AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಕೆಲಸದಿಂದ ವಜಾಗೊಂಡ ನಂತರ ಜೀವನೋಪಾಯಕ್ಕಾಗಿ ರ‍್ಯಾಪಿಡೋ ಚಾಲಕನಾದ ಬೆಂಗಳೂರಿನ ಟೆಕ್ಕಿ

ಬೆಂಗಳೂರಿನ ಟೆಕ್ ಉದ್ಯೋಗಿಯು ರ‍್ಯಾಪಿಡೋ ಬೈಕ್ ಟ್ಯಾಕ್ಸಿಯನ್ನು ಓಡಿಸುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Viral Post: ಕೆಲಸದಿಂದ ವಜಾಗೊಂಡ ನಂತರ ಜೀವನೋಪಾಯಕ್ಕಾಗಿ ರ‍್ಯಾಪಿಡೋ ಚಾಲಕನಾದ ಬೆಂಗಳೂರಿನ ಟೆಕ್ಕಿ
ವೈರಲ್​ ಫೋಟೊ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 26, 2023 | 1:03 PM

ಬೆಂಗಳೂರು: ಹಲವು ದೈತ್ಯ ಟೆಕ್ ಕಂಪನಿಗಳಿಂದ ಈಗಾಗಲೇ ಅನೇಕರನ್ನು ಕೆಲಸದಿಂದ ವಜಾ ಮಾಡಿ ಮನೆಗೆ ಕಳುಹಿಸಲಾಗಿದೆ. ಇನ್ನೂ ಕೆಲವರು ಈ ಒತ್ತಡವೇ ಬೇಡ ಎಂದು ಬೇರೆ ಬೇರೆ ಕೆಲಸಗಳತ್ತ ಹೋಗುತ್ತಿದ್ದಾರೆ. ಇತ್ತೀಚೆಗೆ ಅದೆಷ್ಟೋ ಟೆಕ್​​ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ವಜಾ ಮಾಡಿತ್ತು, ಇನ್ನೂ ಕೆಲವರು ಕೆಲಸಕ್ಕೆ ರಾಜೀನಾಮೆ ನೀಡಿದರು. ಆದರೆ ಅವರು ಯಾರು ಧೈರ್ಯ ಕೆಳೆದುಕೊಳ್ಳದೇ, ಎಲ್ಲವೂ ಮುಗಿತ್ತು ಎಂದುಕೊಳ್ಳದೇ, ತಮ್ಮಲ್ಲಿಯೇ ಹೊಸ ಹೊಸ ವಿಚಾರಗಳಲ್ಲಿ ತೋಡಗಿಸಿಕೊಂಡು, ಟೆಕ್ಕಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕುತ್ತಿದ್ದಾರೆ. ಅನೇಕ ಟೆಕ್​​ ಉದ್ಯೋಗಿಗಳು ಸ್ವಾವಲಂಬಿಗಳಾಗಿ ಬದುಕುತ್ತಿದ್ದಾರೆ, ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲೂ ​ ಆಗ್ಗಾಗ್ಗೆ ವೈರಲ್ ಆಗುತ್ತಿರುತ್ತದೆ. ಇದೀಗ ಇಂತಹದೇ ಒಂದು ವೀಡಿಯೊ ವೈರಲ್ ಆಗಿದೆ, ಬೆಂಗಳೂರಿನ ಟೆಕ್ ಉದ್ಯೋಗಿಯು ರ‍್ಯಾಪಿಡೋ ಬೈಕ್ ಟ್ಯಾಕ್ಸಿಯನ್ನು ಓಡಿಸುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಹಿಂದೂಸ್ತಾನ್ ಕಂಪ್ಯೂಟರ್ಸ್ ಲಿಮಿಟೆಡ್ (HCL) ನಲ್ಲಿ ಉದ್ಯೋಗಿಯಾಗಿದ್ದ ಬೆಂಗಳೂರಿನ ಮಾಜಿ ಟೆಕ್ಕಿಯೊಬ್ಬರು ಜಾವಾ ಡೆವಲಪರ್ ಆಗಿ ಹೊಸ ಉದ್ಯೋಗವನ್ನು ಪಡೆಯಲು ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಓಡಿಸುತ್ತಿರುವುದು ಕಂಡುಬಂದಿದೆ. HCL ಕಂಪನಿಯಿಂದ ವಜಾಗೊಳಿಸಲಾಗಿತ್ತು. ಕೆಲಸ ಕಳೆದುಕೊಂಡ ನಂತರ ಜೀವನಕ್ಕಾಗಿ ಒಂದು ಕೆಲಸಬೇಕು ಎಂದು ಬೈಕ್ ಟ್ಯಾಕ್ಸಿ ಡ್ರೈವರ್ ಆಗಿ ಉದ್ಯೋಗ ಮಾಡುತ್ತಿದ್ದಾರೆ.

ಇದನ್ನೂ ಓದಿ:Viral Post : ಊಬರ್​ ಇಂಡಿಯಾ ಹೆಚ್ಚುವರಿ ಹಣವನ್ನು ಮರುಪಾವತಿಸುವುದೆ?

ಲೊವ್ನೀಶ್ ಧೀರ್ ಎಂಬ ವ್ಯಕ್ತಿ ಇತ್ತೀಚೆಗೆ ರ‍್ಯಾಪಿಡೋ ಚಾಲಕನ ಕಥೆಯನ್ನು ಹಂಚಿಕೊಂಡಿದ್ದು ಇದರ ಜತೆಗೆ ಅವರ ಸಿವಿಯನ್ನು ಕೂಡ ಟ್ವಿಟರ್​ನಲ್ಲಿ ಟ್ವೀಟ್​​ ಮಾಡಿದ್ದಾರೆ, ನಾನು Rapido ಡ್ರೈವರ್​​ ಆಗಿ ಕೆಲಸ ಮಾಡುತ್ತಿದ್ದು, ಇತ್ತಿಚೇಗೆ ನನ್ನನ್ನೂ HCL ಕಂಪನಿಯಿಂದ ವಜಾ ಮಾಡಲಾಗಿತ್ತು. ಅನೇಕ ಟಿಕ್ಕಿಗಳು ಇಂತಹ ಹಾದಿಯಲ್ಲಿ ಸಾಗುತ್ತಿದ್ದಾರೆ. ಅವರ ಸಿವಿ ನನ್ನ ಬಳಿ ಇದೆ. ಅವರು ಕೂಡ Rapido ಆಯ್ಕೆ ಮಾಡಿಕೊಳ್ಳುತ್ತಾರೆ. ಐಟಿ ರಾಜಧಾನಿಯಲ್ಲಿ ಇಂತಹ ನಿದರ್ಶನಗಳು ತುಂಬಾ ಸಾಮಾನ್ಯವಲ್ಲ ಏಕೆಂದರೆ ನಗರದಲ್ಲಿ ಲಕ್ಷಗಟ್ಟಲೆ ಟೆಕ್ಕಿಗಳು ನೆಲೆಯಾಗಿದ್ದಾರೆ. ಈ ಟ್ವಿಟ್​​ ಅನೇಕ ವಜಾಗೊಂಡಿರುವ ಟಿಕ್ಕಿ ಉದ್ಯೋಗಿಗೆ ಸಹಾಯ ಮಾಡಬಹುದು. ಈಗಾಗಲೇ ಅನೇಕರನ್ನು ವಜಾ ಮಾಡಲು HRಗಳು ಸಿದ್ಧತೆ ನಡೆಸಿದ್ದಾರೆ ಎಂದು ವರದಿಯೊಂದು ಹೇಳಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಬಳಕೆದಾರರು ಕೂಡ ಕಮೆಂಟ್​ ಮಾಡಿದ್ದಾರೆ, ನನ್ನ ವಜಾದ ಬಗ್ಗೆ ಈಗಾಗಲೇ ತಿಳಿಸಿದ್ದಾರೆ. ಸೋಮವಾರದ ವೇಳೆಗೆ ಅವರಿಗೆ HR ನಿಂದ ಕರೆ ಬರಬಹುದು ಎಂದು ಹೇಳಿದ್ದಾರೆ. ವ್ಯಕ್ತಿಯ CV ಪ್ರಕಾರ, ಅವರು ಸೆಪ್ಟೆಂಬರ್ 2020ರಿಂದ ಜೂನ್ 2023 ರವರೆಗೆ HCL ನಲ್ಲಿ ಕೆಲಸ ಮಾಡಿದ್ದಾರೆ ಎಂದು ಹೇಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Mon, 26 June 23

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್