AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಕೆಲಸದಿಂದ ವಜಾಗೊಂಡ ನಂತರ ಜೀವನೋಪಾಯಕ್ಕಾಗಿ ರ‍್ಯಾಪಿಡೋ ಚಾಲಕನಾದ ಬೆಂಗಳೂರಿನ ಟೆಕ್ಕಿ

ಬೆಂಗಳೂರಿನ ಟೆಕ್ ಉದ್ಯೋಗಿಯು ರ‍್ಯಾಪಿಡೋ ಬೈಕ್ ಟ್ಯಾಕ್ಸಿಯನ್ನು ಓಡಿಸುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Viral Post: ಕೆಲಸದಿಂದ ವಜಾಗೊಂಡ ನಂತರ ಜೀವನೋಪಾಯಕ್ಕಾಗಿ ರ‍್ಯಾಪಿಡೋ ಚಾಲಕನಾದ ಬೆಂಗಳೂರಿನ ಟೆಕ್ಕಿ
ವೈರಲ್​ ಫೋಟೊ
ಅಕ್ಷಯ್​ ಪಲ್ಲಮಜಲು​​
|

Updated on:Jun 26, 2023 | 1:03 PM

Share

ಬೆಂಗಳೂರು: ಹಲವು ದೈತ್ಯ ಟೆಕ್ ಕಂಪನಿಗಳಿಂದ ಈಗಾಗಲೇ ಅನೇಕರನ್ನು ಕೆಲಸದಿಂದ ವಜಾ ಮಾಡಿ ಮನೆಗೆ ಕಳುಹಿಸಲಾಗಿದೆ. ಇನ್ನೂ ಕೆಲವರು ಈ ಒತ್ತಡವೇ ಬೇಡ ಎಂದು ಬೇರೆ ಬೇರೆ ಕೆಲಸಗಳತ್ತ ಹೋಗುತ್ತಿದ್ದಾರೆ. ಇತ್ತೀಚೆಗೆ ಅದೆಷ್ಟೋ ಟೆಕ್​​ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ವಜಾ ಮಾಡಿತ್ತು, ಇನ್ನೂ ಕೆಲವರು ಕೆಲಸಕ್ಕೆ ರಾಜೀನಾಮೆ ನೀಡಿದರು. ಆದರೆ ಅವರು ಯಾರು ಧೈರ್ಯ ಕೆಳೆದುಕೊಳ್ಳದೇ, ಎಲ್ಲವೂ ಮುಗಿತ್ತು ಎಂದುಕೊಳ್ಳದೇ, ತಮ್ಮಲ್ಲಿಯೇ ಹೊಸ ಹೊಸ ವಿಚಾರಗಳಲ್ಲಿ ತೋಡಗಿಸಿಕೊಂಡು, ಟೆಕ್ಕಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕುತ್ತಿದ್ದಾರೆ. ಅನೇಕ ಟೆಕ್​​ ಉದ್ಯೋಗಿಗಳು ಸ್ವಾವಲಂಬಿಗಳಾಗಿ ಬದುಕುತ್ತಿದ್ದಾರೆ, ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲೂ ​ ಆಗ್ಗಾಗ್ಗೆ ವೈರಲ್ ಆಗುತ್ತಿರುತ್ತದೆ. ಇದೀಗ ಇಂತಹದೇ ಒಂದು ವೀಡಿಯೊ ವೈರಲ್ ಆಗಿದೆ, ಬೆಂಗಳೂರಿನ ಟೆಕ್ ಉದ್ಯೋಗಿಯು ರ‍್ಯಾಪಿಡೋ ಬೈಕ್ ಟ್ಯಾಕ್ಸಿಯನ್ನು ಓಡಿಸುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಹಿಂದೂಸ್ತಾನ್ ಕಂಪ್ಯೂಟರ್ಸ್ ಲಿಮಿಟೆಡ್ (HCL) ನಲ್ಲಿ ಉದ್ಯೋಗಿಯಾಗಿದ್ದ ಬೆಂಗಳೂರಿನ ಮಾಜಿ ಟೆಕ್ಕಿಯೊಬ್ಬರು ಜಾವಾ ಡೆವಲಪರ್ ಆಗಿ ಹೊಸ ಉದ್ಯೋಗವನ್ನು ಪಡೆಯಲು ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಓಡಿಸುತ್ತಿರುವುದು ಕಂಡುಬಂದಿದೆ. HCL ಕಂಪನಿಯಿಂದ ವಜಾಗೊಳಿಸಲಾಗಿತ್ತು. ಕೆಲಸ ಕಳೆದುಕೊಂಡ ನಂತರ ಜೀವನಕ್ಕಾಗಿ ಒಂದು ಕೆಲಸಬೇಕು ಎಂದು ಬೈಕ್ ಟ್ಯಾಕ್ಸಿ ಡ್ರೈವರ್ ಆಗಿ ಉದ್ಯೋಗ ಮಾಡುತ್ತಿದ್ದಾರೆ.

ಇದನ್ನೂ ಓದಿ:Viral Post : ಊಬರ್​ ಇಂಡಿಯಾ ಹೆಚ್ಚುವರಿ ಹಣವನ್ನು ಮರುಪಾವತಿಸುವುದೆ?

ಲೊವ್ನೀಶ್ ಧೀರ್ ಎಂಬ ವ್ಯಕ್ತಿ ಇತ್ತೀಚೆಗೆ ರ‍್ಯಾಪಿಡೋ ಚಾಲಕನ ಕಥೆಯನ್ನು ಹಂಚಿಕೊಂಡಿದ್ದು ಇದರ ಜತೆಗೆ ಅವರ ಸಿವಿಯನ್ನು ಕೂಡ ಟ್ವಿಟರ್​ನಲ್ಲಿ ಟ್ವೀಟ್​​ ಮಾಡಿದ್ದಾರೆ, ನಾನು Rapido ಡ್ರೈವರ್​​ ಆಗಿ ಕೆಲಸ ಮಾಡುತ್ತಿದ್ದು, ಇತ್ತಿಚೇಗೆ ನನ್ನನ್ನೂ HCL ಕಂಪನಿಯಿಂದ ವಜಾ ಮಾಡಲಾಗಿತ್ತು. ಅನೇಕ ಟಿಕ್ಕಿಗಳು ಇಂತಹ ಹಾದಿಯಲ್ಲಿ ಸಾಗುತ್ತಿದ್ದಾರೆ. ಅವರ ಸಿವಿ ನನ್ನ ಬಳಿ ಇದೆ. ಅವರು ಕೂಡ Rapido ಆಯ್ಕೆ ಮಾಡಿಕೊಳ್ಳುತ್ತಾರೆ. ಐಟಿ ರಾಜಧಾನಿಯಲ್ಲಿ ಇಂತಹ ನಿದರ್ಶನಗಳು ತುಂಬಾ ಸಾಮಾನ್ಯವಲ್ಲ ಏಕೆಂದರೆ ನಗರದಲ್ಲಿ ಲಕ್ಷಗಟ್ಟಲೆ ಟೆಕ್ಕಿಗಳು ನೆಲೆಯಾಗಿದ್ದಾರೆ. ಈ ಟ್ವಿಟ್​​ ಅನೇಕ ವಜಾಗೊಂಡಿರುವ ಟಿಕ್ಕಿ ಉದ್ಯೋಗಿಗೆ ಸಹಾಯ ಮಾಡಬಹುದು. ಈಗಾಗಲೇ ಅನೇಕರನ್ನು ವಜಾ ಮಾಡಲು HRಗಳು ಸಿದ್ಧತೆ ನಡೆಸಿದ್ದಾರೆ ಎಂದು ವರದಿಯೊಂದು ಹೇಳಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಬಳಕೆದಾರರು ಕೂಡ ಕಮೆಂಟ್​ ಮಾಡಿದ್ದಾರೆ, ನನ್ನ ವಜಾದ ಬಗ್ಗೆ ಈಗಾಗಲೇ ತಿಳಿಸಿದ್ದಾರೆ. ಸೋಮವಾರದ ವೇಳೆಗೆ ಅವರಿಗೆ HR ನಿಂದ ಕರೆ ಬರಬಹುದು ಎಂದು ಹೇಳಿದ್ದಾರೆ. ವ್ಯಕ್ತಿಯ CV ಪ್ರಕಾರ, ಅವರು ಸೆಪ್ಟೆಂಬರ್ 2020ರಿಂದ ಜೂನ್ 2023 ರವರೆಗೆ HCL ನಲ್ಲಿ ಕೆಲಸ ಮಾಡಿದ್ದಾರೆ ಎಂದು ಹೇಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Mon, 26 June 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ