AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಕ್ಕಚಾರದಲ್ಲಿ ಗೊಂದಲ! ಹೇಳಿದ್ದು 2 ಸಾವಿರ ರಸ್ತೆ ಗುಂಡಿ, ಆದ್ರೆ ಮುಚ್ಚಿದ್ದು 31 ಸಾವಿರ; 7 ಕೋಟಿ ಬಿಲ್ ನೋಡಿ ತಲೆ ಮೇಲೆ ಕೈ ಹೊತ್ತ ಬಿಬಿಎಂಪಿ

ನಗರದಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ, JMC ಕಂಪನಿಗೆ ಗುತ್ತಿಗೆ ನೀಡಿತ್ತು. ಹೀಗಾಗಿ 2 ತಿಂಗಳಲ್ಲಿ 31 ಸಾವಿರ ರಸ್ತೆ ಗುಂಡಿ ಮುಚ್ಚಿದ್ದಾಗಿ JMC ಕಂಪನಿ ಲೆಕ್ಕ ನೀಡಿದೆ.

ಲೆಕ್ಕಚಾರದಲ್ಲಿ ಗೊಂದಲ! ಹೇಳಿದ್ದು 2 ಸಾವಿರ ರಸ್ತೆ ಗುಂಡಿ, ಆದ್ರೆ ಮುಚ್ಚಿದ್ದು 31 ಸಾವಿರ; 7 ಕೋಟಿ ಬಿಲ್ ನೋಡಿ ತಲೆ ಮೇಲೆ ಕೈ ಹೊತ್ತ ಬಿಬಿಎಂಪಿ
ರಸ್ತೆ ಗುಂಡಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 27, 2021 | 7:54 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳದ್ದೇ ದೊಡ್ಡ ತಲೆ ನೋವಾಗಿದೆ. ಅದರಲ್ಲೂ ಮಳೆ ಬಂದ ಸಮಯದಲ್ಲಂತೂ ವಾಹನ ಸವಾರರ ಪ್ರಾಣ ತೆಗೆಯಲು ಯಮನಂತೆ ಬಾಯಿ ತೆರೆದಿರುತ್ತವೆ. ಸದ್ಯ ಗುಂಡಿ ಮುಚ್ಚಲು ಬಿಬಿಎಂಪಿ ಮುಂದಾಗಿದ್ದು ಈಗ ಮತ್ತೊಂದು ಸಮಸ್ಯೆ ಎದುರಾಗಿದೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿ ಲೆಕ್ಕಾಚಾರದಲ್ಲಿ ಗೊಂದಲ ಉಂಟಾಗಿದೆ.

ಗುತ್ತಿಗೆದಾರನದ್ದು ಒಂದು ಲೆಕ್ಕವಾದ್ರೆ ಬಿಬಿಎಂಪಿದೊಂದು ಲೆಕ್ಕವಾಗಿದೆ. ಈ ಎರಡು ಲೆಕ್ಕಾಚಾರಕ್ಕೆ ಎಲ್ಲೂ ತಾಳೆಯೇ ಆಗುತ್ತಿಲ್ಲ. ಲೆಕ್ಕಾಚಾರದಲ್ಲಿ ಅಜಗಜಾಂತರ ಹೇಗೆ ಆಯಿತೆಂಬ ಪ್ರಶ್ನೆ ಉದ್ಭವಿಸಿದೆ. ನಗರದಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ, JMC ಕಂಪನಿಗೆ ಗುತ್ತಿಗೆ ನೀಡಿತ್ತು. ಹೀಗಾಗಿ 2 ತಿಂಗಳಲ್ಲಿ 31 ಸಾವಿರ ರಸ್ತೆ ಗುಂಡಿ ಮುಚ್ಚಿದ್ದಾಗಿ JMC ಕಂಪನಿ ಲೆಕ್ಕ ನೀಡಿದೆ. ಆದ್ರೆ ಬೆಂಗಳೂರಿನಲ್ಲಿ ಕೇವಲ ಒಂದೆರಡು ಸಾವಿರ ರಸ್ತೆ ಗುಂಡಿಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ. ಸದ್ಯ ಈಗ ಗುಂಡಿಗಳ ಲೆಕ್ಕಚಾರದಲ್ಲಿ ಗೊಂದಲ ಉಂಟಾಗಿದೆ.

JMC ಕಂಪನಿ ಆಗಸ್ಟ್ ತಿಂಗಳ ಅಂತ್ಯದಿಂದ ಗುಂಡಿ ಮುಚ್ಚುವ ಕಾರ್ಯ ಶುರು ಮಾಡಿದ್ದು ಈವರೆಗೆ 31 ಸಾವಿರ ರಸ್ತೆ ಗುಂಡಿ ಮುಚ್ಚಿದ್ದಾಗಿ ಲೆಕ್ಕ ನೀಡಿದೆ. ಆದ್ರೆ ಬಿಬಿಎಂಪಿ ಹೇಳಿರುವುದು ಕೇವಲ ಒಂದೆರಡು ಸಾವಿರ ಲೆಕ್ಕ. ನಗರದಲ್ಲಿ 1-2 ಸಾವಿರ ರಸ್ತೆ ಗುಂಡಿ ಇದೆ ಎಂದು ಸೆಪ್ಟೆಂಬರ್‌ನಲ್ಲಿ BBMP ಲೆಕ್ಕ ಕೊಟ್ಟಿತ್ತು. ಬಿಬಿಎಂಪಿ ಪ್ರಕಾರ ರಸ್ತೆ ಗುಂಡಿ ಇರೋದು 1-2 ಸಾವಿರ. ಆದ್ರೆ ಗುತ್ತಿಗೆದಾರ 31 ಸಾವಿರ ರಸ್ತೆ ಗುಂಡಿ ಮುಚ್ಚಿದ್ದು ಹೇಗೆ? ರಸ್ತೆ ಗುಂಡಿ ಲೆಕ್ಕ ತಪ್ಪಾಗಿ ನೀಡುತ್ತಿರುವುದು ಯಾರೆಂಬ ಪ್ರಶ್ನೆ ಎದುರಾಗಿದೆ. ರಸ್ತೆ ಗುಂಡಿ ಮುಚ್ಚಲು 760 ಲೋಡ್ ಟಾರ್ ಬಳಸಿದ್ದ ಲೆಕ್ಕ ನೀಡಲಾಗಿದ್ದು ಗುತ್ತಿಗೆದಾರನ ಬಳಿ 7 ಕೋಟಿ ರೂಪಾಯಿ ಬಿಲ್ ಲೆಕ್ಕ ಇದೆ.

ಇದನ್ನೂ ಓದಿ: ಹೂವಿನಿಂದಲೂ ಗಾಯ ಆಗಬಹುದು; ನೆಚ್ಚಿನ ನಾಯಕನಿಗೆ ಪುಷ್ಪಾರ್ಚನೆ ಮಾಡುವ ಅಭಿಮಾನಿಗಳೆ ಎಚ್ಚರ

Follow Us
Web contact
Web contact

TV9 Kannada

Read More
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ