AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಬಲ್ ಡೆಕ್ಕರ್ ಪ್ಲೈಓವರ್ ರಸ್ತೆಯಲ್ಲಿ ಗುಂಡಿ, ಚೂರು ಯಾಮಾರಿದರೂ ಹೋಗುತ್ತೆ ಪ್ರಾಣ: ಕಳಪೆ ಕಾಮಗಾರಿ ಆರೋಪ

ಇಡೀ ದೇಶದಲ್ಲೇ ಡಬಲ್ ಡೆಕ್ಕರ್ ಪ್ಲೈಓವರ್ ಹೊಂದಿರುವ ಎರಡನೇ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ನಮ್ಮ ಸಿಲಿಕಾನ್ ಸಿಟಿ ಬೆಂಗಳೂರು. ಇದು ದಕ್ಷಿಣ ಭಾರತದಲ್ಲೇ ಮೊಟ್ಟ ಮೊದಲ ಡಬಲ್ ಡೆಕ್ಕರ್ ಪ್ಲೈ ಓವರ್ ಕೂಡ ಹೌದು. ಈ ಮೇಲ್ಸೇತುವೆ ಕಾರ್ಯಾರಂಭವಾಗಿ ಇನ್ನೂ 5 ತಿಂಗಳು ಕೂಡ ಆಗಿಲ್ಲ, ಆಗಲೇ ರಸ್ತೆಯಲ್ಲಿ ಗುಂಡಿ ಬಿದ್ದಿದೆ.

ಡಬಲ್ ಡೆಕ್ಕರ್ ಪ್ಲೈಓವರ್ ರಸ್ತೆಯಲ್ಲಿ ಗುಂಡಿ, ಚೂರು ಯಾಮಾರಿದರೂ ಹೋಗುತ್ತೆ ಪ್ರಾಣ: ಕಳಪೆ ಕಾಮಗಾರಿ ಆರೋಪ
ಡಬಲ್ ಡೆಕ್ಕರ್ ಪ್ಲೈಓವರ್ ರಸ್ತೆಯಲ್ಲಿ ಗುಂಡಿ
Kiran Surya
| Updated By: Ganapathi Sharma|

Updated on:Jan 27, 2025 | 8:09 AM

Share

ಬೆಂಗಳೂರು, ಜನವರಿ 27: ಬೆಂಗಳೂರಿನ‌ ದಕ್ಷಿಣ ಭಾಗದ ಟ್ರಾಫಿಕ್ ಕಿರಿಕಿರಿಗೆ, ಅದರಲ್ಲೂ ಬನಶಂಕರಿ, ಜಯನಗರ ಜೆಪಿ ನಗರದಿಂದ ಸಿಲ್ಕ್ ಬೋರ್ಡ್, ಮಾರತಹಳ್ಳಿ, ಎಲೆಕ್ಟ್ರಾನಿಕ್ ಸಿಟಿ ಭಾಗಕ್ಕೆ ಹೋಗುವ ಮಾರ್ಗದಲ್ಲಿ ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೆ ನಿರ್ಮಿಸಿರುವ ಡಬಲ್ ಡೆಕ್ಕರ್ ಪ್ಲೈಓವರ್ ವರದಾನವಾಗಿದೆ. ಸ್ಥಳೀಯ ಶಾಸಕರು, ಸಚಿವರು ಆಗಿರುವ ರಾಮಲಿಂಗಾ ರೆಡ್ಡಿ ಅವರ ಪರಿಶ್ರಮದಿಂದ ಈ ಪ್ಲೈಓವರ್ ರೆಡಿಯಾಗಿದ್ದು, ಇದನ್ನು ರಾಮಲಿಂಗರೆಡ್ಡಿ ಮಾದರಿ ಎಂದೇ ಕರೆಯುತ್ತಿದ್ದಾರೆ.

ಪ್ಲೈ ಓವರ್ ಓಪನ್ ಆಗಿ 5 ತಿಂಗಳಷ್ಟೇ ಆಗುತ್ತಿದೆ. ಮತ್ತೊಂದು ಮಾರ್ಗದ ಪ್ಲೈ ಓವರ್ ಕಾಮಗಾರಿ ಇನ್ನೂ ನಡೆಯುತ್ತಲೇ ಇದೆ. ಆದರೆ, ಈಗಾಗಲೇ ಈ ರಸ್ತೆಯಲ್ಲಿ ಎರಡು ಕಡೆ ಡಾಂಬರ್ ಕಿತ್ತು ಗುಂಡಿಗಳಾಗಿದ್ದು, ವಾಹನ ಸವಾರರಿಗೆ, ಅದರಲ್ಲೂ ದ್ವಿಚಕ್ರ ವಾಹನ ಸವಾರರಿಗೆ ಅಪಾಯಕರವಾಗಿ ಪರಿಣಮಿಸಿದೆ.

ಗುಂಡಿ ಬಗ್ಗೆ ವಾಹನ ಸವಾರರು ಕೂಡ ಆಕ್ಷೇಪ ವ್ಯಕ್ತಪಡಿಸಿದ್ದು, ಯಾವ ಮಟ್ಟಕ್ಕೆ ಅಪಾಯಕರವಾಗಿದೆ ಎಂಬುದನ್ನೂ ತಿಳಿಸಿದ್ದಾರೆ.

Double Decker Flyover

ಡಬಲ್ ಡೆಕ್ಕರ್ ಪ್ಲೈಓವರ್

ಈಗಲೇ ರಸ್ತೆ ಗುಂಡಿಯನ್ನು ಸರಿ ಮಾಡದೇ ಹೋದರೆ ಮುಂದೆ ದೊಡ್ಡ ಗುಂಡಿಗಳಾಗಿ ಇಡೀ ರಸ್ತೆಯೇ ಗುಂಡಿಮಯವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿರುವ ದಕ್ಷಿಣ ಭಾರತದ ಫಸ್ಟ್ ಡಬಲ್ ಡೆಕ್ಕರ್ ಫ್ಲೈಓವರ್ ಲೋಕಾರ್ಪಣೆ, ಇದರ ವಿಶೇಷತೆಗಳೇನು?

ಡಬಲ್ ಡೆಕ್ಕರ್ ಪ್ಲೈಓವರ್ ರಸ್ತೆ ಮೇಲಿನ ಮೇಲಿನ ಗುಂಡಿ ಬಗ್ಗೆ ಸಚಿವ ರಾಮಲಿಂಗರೆಡ್ಡಿ ಮಾತಾನಾಡಿದ್ದು, ಕೂಡಲೇ ಗುಂಡಿಯನ್ನು ಮುಚ್ಚಿ ಸರಿಯಾದ ವ್ಯವಸ್ಥೆ ಮಾಡಿ ಎಂದು ಬಿಎಂಆರ್​ಸಿಎಲ್​ಗೆ ಸೂಚನೆ ನೀಡುತ್ತೇನೆ ಎಂದಿದ್ದಾರೆ.

ಒಟ್ಟಿನಲ್ಲಿ ಡಬಲ್ ಡೆಕ್ಕರ್ ಪ್ಲೈಓವರ್ ಆರಂಭ ಆಗಿ ಕೆಲವೇ ದಿನಗಳು ಆಗಿದ್ದು, ಈ ರೀತಿ ಡಾಂಬರ್ ಕಿತ್ತು ಬರುತ್ತಿರುವುದು ಕಳಪೆ ಕಾಮಗಾರಿ ನಡೆದಿರುವ ಅನುಮಾನ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:09 am, Mon, 27 January 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!