Bangalore Power Cut: ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕು ದಿನ ವಿದ್ಯುತ್ ವ್ಯತ್ಯಯ

|

Updated on: Oct 12, 2023 | 10:44 AM

ಕಾಂಗ್ರೆಸ್ ಸರ್ಕಾರ ಗೃಹಜ್ಯೋತಿ ಯೋಜನೆ ಘೋಷಿಸಿದ್ದಾಗ ರಾಜ್ಯದ ಜನ ಖುಷಿಪಟ್ಟಿದ್ದರು. ಆದರೆ ಈಗ ಕರೆಂಟ್ ಅಭಾವ ಉಂಟಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಲೋಡ್‌ ಶೆಡ್ಡಿಂಗ್‌ ಸಮಸ್ಯೆ ಎದುರಾಗಿದ್ದು ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಇನ್ನು ಬೆಂಗಳೂರಿನಲ್ಲೂ ಮೂರು-ನಾಲ್ಕು ದಿನಗಳ ಕಾಲ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Bangalore Power Cut: ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕು ದಿನ ವಿದ್ಯುತ್ ವ್ಯತ್ಯಯ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಅ.12: ಬೆಂಗಳೂರಿನ ಹಲವೆಡೆ ಅಕ್ಟೋಬರ್ 12ರಿಂದ ನಾಲ್ಕು ದಿನಗಳ ಕಾಲ ನಿಗದಿತ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (BESCOM) ವೆಬ್‌ಸೈಟ್‌ಯಲ್ಲಿ ಮಾಹಿತಿ ಪ್ರಕಟವಾಗಿದೆ. ಬೆಸ್ಕಾಂ ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿವೆ (Bangalore Power Cut).

ಡಿಟಿಸಿ ರಚನೆ ನಿರ್ವಹಣೆ, ಲೈನ್ ನಿರ್ವಹಣೆ, ಓವರ್‌ಹೆಡ್‌ನಿಂದ ಭೂಮಿಯೊಳಗೆ ಕೇಬಲ್‌ಗಳನ್ನು ಬದಲಾಯಿಸುವುದು, ರಿಂಗ್ ಮುಖ್ಯ ಘಟಕದ ನಿರ್ವಹಣೆ, ಮರದ ಟ್ರಿಮ್ಮಿಂಗ್, ಜಲಸಿರಿ 24×7 ನೀರು ಸರಬರಾಜು ಕೆಲಸ, ಜಂಪ್‌ಗಳನ್ನು ಬಿಗಿಗೊಳಿಸುವುದು, ಹದಗೆಟ್ಟ ಕಂಬಗಳ ಬದಲಾವಣೆ, ಭೂಮಿಯೊಳಗಿನ ಕೇಬಲ್ ಹಾನಿ ಸರಿಪಡಿಸುವಿಕೆ, ಓರೆಯಾದ ಕಂಬಗಳನ್ನು ನೇರಗೊಳಿಸುವುದು ಸೇರಿದಂತೆ ಅನೇಕ ಕಾರ್ಯಗಳನ್ನು ವಿದ್ಯುತ್ ಕಂಪನಿಗಳು ಕೈಗೊಂಡಿದ್ದು ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆ ಇದೆ.

ವಿದ್ಯುತ್ ಸರಬರಾಜು ಕಂಪನಿಗಳು ಹೆಚ್ಚಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ ನಿರ್ವಹಣಾ ಯೋಜನೆಗಳನ್ನು ಕೈಗೊಳ್ಳುವ ಹಿನ್ನೆಲೆ ಈ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆ ಇದೆ. ಯಾವ ಯಾವ ದಿನ ಎಲ್ಲೆಲ್ಲಿ ವಿದ್ಯುತ್ ಕಡಿತವಾಗುವ ಸಾಧ್ಯತೆ ಇದೆ ಎಂಬ ಪಟ್ಟಿ ಇಲ್ಲಿದೆ.

ಅಕ್ಟೋಬರ್ 12ರ ಗುರುವಾರ ಎಲ್ಲೆಲ್ಲಿ ವಿದ್ಯುತ್ ಕಡಿತ

ಲಕ್ಷ್ಮಣ ನಗರ, ಸಂಜೀವಿನಿ ನಗರ, ವಿಘ್ನೇಶ್ವರ ನಗರ, ಹೆಗ್ಗನಹಳ್ಳಿ, ಸುಂಕದಕಟ್ಟೆ, ಹೊಯ್ಸಳ ನಗರ, ಪೈಪ್‌ಲೈನ್ ರಸ್ತೆ, ನೀಲಗಿರಿ ತೊಪ್ಪು, ಅರುಣೋದಯ ಶಾಲೆ ರಸ್ತೆ, ಮೌನೇಶ್ವರ ಬಡಾವಣೆ, ಜಯನಗರ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ಬೋಜನಹಳ್ಳಿ, ಅಜ್ಜನನಹಳ್ಳಿ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸೀಬಿ, ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಲಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿ.

ಇದನ್ನೂ ಓದಿ: ರಾಜ್ಯದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ, ಸಂಕಷ್ಟದಲ್ಲಿ ರೈತ; ಲೋಡ್ ಶೆಡ್ಡಿಂಗ್​ಗೆ ಕಾರಣ ಬಿಚ್ಚಿಟ್ಟ ಹೆಸ್ಕಾಂ ಅಧಿಕಾರಿ

ಅಕ್ಟೋಬರ್ 13, ಶುಕ್ರವಾರ ಎಲ್ಲೆಲ್ಲಿ ವಿದ್ಯುತ್ ಕಡಿತ

ಸರಸ್ವತಿ ನಗರ, ವಿನಾಯಕ ಲೇಔಟ್, ಕನಕನಗರ, ಗಂಗಾಧರ ಲೇಔಟ್, ಸೆಂಟ್ರಲ್ ಎಕ್ಸೈಸ್ ಲೇಔಟ್, ಕೆಜಿಎಸ್ ಲೇಔಟ್, ಶೋಭಾ ಆಸ್ಪತ್ರೆ, ಹರಿರಾಮ್ ಅಲಿದಾಸ್ ಲೇಔಟ್, ಎಸ್‌ಎಸ್ ಹೈಟೆಕ್ ಆಸ್ಪತ್ರೆ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವಣೆಬೋರನಹಳ್ಳಿ, ಅಜ್ಜಯ್ಯನಪ್ಪನಹಳ್ಳಿ, ಅಜ್ಜಯ್ಯನಪಾಲ್ ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸೀಬಿ, ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಲಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿ.

ಅಕ್ಟೋಬರ್ 14, ಶನಿವಾರ ಎಲ್ಲೆಲ್ಲಿ ವಿದ್ಯುತ್ ಕಡಿತ

ಎಸ್‌ಜೆಎಂ ನಗರ, ಎಸ್‌ಎಂಕೆ ನಗರ, ಬಾಬು ಜಗಜೀವನ ನಗರ, ದೇವರಾಜ್‌ ಅರಸ್‌ ಬಡಾವಣೆ, ವಿಜಯನಗರ ಬಡಾವಣೆ, ರಾಜೀವ್‌ ಗಾಂಧಿ ಬಡಾವಣೆ, ಎಸ್‌ಪಿ ಕಚೇರಿ, ಆರ್‌ಟಿಒ ಕಚೇರಿ, ಜ್ಯೋತಿನಗರ, ಶಂಕರಾನಂದ ಬಡಾವಣೆ, ಸಚಿನ್‌ ಲೇಔಟ್‌, ಗಂಗಮ್ಮ ಲೇಔಟ್‌, ಕಲ್ಲುಕೋಟೆ, ಪದವಿ ಕಾಲೇಜು ಸುತ್ತಮುತ್ತ, ನಾಗಾಜಿ ಗುಡೆನ್ಸಿ, ಪ್ರೆಸಿಡೆನ್ಸಿ, ಡೈರಿ ಸರ್ಕಲ್, ಫುಡ್ ಗೋಡೌನ್, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ದೊಡ್ಡರಸಹಳ್ಳಿ, ದೊಡರಸ ಅಗ್ರಹಾರ, ತಿ. ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿ.

ಅಕ್ಟೋಬರ್ 15, ಭಾನುವಾರ ಎಲ್ಲೆಲ್ಲಿ ವಿದ್ಯುತ್ ಕಡಿತ

ಪ್ರೇಮ್ ನಗರ, ಶಂಕರಪ್ಪ ಇಂಡಸ್ಟ್ರಿಯಲ್ ಎಸ್ಟೇಟ್, ಯುನಾನಿ ಆಸ್ಪತ್ರೆ, ನಿರೀಕ್ಷಿತ ಭವನ, ಪಿ & ಟಿ ಲೇಔಟ್, ಸುಬ್ರಹ್ಮಣ್ಯ ನಗರ, ಲೋಕಿಕೆರೆ ರಸ್ತೆ, ಕೈಗಾರಿಕಾ ಪ್ರದೇಶ, ಜ್ಯೋತಿನಗರ, ಶಂಕರಾನಂದ ಬಡವಾಣೆ, ಸಚಿನ್ ಲೇಔಟ್, ಗಂಗಮ್ಮ ಲೇಔಟ್, ಕಲ್ಲುಕೋಟೆ, ಪದವಿ ಕಾಲೇಜು ಸುತ್ತಮುತ್ತ, ನಾಗಾಜಿ ಗುಡೆನ್ಸಿ, ಪ್ರೆಸಿಡೆನ್ಸಿ ಕಾಲೇಜು , ಆಹಾರ ಗೋದಾಮು, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸಿ ಅಗ್ರಹಾರ, ಡಿ ತಿಗದಹಳ್ಳಿ, ದೊಡ್ಡಸಿಯನಹಳ್ಳಿ, ದೊಡ್ಡಸಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ