ಕಳಪೆ ಕಾಮಗಾರಿಯಿಂದ ಬೆಂಗಳೂರಿನಲ್ಲಿ ಅನಾಹುತ, ರಸ್ತೆಯೊಳಕ್ಕೆ ಇಳಿಯಿತು ಲಾರಿ ಚಕ್ರ

ಕಳಪೆ ರಸ್ತೆಕಾಮಗಾರಿಯಿಂದ ನೆಲ ಕುಸಿದು ಟಿಪ್ಪರ್ ಗಾಡಿ ಪಲ್ಟಿಯಾಗಿದೆ. ರಿಚ್‌ಮಂಡ್ ರಸ್ತೆಯ ವುಡ್ಲ್ಯಾಂಡ್ ಹೋಟೆಲ್ ಬಳಿ ಟಿಪ್ಪರ್ ಲಾರಿ ಭಾರಕ್ಕೆ ರಸ್ತೆ ಕುಸಿದಿದೆ.

ಕಳಪೆ ಕಾಮಗಾರಿಯಿಂದ ಬೆಂಗಳೂರಿನಲ್ಲಿ ಅನಾಹುತ, ರಸ್ತೆಯೊಳಕ್ಕೆ ಇಳಿಯಿತು ಲಾರಿ ಚಕ್ರ
ಕಳಪೆ ಕಾಮಗಾರಿಯಿಂದ ಬೆಂಗಳೂರಿನಲ್ಲಿ ಅನಾಹುತ, ರಸ್ತೆಯೊಳಕ್ಕೆ ಇಳಿಯಿತು ಲಾರಿ ಚಕ್ರ
Follow us
| Updated By: ಆಯೇಷಾ ಬಾನು

Updated on:Sep 01, 2021 | 9:31 AM

ಬೆಂಗಳೂರು: ಕಳಪೆ ಕಾಮಗಾರಿಯಿಂದ ರಸ್ತೆ ಕುಸಿದು ಲಾರಿ ಪಲ್ಟಿಯಾದ ಘಟನೆ ಬೆಂಗಳೂರಿನ ರಿಚ್‌ಮಂಡ್ ರಸ್ತೆಯಲ್ಲಿ ನಡೆದಿದೆ. ಲಾರಿ ಸೈಡ್‌ಗೆ ನಿಲ್ಲಿಸಿ ವಿಳಾಸ ಕೇಳುವ ವೇಳೆ ಘಟನೆ ಸಂಭವಿಸಿದ್ದು ಪೊಲೀಸರು ಪಲ್ಟಿಯಾದ ಲಾರಿ ತೆರವು ಮಾಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವೊಂದು ವೈರಲ್ ವಿಡಿಯೋದಲ್ಲಿ ಇಂತಹ ದೃಶ್ಯಗಳನ್ನು ನಾವು ನೋಡಿರುತ್ತೇವೆ. ಆದ್ರೆ ಇಂದು ಬೆಂಗಳೂರಿನಲ್ಲೇ ಇಂತಹ ಭೀಕರ ಘಟನೆ ಸಂಭವಿಸಿದೆ. ಕಳಪೆ ರಸ್ತೆಕಾಮಗಾರಿಯಿಂದ ನೆಲ ಕುಸಿದು ಟಿಪ್ಪರ್ ಗಾಡಿ ಪಲ್ಟಿಯಾಗಿದೆ. ರಿಚ್‌ಮಂಡ್ ರಸ್ತೆಯ ವುಡ್ಲ್ಯಾಂಡ್ ಹೋಟೆಲ್ ಬಳಿ ಟಿಪ್ಪರ್ ಲಾರಿ ಭಾರಕ್ಕೆ ರಸ್ತೆ ಕುಸಿದಿದೆ. ಟಿಪ್ಪರ್ ಲಾರಿ ಸಂಪಂಗಿ ರಾಮನಗರದ ಸೆಂಚುರಿ ಅಪಾರ್ಟ್ ಮೆಂಟ್ ಕಡೆ ಕಾಮಗಾರಿಗೆ ಡಸ್ಟ್ ಸಾಗಿಸುತ್ತಿತ್ತು. ಈ ವೇಳೆ ರಸ್ತೆ ಪಕ್ಕಕ್ಕೆ ಲಾರಿ ನಿಲ್ಲಿಸಿ ಅಡ್ರಸ್ ಕೇಳುವಷ್ಟರಲ್ಲಿ ಹೆಚ್ಚು ಬಾರ ಇದ್ದ ಕಾರಣ ರಸ್ತೆಯೊಳಗೆ ವಾಹನದ ಟೈರ್ ಇಳಿದಿದೆ. ಸದ್ಯ ಚಾಲಕ ವಾಹನದಿಂದ ಕೆಳಗಿಳಿದಿದ್ದ ಕಾರಣ ಅನಾಹುತ ತಪ್ಪಿದೆ.

ಕಳಪೆ ಕಾಮಗಾರಿಯಿಂದಲೇ ಈ ಘಟನೆ ನಡೆದಿದ್ದು ಕ್ರೇನ್ ಮೂಲಕ ಸಂಚಾರಿ ಪೊಲೀಸರಿಂದ ತೆರವು ಕಾರ್ಯಾಚರಣೆ ನಡೆದಿದೆ.

Lorry

ಲಾರಿ ಭಾರಕ್ಕೆ ಕುಸಿದ ರಸ್ತೆ

ಇದನ್ನೂ ಓದಿ: ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣಕ್ಕೆ ಸುಮಲತಾ ಗುದ್ದಲಿ ಪೂಜೆ; ಪುತ್ರನ ರಾಜಕೀಯ ಅಭಿಷೇಕಕ್ಕೆ ಅಡಿಪಾಯ ಹಾಕಿದರಾ?

ಅಪಘಾತಕ್ಕೂ ಮುನ್ನ ಜಿಗ್​ಜ್ಯಾಗ್​ ರೈಡ್: ತಪಾಸಣೆಗೆ ಬಂದ ಪೊಲೀಸ್​ ಮೇಲೆ ಕಾರು ಹತ್ತಿಸೋ ಯತ್ನ, ಜೊಮ್ಯಾಟೋ ಹುಡುಗ ಜಸ್ಟ್​ ಮಿಸ್

Published On - 9:27 am, Wed, 1 September 21

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್