AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sumanahalli Flyover: ಸುಮನಹಳ್ಳಿ ಫ್ಲೈಓವರ್​ ಮೇಲೆ ಕಬ್ಬಿಣದ ಸರಳು ಕಾಣಿಸುವಷ್ಟು ಆಳದ ಗುಂಡಿ, ಪ್ರಯಾಣಿಕರಿಂದ ತೀವ್ರ ಆಕ್ರೋಶ

ಫ್ಲೈಓವರ್​ ಮೇಲೆ ಬಿದ್ದಿರುವ ರಂಧ್ರದಿಂದ ಕೆಳಗಿನ ರಸ್ತೆ ಕಾಣಿಸುತ್ತಿರುವುದು ಜನರ ಆತಂಕವನ್ನು ಹೆಚ್ಚು ಮಾಡಿದೆ.

Sumanahalli Flyover: ಸುಮನಹಳ್ಳಿ ಫ್ಲೈಓವರ್​ ಮೇಲೆ ಕಬ್ಬಿಣದ ಸರಳು ಕಾಣಿಸುವಷ್ಟು ಆಳದ ಗುಂಡಿ, ಪ್ರಯಾಣಿಕರಿಂದ ತೀವ್ರ ಆಕ್ರೋಶ
ಸುಮನಹಳ್ಳಿ ಫ್ಲೈಓವರ್​
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 21, 2022 | 12:32 PM

ಬೆಂಗಳೂರು: ನಗರದಿಂದ ನೆಲಮಂಗಲ ಮಾರ್ಗವಾಗಿ ತುಮಕೂರು ಹಾಗೂ ಕುಣಿಗಲ್​ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಸುಮನಹಳ್ಳಿ ಮೇಲ್ಸೇತುವೆಯ ಮೇಲೆ ಕಬ್ಬಿಣದ ಸರಳುಗಳು ಕಾಣಿಸುವಷ್ಟು ಆಳವಾದ ಗುಂಡಿ ಕಾಣಿಸಿಕೊಂಡಿದೆ. ಜನರು ಫ್ಲೈಓವರ್​ನ ಸುರಕ್ಷತೆಯ ಬಗ್ಗೆ ಭೀತಿ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಸಂಚಾರ ಪೊಲೀಸರು ಹಾನಿಯನ್ನು ಪರಿಶೀಲಿಸಿ, ಬ್ಯಾರಿಕೇಡ್​ಗಳನ್ನು ಹಾಕಿದರು. 2019ರ ನಂತರ ಎರಡನೇ ಬಾರಿಗೆ ಎಲಿವೇಟೆಡ್ ರಸ್ತೆಯಲ್ಲಿ ಗುಂಡಿ ಕಾಣಿಸಿಕೊಂಡಿದೆ. ಈ ಮೊದಲು ರಸ್ತೆ ಹಾಳಾಗಿದ್ದಾಗ ಸಮರ್ಪಕವಾಗಿ ರಿಪೇರಿ ಕಾಮಗಾರಿ ನಿರ್ವಹಿಸಿಲ್ಲ. ಬದಲಿಗೆ, ಬೇಕಾಬಿಟ್ಟಿಯಾಗಿ ತೇಪೆ ಹಾಕಲಾಗಿದೆ. ಫ್ಲೈಓವರ್​ ಮೇಲೆ ಬಿದ್ದಿರುವ ರಂಧ್ರದಿಂದ ಕೆಳಗಿನ ರಸ್ತೆ ಕಾಣಿಸುತ್ತಿರುವುದು ಜನರ ಆತಂಕವನ್ನು ಹೆಚ್ಚು ಮಾಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಗುರುವಾರ ದುರಸ್ತಿ ಕಾಮಗಾರಿಗಳನ್ನು ಆರಂಭಿಸಲಿದೆ. ದುರಸ್ತಿಯ ಸಮಯದಲ್ಲಿ ಮೇಲ್ಸೇತುವೆಯ ಒಂದು ಲೇನ್​ನಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಬಿಬಿಎಂಪಿ ಹೇಳಿದೆ. 2019ರಲ್ಲಿ ರಸ್ತೆಯ ಒಂದು ಭಾಗವೇ ಕುಸಿದಿತ್ತು. ಇದೀಗ ಬೆಳಕಿಗೆ ಬಂದಿರುವ ಗುಂಡಿಯು ಅಂದಿನ ಘಟನೆಯನ್ನು ಮತ್ತೆ ನೆನಪಿಸುವಂತೆ ಮಾಡಿದೆ.

ರಸ್ತೆ ಮೇಲೆ ಗುಂಡಿ ಬಿದ್ದ ಎರಡೂ ಘಟನೆಗಳ ಸಮಯದಲ್ಲಿ ಆಸ್ಫಾಲ್ಟ್ ಮತ್ತು ಸಿಮೆಂಟ್ ಎದ್ದು ಹೋಗಿತ್ತು. ಫ್ಲೈಓವರ್ ಮೇಲಿನ ಲೋಹದ ಸರಳುಗಳು ಗೋಚರಿಸುತ್ತಿದ್ದವು. ಹೊರ ವರ್ತುಲ ರಸ್ತೆಯ ಗೊರಗುಂಟೆಪಾಳ್ಯ-ನಾಯಂಡಹಳ್ಳಿ ವಿಭಾಗದಲ್ಲಿ ಸುಮನಹಳ್ಳಿ ಫ್ಲೈಓವರ್ ಇದೆ.

ಬಿಡಿಎ ನಿರ್ಮಿಸಿದ್ದ ಫ್ಲೈಓವರ್

ಈ ಮೇಲ್ಸೇತುವೆಯನ್ನು ‘ಬಿಡಿಎ ನಿರ್ಮಿಸಿತ್ತು. 2019ರಲ್ಲಿ ಕುಸಿದಿದ್ದ ಸ್ಥಳದಿಂದ ಸುಮಾರು 15 ಅಡಿ ಮುಂದೆ ಇದೀಗ ಮತ್ತೊಮ್ಮೆ ಕುಸಿದಿದೆ. ತಜ್ಞರಿಂದ ಪರಿಶೀಲನೆ ನಡೆಸಿ, ಯಾವ ರೀತಿ ದುರಸ್ತಿ ಕಾರ್ಯ ನಡೆಸಬೇಕು ಎಂಬುದನ್ನು ಬುಧವಾರ ತೀರ್ಮಾನಿಸುತ್ತೇವೆ. ಬಿಬಿಎಂಪಿ ವತಿಯಿಂದಲೇ ನಾವು ದುರಸ್ತಿ ಕಾಮಗಾರಿ ನಿರ್ವಹಿಸುತ್ತೇವೆ ಎಂದು ಬಿಬಿಎಂಪಿ ಪ್ರಧಾನ ಎಂಜಿನಿಯರ್‌ ಸಿ.ಎಸ್‌.ಪ್ರಹ್ಲಾದ್ ಹೇಳಿದ್ದಾರೆ. ಫ್ಲೈಓವರ್ ಮೇಲೆ ಡ್ರಿಲ್ ಮಾಡಲು ಕಷ್ಟ. ಹಳೆಯ ಕಾಂಕ್ರಿಟ್ ಅನ್ನು ನಿಧಾನವಾಗಿ ತೆಗೆದು, ಹೊಸದಾಗಿ ಹಾಕಬೇಕಾಗುತ್ತದೆ. ತಜ್ಞರಿಂದ ವರದಿ ಪಡೆದು ಮುಂದುವರಿಯುತ್ತೇವೆ ಎಂದಿದ್ದಾರೆ.

ಪ್ರೀಕಾಸ್ಟ್‌ ಪ್ರೀಸ್ಟ್ರೆಸ್ಡ್‌ ಕಾಂಕ್ರೀಟ್‌ (ಪಿಎಸ್‌ಸಿ) ಗಿರ್ಡರ್‌ ಮತ್ತು ಸ್ಲ್ಯಾಬ್‌ ಕನ್‌ಸ್ಟ್ರಕ್ಷನ್‌ ಟೆಕ್ನಾಲಜಿ ಬಳಸಿ ಮೇಲ್ಸೇತುವೆ ನಿರ್ಮಾಣವಾಗಿದೆ. ಆರ್‌ಸಿಸಿ ಸ್ಲ್ಯಾಬ್​ಗಳ ಶಕ್ತಿ ಕಡಿಮೆಯಾಗಿರುವುದರಿಂದ ರಂಧ್ರಗಳು ಕಂಡುಬರುತ್ತಿವೆ. ಮೇಲ್ಸೇತುವೆಯ ಉಳಿದ ಭಾಗವನ್ನೂ ಬಿಬಿಎಂಪಿ ಪರಿಶೀಲಿಸಿದೆ.

Published On - 12:32 pm, Wed, 21 September 22

ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ