AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಗಣೇಶೋತ್ಸವಕ್ಕೆ ಪೊಲೀಸ್ ಷರತ್ತು; ಇನ್ಸ್‌ಪೆಕ್ಟರ್‌ ಧನಂಜಯ್‌ ಅಮಾನತಿಗೆ ಪ್ರಲ್ಹಾದ್ ಜೋಶಿ ಒತ್ತಾಯ

ಟಿ. ನರಸೀಪುರದಲ್ಲಿ ಗಣೇಶ ಸಮಿತಿಯ ಯುವಕರಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಗುರಿಯಾಗಿರುವ ಇನ್ಸ್‌ಪೆಕ್ಟರ್ ಧನಂಜಯ್ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ತುಷ್ಟಿಕರಣ ರಾಜಕಾರಣ ಹಾಗೂ ಹಿಂದೂ ವಿರೋಧಿ ಧೋರಣೆಯನ್ನು ತೀವ್ರವಾಗಿ ಖಂಡಿಸಿ ಎಕ್ಸ್ ಪೋಸ್ಟ್ ಮಾಡಿದ್ದಾರೆ.

ಮೈಸೂರಿನಲ್ಲಿ ಗಣೇಶೋತ್ಸವಕ್ಕೆ ಪೊಲೀಸ್ ಷರತ್ತು; ಇನ್ಸ್‌ಪೆಕ್ಟರ್‌ ಧನಂಜಯ್‌ ಅಮಾನತಿಗೆ ಪ್ರಲ್ಹಾದ್ ಜೋಶಿ ಒತ್ತಾಯ
ಇನ್ಸ್‌ಪೆಕ್ಟರ್‌ ಧನಂಜಯ್‌ ಅಮಾನತಿಗೆ ಪ್ರಲ್ಹಾದ್ ಜೋಶಿ ಒತ್ತಾಯ
ಪ್ರಸನ್ನ ಗಾಂವ್ಕರ್​
| Edited By: |

Updated on:Sep 13, 2026 | 10:33 AM

Share

ಮುಖ್ಯಾಂಶಗಳು

  • ಗಣೇಶ ಸಮಿತಿ ಯುವಕರಿಗೆ ಬೆದರಿಕೆ ಹಾಕಿದ ಇನ್ಸ್‌ಪೆಕ್ಟರ್ ಧನಂಜಯ್‌ ಅಮಾನತಿಗೆ ಆಗ್ರಹ.
  • ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ವೀಟ್‌ ಮೂಲಕ ಹರಿದಾಯ್ದ ಕೇಂದ್ರ ಸಚಿವ ಜೋಶಿ.
  • ಗಣೇಶೋತ್ಸವ ಆಚರಣೆಗೆ ಅಡ್ಡಿಪಡಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲವೆಂದು ಕಟ್ಟುನಿಟ್ಟಿನ ಎಚ್ಚರಿಕೆ.

ಬೆಂಗಳೂರು, ಸೆಪ್ಟೆಂಬರ್ 13: ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಗಣೇಶೋತ್ಸವ ಆಚರಣೆ ವೇಳೆ ಯುವಕರಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಗುರಿಯಾಗಿರುವ ಇನ್ಸ್‌ಪೆಕ್ಟರ್ ಧನಂಜಯ್‌ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಭಕ್ತಿಭಾವದಿಂದ ಹಬ್ಬ ಆಚರಿಸಲು ಬಂದ ಯುವಕರಿಗೆ ಸಾರ್ವಜನಿಕವಾಗಿ ಇನ್ಸ್‌ಪೆಕ್ಟರ್‌ ಧಮ್ಕಿ ಹಾಕಿರುವುದು ಅಕ್ಷಮ್ಯ ಅಪರಾಧ ಎಂದು ಅವರು ಟ್ವೀಟ್‌ ಮೂಲಕ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ತುಷ್ಟಿಕರಣ ರಾಜಕಾರಣದ ಫರ್ಮಾನೇ?: ಜೋಶಿ ಪ್ರಶ್ನೆ

ನಮ್ಮದೇ ದೇಶದಲ್ಲಿ ಮತ್ತು ನಮ್ಮದೇ ನೆಲದಲ್ಲಿ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸಲು ಹಿಂದೂಗಳು ಗೋಗರೆಯಬೇಕಾದ ಪರಿಸ್ಥಿತಿ ಬಂದಿರುವುದು ಅತ್ಯಂತ ದುರ್ದೈವದ ಸಂಗತಿಯಾಗಿದೆ ಎಂದು ಜೋಶಿ ಆತಂಕ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕವಾಗಿ ಯುವಕರಿಗೆ ಬೆದರಿಕೆ ಹಾಕುವಷ್ಟು ಧೈರ್ಯ ಅಧಿಕಾರಿಗೆ ಎಲ್ಲಿಂದ ಬಂತು? ಇದು ಪೊಲೀಸ್ ಇಲಾಖೆಗೆ ಗೃಹ ಸಚಿವರು ನೀಡಿದ ಅಧಿಕಾರವೋ ಅಥವಾ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ತುಷ್ಟಿಕರಣ ರಾಜಕಾರಣದ ಫರ್ಮಾನೋ ಎಂದು ಅವರು ತೀವ್ರವಾಗಿ ಚಾಟಿ ಬೀಸಿದ್ದಾರೆ.

ಸನಾತನ ಸಂಸ್ಕೃತಿಯ ಮೇಲಿನ ಧಕ್ಕೆ ಸಹಿಸುವುದಿಲ್ಲ

ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಅಧಿಕಾರಿಯೇ ಒಂದು ಸಮುದಾಯದ ಏಜೆಂಟ್‌ನಂತೆ ವರ್ತಿಸುತ್ತಿರುವುದು ಖಂಡನೀಯ. ಕಾನೂನು ಮತ್ತು ಸುವ್ಯವಸ್ಥೆಯ ನೆಪವೊಡ್ಡಿ ಹಿಂದೂ ಹಬ್ಬಗಳ ಆಚರಣೆಯನ್ನು ಹತೋಟಿ ಮಾಡಲು ಹೊರಟಿರುವುದು ಈ ಸರ್ಕಾರದ ಹಿಂದೂ ವಿರೋಧಿ ಧೋರಣೆಗೆ ಹಿಡಿದ ಕನ್ನಡಿಯಾಗಿದೆ. ನಮ್ಮ ಸನಾತನ ಸಂಸ್ಕೃತಿ, ಆಚರಣೆ ಹಾಗೂ ಭಕ್ತಿಭಾವದ ಮೇಲೆ ಧಕ್ಕೆ ತರಲು ಯತ್ನಿಸಿದರೆ ಅದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಜೋಶಿ ಹೇಳಿದ್ದಾರೆ.

ಇದನ್ನೂ ಓದಿ “ಇನ್ನೊಮ್ಮೆ ಆ ಮಾತು ಬಂದರೆ ಠಾಣೆಗೆ ನುಗ್ಗುತ್ತೇನೆ”: ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ

ಪೊಲೀಸ್ ಕೃತ್ಯದ ಹಿನ್ನೆಲೆ

ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯ ನೆಪ ಹೇಳಿ ಇನ್ಸ್‌ಪೆಕ್ಟರ್ ಧನಂಜಯ್ ಅವರು ಗಣೇಶ ಸಮಿತಿಯ ಯುವಕರಿಗೆ ಸಾರ್ವಜನಿಕವಾಗಿ ಗದರಿಸಿದ್ದರು. ಅಲ್ಲದೆ ಕಾರ್ಯಕ್ರಮ ರದ್ದುಪಡಿಸುವುದಾಗಿ ಬೆದರಿಕೆ ಹಾಕಿದ್ದರು. ಅಧಿಕಾರಿಯ ಈ ವರ್ತನೆ ಸಾರ್ವಜನಿಕರ ಹಾಗೂ ಹಿಂದೂಪರ ಸಂಘಟನೆಗಳ ತೀವ್ರ ಆಕ್ರೋಶದ ಬೆನ್ನಲ್ಲೇ ಪ್ರಲ್ಹಾದ್ ಜೋಶಿ ಅಧಿಕಾರಿಯ ಅಮಾನತಿಗೆ ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:14 am, Sun, 13 September 26

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್