AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Potholes: ಬಿಬಿಎಂಪಿಯ ಅವ್ಯವಸ್ಥೆ ಮತ್ತೊಮ್ಮೆ ಬೆಳಕಿಗೆ, ಯಲಹಂಕದಲ್ಲಿ ರಸ್ತೆಗುಂಡಿಗೆ ಮತ್ತೊಂದು ಬಲಿ

ಬೆಂಗಳೂರಿನ ರಸ್ತೆಗಳ ಸಮಪರ್ಕ ನಿರ್ವಹಣೆ ಇಲ್ಲದ ಕಾರಣ, ಅಪಘಾತಗಳು ಹೆಚ್ಚಾಗುತ್ತಿವೆ. ಬೆಂಗಳೂರಿನ ರಸ್ತೆಗುಂಡಿ ಮತ್ತೊಂದು ಬಲಿ ಪಡೆದಿದೆ. ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ಶನಿವಾರ ರಾತ್ರಿ ನಡೆದ ಘಟನೆಯಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.

Potholes: ಬಿಬಿಎಂಪಿಯ ಅವ್ಯವಸ್ಥೆ ಮತ್ತೊಮ್ಮೆ ಬೆಳಕಿಗೆ, ಯಲಹಂಕದಲ್ಲಿ ರಸ್ತೆಗುಂಡಿಗೆ ಮತ್ತೊಂದು ಬಲಿ
PotholeImage Credit source: Twitter: Representative Image
TV9 Web
| Edited By: |

Updated on: Oct 30, 2022 | 10:27 AM

Share

ಬೆಂಗಳೂರಿನ ರಸ್ತೆಗಳ ಸಮಪರ್ಕ ನಿರ್ವಹಣೆ ಇಲ್ಲದ ಕಾರಣ, ಅಪಘಾತಗಳು ಹೆಚ್ಚಾಗುತ್ತಿವೆ. ಬೆಂಗಳೂರಿನ ರಸ್ತೆಗುಂಡಿ ಮತ್ತೊಂದು ಬಲಿ ಪಡೆದಿದೆ. ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ಶನಿವಾರ ರಾತ್ರಿ ನಡೆದ ಘಟನೆಯಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.

ಗುಂಡಿ ತಪ್ಪಿಸಲು ಹೋಗಿ ಕಾರೊಂದು ಪಲ್ಟಿಯಾಗಿದ್ದು, ಆ ಸಂದರ್ಭದಲ್ಲಿ ಮುಂದೆ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಯುವಕನಿಗೆ ಗಂಭೀರ ಗಾಯಗಳಾಗಿವೆ. ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯ ಟಿವಿ9ನಗೆ ಲಭ್ಯವಾಗಿದೆ. ಹೊಂಡಗಳಿರುವ ರಸ್ತೆಗಳಿಂದ ಪದೇ ಪದೇ ಅಪಘಾತವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೀಪಾವಳಿ ಹಬ್ಬದ ಹಿನ್ನೆಲೆ ಸರಣಿ ರಜೆ ಹಾಗೂ ಮಳೆ ಕೊಂಚ ಬಿಡುವು ನೀಡಿತ್ತು. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗುಂಡಿ ಬಿದ್ದಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಬಿಬಿಎಂಪಿ ಚುರುಕುಗೊಳಿಸುವುದಾಗಿ ಹೇಳಿದೆ.

ನಗರದ ಎಂಟು ವಲಯಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ, ದುರಸ್ತಿ ಮಾಡುವ ಕಾರ್ಯ ಆರಂಭವಾಗಿದೆ. ಬಿನ್ನಿಮೀಲ್ಸ್, ವಿಲ್ಸನ್ ಗಾರ್ಡನ್, ಔಟರ್ ರಿಂಗ್ ರಸ್ತೆ ಸವೀರ್‍ಸ್ ರಸ್ತೆ, ದೊಡ್ಡಾನೆಕುಂದಿ, ಮಾರತ್‌ಹಳ್ಳಿ, ಇಬ್ಬಲೂರು, ಇಮ್ಮಡಿಹಳ್ಳಿ ರಸ್ತೆ, ಹಗದೂರು ರಸ್ತೆ, ವೈಟ್‌ಫೀಲ್ಡ್ ರಸ್ತೆ, ಸಿದ್ದಾಪುರ ನಲ್ಲೂರಹಳ್ಳಿ ರಸ್ತೆ, ಗುಂಜೂರು ರಸ್ತೆ, ಶಾಂತಿನಗರ, ಆರ್ ಟಿನಗರ ಸೇರಿದಂತೆ ಇತರೆ ಕಡೆಗಳಲ್ಲಿ ಕೆಲಸ ಶುರುವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಬೆಂಗಳೂರಲ್ಲಿ 20 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳಿರುವುದು ಸಮೀಕ್ಷೆಯಿಂದ ತಿಳಿದು ಬಂದಿದೆ. ಮತ್ತೊಂದೆಡೆ, ಯಲಹಂಕದಲ್ಲಿ ಬಿಬಿಎಂಪಿ ತನ್ನ ಸ್ವಂತ ಡಾಂಬರು ಘಟಕವನ್ನು ಹೊಂದಿದೆ. ಇದಲ್ಲದೆ, ಯಲಹಂಕ, ದಕ್ಷಿಣ, ಪಶ್ಚಿಮ, ಪೂರ್ವ ವಲಯದಲ್ಲಿ ಖಾಸಗಿಯವರಿಂದ ತಲಾ ಒಂದು ಘಟಕವನ್ನು ಬಾಡಿಗೆ ಆಧಾರದಲ್ಲಿ ಪಡೆದುಕೊಳ್ಳಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ