರಿನಲ್ಲಿ ಅನಾಹುತ, ರಸ್ತೆಯೊಳಕ್ಕೆ ಇಳಿಯಿತು ಲಾರಿ ಚಕ್ರ
TV9 Web
| Edited By: |

Updated on:Sep 01, 2021 | 9:31 AM

Share

ಬೆಂಗಳೂರು: ಕಳಪೆ ಕಾಮಗಾರಿಯಿಂದ ರಸ್ತೆ ಕುಸಿದು ಲಾರಿ ಪಲ್ಟಿಯಾದ ಘಟನೆ ಬೆಂಗಳೂರಿನ ರಿಚ್‌ಮಂಡ್ ರಸ್ತೆಯಲ್ಲಿ ನಡೆದಿದೆ. ಲಾರಿ ಸೈಡ್‌ಗೆ ನಿಲ್ಲಿಸಿ ವಿಳಾಸ ಕೇಳುವ ವೇಳೆ ಘಟನೆ ಸಂಭವಿಸಿದ್ದು ಪೊಲೀಸರು ಪಲ್ಟಿಯಾದ ಲಾರಿ ತೆರವು ಮಾಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವೊಂದು ವೈರಲ್ ವಿಡಿಯೋದಲ್ಲಿ ಇಂತಹ ದೃಶ್ಯಗಳನ್ನು ನಾವು ನೋಡಿರುತ್ತೇವೆ. ಆದ್ರೆ ಇಂದು ಬೆಂಗಳೂರಿನಲ್ಲೇ ಇಂತಹ ಭೀಕರ ಘಟನೆ ಸಂಭವಿಸಿದೆ. ಕಳಪೆ ರಸ್ತೆಕಾಮಗಾರಿಯಿಂದ ನೆಲ ಕುಸಿದು ಟಿಪ್ಪರ್ ಗಾಡಿ ಪಲ್ಟಿಯಾಗಿದೆ. ರಿಚ್‌ಮಂಡ್ ರಸ್ತೆಯ ವುಡ್ಲ್ಯಾಂಡ್ ಹೋಟೆಲ್ ಬಳಿ ಟಿಪ್ಪರ್ ಲಾರಿ ಭಾರಕ್ಕೆ ರಸ್ತೆ ಕುಸಿದಿದೆ. ಟಿಪ್ಪರ್ ಲಾರಿ ಸಂಪಂಗಿ ರಾಮನಗರದ ಸೆಂಚುರಿ ಅಪಾರ್ಟ್ ಮೆಂಟ್ ಕಡೆ ಕಾಮಗಾರಿಗೆ ಡಸ್ಟ್ ಸಾಗಿಸುತ್ತಿತ್ತು. ಈ ವೇಳೆ ರಸ್ತೆ ಪಕ್ಕಕ್ಕೆ ಲಾರಿ ನಿಲ್ಲಿಸಿ ಅಡ್ರಸ್ ಕೇಳುವಷ್ಟರಲ್ಲಿ ಹೆಚ್ಚು ಬಾರ ಇದ್ದ ಕಾರಣ ರಸ್ತೆಯೊಳಗೆ ವಾಹನದ ಟೈರ್ ಇಳಿದಿದೆ. ಸದ್ಯ ಚಾಲಕ ವಾಹನದಿಂದ ಕೆಳಗಿಳಿದಿದ್ದ ಕಾರಣ ಅನಾಹುತ ತಪ್ಪಿದೆ.

ಕಳಪೆ ಕಾಮಗಾರಿಯಿಂದಲೇ ಈ ಘಟನೆ ನಡೆದಿದ್ದು ಕ್ರೇನ್ ಮೂಲಕ ಸಂಚಾರಿ ಪೊಲೀಸರಿಂದ ತೆರವು ಕಾರ್ಯಾಚರಣೆ ನಡೆದಿದೆ.

Lorry

ಲಾರಿ ಭಾರಕ್ಕೆ ಕುಸಿದ ರಸ್ತೆ

ಇದನ್ನೂ ಓದಿ: ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣಕ್ಕೆ ಸುಮಲತಾ ಗುದ್ದಲಿ ಪೂಜೆ; ಪುತ್ರನ ರಾಜಕೀಯ ಅಭಿಷೇಕಕ್ಕೆ ಅಡಿಪಾಯ ಹಾಕಿದರಾ?

ಅಪಘಾತಕ್ಕೂ ಮುನ್ನ ಜಿಗ್​ಜ್ಯಾಗ್​ ರೈಡ್: ತಪಾಸಣೆಗೆ ಬಂದ ಪೊಲೀಸ್​ ಮೇಲೆ ಕಾರು ಹತ್ತಿಸೋ ಯತ್ನ, ಜೊಮ್ಯಾಟೋ ಹುಡುಗ ಜಸ್ಟ್​ ಮಿಸ್

Published On - 9:27 am, Wed, 1 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!