AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಬಲ್ ಡೆಕ್ಕರ್ ಪ್ಲೈಓವರ್ ರಸ್ತೆಯಲ್ಲಿ ಗುಂಡಿ, ಚೂರು ಯಾಮಾರಿದರೂ ಹೋಗುತ್ತೆ ಪ್ರಾಣ: ಕಳಪೆ ಕಾಮಗಾರಿ ಆರೋಪ

ಇಡೀ ದೇಶದಲ್ಲೇ ಡಬಲ್ ಡೆಕ್ಕರ್ ಪ್ಲೈಓವರ್ ಹೊಂದಿರುವ ಎರಡನೇ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ನಮ್ಮ ಸಿಲಿಕಾನ್ ಸಿಟಿ ಬೆಂಗಳೂರು. ಇದು ದಕ್ಷಿಣ ಭಾರತದಲ್ಲೇ ಮೊಟ್ಟ ಮೊದಲ ಡಬಲ್ ಡೆಕ್ಕರ್ ಪ್ಲೈ ಓವರ್ ಕೂಡ ಹೌದು. ಈ ಮೇಲ್ಸೇತುವೆ ಕಾರ್ಯಾರಂಭವಾಗಿ ಇನ್ನೂ 5 ತಿಂಗಳು ಕೂಡ ಆಗಿಲ್ಲ, ಆಗಲೇ ರಸ್ತೆಯಲ್ಲಿ ಗುಂಡಿ ಬಿದ್ದಿದೆ.

ಡಬಲ್ ಡೆಕ್ಕರ್ ಪ್ಲೈಓವರ್ ರಸ್ತೆಯಲ್ಲಿ ಗುಂಡಿ, ಚೂರು ಯಾಮಾರಿದರೂ ಹೋಗುತ್ತೆ ಪ್ರಾಣ: ಕಳಪೆ ಕಾಮಗಾರಿ ಆರೋಪ
ಡಬಲ್ ಡೆಕ್ಕರ್ ಪ್ಲೈಓವರ್ ರಸ್ತೆಯಲ್ಲಿ ಗುಂಡಿ
Kiran Surya
| Edited By: |

Updated on:Jan 27, 2025 | 8:09 AM

Share

ಬೆಂಗಳೂರು, ಜನವರಿ 27: ಬೆಂಗಳೂರಿನ‌ ದಕ್ಷಿಣ ಭಾಗದ ಟ್ರಾಫಿಕ್ ಕಿರಿಕಿರಿಗೆ, ಅದರಲ್ಲೂ ಬನಶಂಕರಿ, ಜಯನಗರ ಜೆಪಿ ನಗರದಿಂದ ಸಿಲ್ಕ್ ಬೋರ್ಡ್, ಮಾರತಹಳ್ಳಿ, ಎಲೆಕ್ಟ್ರಾನಿಕ್ ಸಿಟಿ ಭಾಗಕ್ಕೆ ಹೋಗುವ ಮಾರ್ಗದಲ್ಲಿ ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೆ ನಿರ್ಮಿಸಿರುವ ಡಬಲ್ ಡೆಕ್ಕರ್ ಪ್ಲೈಓವರ್ ವರದಾನವಾಗಿದೆ. ಸ್ಥಳೀಯ ಶಾಸಕರು, ಸಚಿವರು ಆಗಿರುವ ರಾಮಲಿಂಗಾ ರೆಡ್ಡಿ ಅವರ ಪರಿಶ್ರಮದಿಂದ ಈ ಪ್ಲೈಓವರ್ ರೆಡಿಯಾಗಿದ್ದು, ಇದನ್ನು ರಾಮಲಿಂಗರೆಡ್ಡಿ ಮಾದರಿ ಎಂದೇ ಕರೆಯುತ್ತಿದ್ದಾರೆ.

ಪ್ಲೈ ಓವರ್ ಓಪನ್ ಆಗಿ 5 ತಿಂಗಳಷ್ಟೇ ಆಗುತ್ತಿದೆ. ಮತ್ತೊಂದು ಮಾರ್ಗದ ಪ್ಲೈ ಓವರ್ ಕಾಮಗಾರಿ ಇನ್ನೂ ನಡೆಯುತ್ತಲೇ ಇದೆ. ಆದರೆ, ಈಗಾಗಲೇ ಈ ರಸ್ತೆಯಲ್ಲಿ ಎರಡು ಕಡೆ ಡಾಂಬರ್ ಕಿತ್ತು ಗುಂಡಿಗಳಾಗಿದ್ದು, ವಾಹನ ಸವಾರರಿಗೆ, ಅದರಲ್ಲೂ ದ್ವಿಚಕ್ರ ವಾಹನ ಸವಾರರಿಗೆ ಅಪಾಯಕರವಾಗಿ ಪರಿಣಮಿಸಿದೆ.

ಗುಂಡಿ ಬಗ್ಗೆ ವಾಹನ ಸವಾರರು ಕೂಡ ಆಕ್ಷೇಪ ವ್ಯಕ್ತಪಡಿಸಿದ್ದು, ಯಾವ ಮಟ್ಟಕ್ಕೆ ಅಪಾಯಕರವಾಗಿದೆ ಎಂಬುದನ್ನೂ ತಿಳಿಸಿದ್ದಾರೆ.

Double Decker Flyover

ಡಬಲ್ ಡೆಕ್ಕರ್ ಪ್ಲೈಓವರ್

ಈಗಲೇ ರಸ್ತೆ ಗುಂಡಿಯನ್ನು ಸರಿ ಮಾಡದೇ ಹೋದರೆ ಮುಂದೆ ದೊಡ್ಡ ಗುಂಡಿಗಳಾಗಿ ಇಡೀ ರಸ್ತೆಯೇ ಗುಂಡಿಮಯವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿರುವ ದಕ್ಷಿಣ ಭಾರತದ ಫಸ್ಟ್ ಡಬಲ್ ಡೆಕ್ಕರ್ ಫ್ಲೈಓವರ್ ಲೋಕಾರ್ಪಣೆ, ಇದರ ವಿಶೇಷತೆಗಳೇನು?

ಡಬಲ್ ಡೆಕ್ಕರ್ ಪ್ಲೈಓವರ್ ರಸ್ತೆ ಮೇಲಿನ ಮೇಲಿನ ಗುಂಡಿ ಬಗ್ಗೆ ಸಚಿವ ರಾಮಲಿಂಗರೆಡ್ಡಿ ಮಾತಾನಾಡಿದ್ದು, ಕೂಡಲೇ ಗುಂಡಿಯನ್ನು ಮುಚ್ಚಿ ಸರಿಯಾದ ವ್ಯವಸ್ಥೆ ಮಾಡಿ ಎಂದು ಬಿಎಂಆರ್​ಸಿಎಲ್​ಗೆ ಸೂಚನೆ ನೀಡುತ್ತೇನೆ ಎಂದಿದ್ದಾರೆ.

ಒಟ್ಟಿನಲ್ಲಿ ಡಬಲ್ ಡೆಕ್ಕರ್ ಪ್ಲೈಓವರ್ ಆರಂಭ ಆಗಿ ಕೆಲವೇ ದಿನಗಳು ಆಗಿದ್ದು, ಈ ರೀತಿ ಡಾಂಬರ್ ಕಿತ್ತು ಬರುತ್ತಿರುವುದು ಕಳಪೆ ಕಾಮಗಾರಿ ನಡೆದಿರುವ ಅನುಮಾನ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:09 am, Mon, 27 January 25

Follow Us
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?