Bengaluru Power Cut: ಬೆಂಗಳೂರಿಗರೇ ಗಮನಿಸಿ; ಇಂದು ನಿಮ್ಮ ಏರಿಯಾದಲ್ಲೂ ಪವರ್ ಕಟ್ ಇರಬಹುದು

BESCOM: ಜಯನಗರ, ಮಾರತ್​ಹಳ್ಳಿ, ಪೀಣ್ಯ, ಚಂದ್ರಾ ಲೇಔಟ್, ಬಸವೇಶ್ವರನಗರ, ಹಂಪಿ ನಗರ ಸೇರಿದಂತೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ಪವರ್ ಕಟ್ ಇರಲಿದೆ.

Bengaluru Power Cut: ಬೆಂಗಳೂರಿಗರೇ ಗಮನಿಸಿ; ಇಂದು ನಿಮ್ಮ ಏರಿಯಾದಲ್ಲೂ ಪವರ್ ಕಟ್ ಇರಬಹುದು
ಸಾಂದರ್ಭಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Feb 12, 2022 | 5:50 AM

Power Cut in Bangalore: ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಕೂಡ ಹಲವು ಏರಿಯಾಗಳಲ್ಲಿ ಕರೆಂಟ್ ಇರುವುದಿಲ್ಲ. ವೀಕೆಂಡ್ ಆದ್ದರಿಂದ ಮನೆಯಲ್ಲೇ ಇರುವ ಸಿಲಿಕಾನ್ ಸಿಟಿಯ ಮಂದಿ ಇಂದು ಬೆಳಗ್ಗೆಯಿಂದ ಸಂಜೆಯವರೆಗೆ ಪವರ್ ಕಟ್ ಸಮಸ್ಯೆಯನ್ನು ಅನುಭವಿಸಬೇಕಾಗುತ್ತದೆ. ನಿರ್ವಹಣಾ ಕಾರ್ಯದಿಂದಾಗಿ ಇಂದು (ಶನಿವಾರ) ಬೆಂಗಳೂರಿನ ಹಲವೆಡೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ. ಜಯನಗರ, ಮಾರತ್​ಹಳ್ಳಿ, ಪೀಣ್ಯ, ಚಂದ್ರಾ ಲೇಔಟ್, ಬಸವೇಶ್ವರನಗರ, ಹಂಪಿ ನಗರ ಸೇರಿದಂತೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ಪವರ್ ಕಟ್ (Power Cut) ಇರಲಿದೆ.

ಬೆಂಗಳೂರು ದಕ್ಷಿಣ ವಲಯದಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಜಯನಗರ 4ನೇ ಬ್ಲಾಕ್, ಶಾಂತಿನಗರ, ವಿನಾಯಕ ನಗರ, ಕನಕ ಲೇಔಟ್, ಗೌಡನಪಾಳ್ಯ, ಕೋನೇನ ಅಗ್ರಹಾರ, ಮಾರತಹಳ್ಳಿ, ಸಂಜಯ ನಗರ, ಮಂಜುನಾಥ ನಗರ, ಪರಂಗಿಪಾಳ್ಯ, ಸರ್ಜಾಪುರ ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪನ ಅಗ್ರಹಾರ, ದೊಡ್ಡತೋಗೂರು, ಬಸಾಪುರ ಮುಖ್ಯರಸ್ತೆ ಮತ್ತು ಜಿಎಸ್ ಪಾಳ್ಯದಲ್ಲಿ ಕರೆಂಟ್ ಇರುವುದಿಲ್ಲ.

ಬೆಂಗಳೂರು ಉತ್ತರ ವಲಯದಲ್ಲಿ ಹನುಮಾನ್‌ ಲೇಔಟ್‌, ಬಾಲಾಜಿ ಲೇಔಟ್‌, ಎಂಎಲ್‌ಎ ಲೇಔಟ್‌, ಆರ್‌ಟಿ ನಗರ ಮತ್ತು ಪೀಣ್ಯ ಗ್ರಾಮಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ಬೆಂಗಳೂರು ಪೂರ್ವ ವಲಯದಲ್ಲಿ ಸೇಂಟ್ ಜೋಸೆಫ್ ರಸ್ತೆ ಮತ್ತು ಮರ್ಫಿ ಟೌನ್‌ನಲ್ಲಿ ಇಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಪವರ್ ಕಟ್ ಇರಲಿದೆ.

ಬೆಂಗಳೂರಿನ ಪಶ್ಚಿಮ ವಲಯದಲ್ಲಿ ಹಂಪಿನಗರ, ಸುಬ್ಬಣ್ಣ ಗಾರ್ಡನ್, ಶಿವಾನಂದನಗರ, ಗಂಗೊಂಡನಹಳ್ಳಿ, ಚಂದ್ರಾಲೇಔಟ್, ಬಸವೇಶ್ವರ ನಗರದ ಕೆಲವು ಭಾಗಗಳು, ಮಂಜುನಾಥ್ ನಗರ, ಅಗ್ರಹಾರ ದಾಸರಹಳ್ಳಿ, ಕೆಬ್ಬೇಹಳ್ಳಿ, ಹೊಸಹಳ್ಳಿ ರಸ್ತೆ ಪ್ರದೇಶ ಮತ್ತು ಡಿ ಗ್ರೂಪ್ ಲೇಔಟ್ 1 ನೇ ಬ್ಲಾಕ್ ಮುಂತಾದ ಪ್ರದೇಶಗಳಲ್ಲಿ ಬೆಳಿಗ್ಗೆ 9ರಿಂದ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಇದನ್ನೂ ಓದಿ: Power Cut: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಬಸವೇಶ್ವರ ನಗರ ಮುಂತಾದ ಏರಿಯಾಗಳಲ್ಲಿ ಇಂದು ಪವರ್ ಕಟ್

Power Cut: ಬೆಂಗಳೂರಿನ ಬನಶಂಕರಿ, ವೈಟ್​ಫೀಲ್ಡ್​, ಯಶವಂತಪುರ ಸೇರಿ ಹಲವೆಡೆ ಇಂದು ಕರೆಂಟ್ ಇರಲ್ಲ

20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್