Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಉಗ್ರಗಾಮಿಗಳ ಪಕ್ಷ ಎಂದ ಮಲ್ಲಿಕಾರ್ಜುನ ಖರ್ಗೆಗೆ ತಿರುಗೇಟು ಕೊಟ್ಟ ಜೋಶಿ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಹೇಳಿಕೆಗೆ ಕಿಡಿಕಾರಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Pralhad Joshi), ‘ಖರ್ಗೆಯವರು ಬಾಯಿ ತಪ್ಪಿ ಬಿಜೆಪಿಯನ್ನು ಭಯೋತ್ಪಾದಕ ಪಕ್ಷ ಎಂದು ಕರೆದರು. ಆದರೆ, ಬಟ್ಲಾ ಹೌಸ್‌ನಲ್ಲಿ ಸಾವನ್ನಪ್ಪಿದ ಭಯೋತ್ಪಾದಕರಿಗಾಗಿ ನಿಜವಾಗಿಯೂ ಕಣ್ಣೀರು ಹಾಕಿದ್ದು ಸೋನಿಯಾ ಗಾಂಧಿ. ಅಫ್ಜಲ್ ಗುರು ವಿಚಾರವಾಗಿ ಮೃದು ಧೋರಣೆ ವಹಿಸಿದ್ದು, 2004 ರಲ್ಲಿ ಭಯೋತ್ಪಾದನಾ ತಡೆ ಕಾಯಿದೆ(POTA) ರದ್ದುಗೊಳಿಸಿದ್ದು ಕಾಂಗ್ರೆಸ್ ಎಂದರು.

ಬಿಜೆಪಿ ಉಗ್ರಗಾಮಿಗಳ ಪಕ್ಷ ಎಂದ ಮಲ್ಲಿಕಾರ್ಜುನ ಖರ್ಗೆಗೆ ತಿರುಗೇಟು ಕೊಟ್ಟ ಜೋಶಿ
ಬಿಜೆಪಿ ಉಗ್ರಗಾಮಿಗಳ ಪಕ್ಷ ಎಂದ ಮಲ್ಲಿಕಾರ್ಜುನ ಖರ್ಗೆಗೆ ತಿರುಗೇಟು ಕೊಟ್ಟ ಜೋಶಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Oct 12, 2024 | 11:55 PM

ಬೆಂಗಳೂರು, ಅ.12: ಬಿಜೆಪಿ ಉಗ್ರಗಾಮಿಗಳ ಪಕ್ಷ ಎಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಹೇಳಿಕೆಗೆ ಕಿಡಿಕಾರಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Pralhad Joshi), ‘ಖರ್ಗೆಯವರು ಬಾಯಿ ತಪ್ಪಿ ಬಿಜೆಪಿಯನ್ನು ಭಯೋತ್ಪಾದಕ ಪಕ್ಷ ಎಂದು ಕರೆದರು. ಆದರೆ, ಬಟ್ಲಾ ಹೌಸ್‌ನಲ್ಲಿ ಸಾವನ್ನಪ್ಪಿದ ಭಯೋತ್ಪಾದಕರಿಗಾಗಿ ನಿಜವಾಗಿಯೂ ಕಣ್ಣೀರು ಹಾಕಿದ್ದು ಸೋನಿಯಾ ಗಾಂಧಿ. ಅಫ್ಜಲ್ ಗುರು ವಿಚಾರವಾಗಿ ಮೃದು ಧೋರಣೆ ವಹಿಸಿದ್ದು, 2004 ರಲ್ಲಿ ಭಯೋತ್ಪಾದನಾ ತಡೆ ಕಾಯಿದೆ(POTA) ರದ್ದುಗೊಳಿಸಿದ್ದು ಕಾಂಗ್ರೆಸ್. ಅಷ್ಟೇ ಅಲ್ಲ, ಅವರದೇ ಪಕ್ಷದ ಅಭ್ಯರ್ಥಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪ್ರತ್ಯೇಕತಾವಾದಿ ಉಗ್ರಗಾಮಿಗಳೊಂದಿಗೆ ಕೈಕುಲುಕಿದ್ದು ಎಂದು ತಮ್ಮ ಎಕ್ಸ್​ ಖಾತೆ ಮೂಲಕ ವಾಗ್ದಾಳಿ ನಡೆಸಿದರು.

ಮೋದಿ ನೇತೃತ್ವದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಗಮನಾರ್ಹ ಇಳಿಕೆ

‘ಭಯೋತ್ಪಾದಕ ಚಟುವಟಿಕೆಗಳಲ್ಲಿ ಗಮನಾರ್ಹ ಇಳಿಕೆ ಕಂಡಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮಾತ್ರ. ಕಾಂಗ್ರೆಸ್ ಆಡಳಿತದ ಸಮಯದಲ್ಲಿ ಕಾಶ್ಮೀರಿ ಯುವಕರ ಕೈಯಲ್ಲಿ ಕಲ್ಲುಗಳಿದ್ದವು. ಆದರೆ, ಇಂದು ಅವರಿಗೆ ಉದ್ಯೋಗವಿದೆ. ಒಬ್ಬ ಹಿರಿಯ ನಾಯಕರಾಗಿ ಶ್ರೀ ಖರ್ಗೆಯವರು ಏನು ಹೇಳುತ್ತಾರೆ ಎಂಬುದರ ಮೇಲೆ ನಿಗಾ ಇರಬೇಕು ಎಂದು ಹೇಳಿದ್ದಾರೆ.

ಇದನ್ನೂ  ಓದಿ:ಬಿಜೆಪಿ ಭಯೋತ್ಪಾದಕರ ಪಕ್ಷ: ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ

ಖರ್ಗೆ ಅವರು ತಮ್ಮ ಪಾರ್ಟಿಯಲ್ಲಿ ನಡೀಯುತ್ತಿರುವುದರ ಆಧಾರದ ಮೇಲೆ ಹೇಳಿರಬೇಕು-ಜೋಶಿ

ಇನ್ನು ಹುಬ್ಬಳ್ಳಿಯಲ್ಲಿ ಜೋಶಿ ಮಾತನಾಡಿ, ‘ಖರ್ಗೆ ಅವರು ತಮ್ಮ ಪಾರ್ಟಿಯಲ್ಲಿ ಏನು ನಡೀತಿದೆ, ಅದರ ಆಧಾರದ ಮೇಲೆ ಹೇಳಿರಬೇಕು ಎಂದರು.ಬಾಬು ಜಗಜೀವನರಾಮ್,ಅಂಬೇಡ್ಕರ್, ಸೀತಾರಾಮ್ ಕೇಸರಿ ಅಂತವರಿಗೆ ಘೋರವಾದ ಅನ್ಯಾಯ ಮಾಡಿದ್ದಾರೆ. ಇವತ್ತು ಒಂದೆ ಒಂದು OBC ಸಮುದಾಯದವರು ಪ್ರಧಾನ ಮಂತ್ರಿ ಮಾಡಿಲ್ಲ. ಎಲ್ಲವನ್ನೂ ನಕಲಿ ಗಾಂಧಿಗಳಿಗೆ ಮೀಸಲಿಟ್ಟಿದ್ದಾರೆ. ಅವರು ನಮ್ಮ ಬಗ್ಗೆ ಏನ ಮಾತಾಡ್ತಾರೆ ಎಂದು ಕಿಡಿಕಾರಿದರು.

ದಲಿತರ ವಿರುದ್ದ ಉದ್ದಟತನ ಮಾಡಿದ್ದಕ್ಕೆ ಕಾಂಗ್ರೆಸ್​ ಸ್ಥಿತಿ ಹೀಗಾಗಿದೆ

‘ನೀವು ಆರ್ಟಿಕಲ್ 370 ಇಟ್ಕೊಂಡು ಭಯೋತ್ಪಾದಕರನ್ನು ಬೆಳಸಿದ್ದು ದೇಶಕ್ಕೆ ಗೊತ್ತಿದೆ. ಖರ್ಗೆ ಅವರೇ ನಿಮ್ಮ ರಾಹುಲ್ ಬಾಬಾ, ಸೋನಿಯಾ ಗಾಂಧಿ ನೇತೃತ್ವದಲ್ಲಿ 400 ಸೀಟ್ ಇದ್ದೀರಿ. ಇವತ್ತು ಯಾವ ರಾಜ್ಯಕ್ಕೆ ಹೋದರೂ ನಿಮಗೆ ರಿಜನಲ್ ಪಾರ್ಟಿ ಬೇಕು. ಉತ್ತರ ಕರ್ನಾಟಕದಲ್ಲಿ ಅಂಗಿ ಹಿಡಕೊಂಡ ಹೋಗುತ್ತಾರೆ ಎಂಬ ಮಾತಿನಂತೆ ಕಾಂಗ್ರೆಸ್ ಪಕ್ಷದ ಸ್ಥಿತಿ ಆಗಿದೆ. ದಲಿತರ ವಿರುದ್ದ ಉದ್ದಟತನ ಮಾಡಿದ್ದಕ್ಕೆ ನಿಮ್ಮ ಸ್ಥಿತಿ ಹೀಗಾಗಿದೆ. ದಲಿತರಿಗೆ ಗೌರವ ಕೊಟ್ಟಿದ್ದು ಬಿಜೆಪಿ ಎಂದರು.

ಕಾಂಗ್ರೆಸ್ ಇಸ್ಲಾಂಮಿಕ್ ಬೆಂಬಲಿತ ಪಾರ್ಟಿ

ಕಾಂಗ್ರೆಸ್ ಇಸ್ಲಾಂಮಿಕ್ ಬೆಂಬಲಿತ ಪಾರ್ಟಿ ಎನ್ನುವುದಕ್ಕೆ ‘ಹುಬ್ಬಳ್ಳಿ ಕೇಸ್ ವಾಪಸ್ ತಗೆದುಕೊಂಡಿರುವುದೇ ಸಾಕ್ಷ್ಯ. ಪೊಲೀಸ್ ಅಧಿಕಾರಿಗಳು ಏನು ಪ್ರತಿಭಟನೆ ಎಂದು ಕೇಳಿದರು. ‘ನಾವು ನಮ್ಮ ಸಲುವಾಗಿ ಪ್ರತಿಭಟನೆ ಮಾಡುತ್ತಿಲ್ಲ. ಅವತ್ತು ಪೊಲೀಸರ ಹತ್ಯೆಯಾಗತಿತ್ತು. ಇದು ಚಾರ್ಜ್ ಶೀಟ್ ನಲ್ಲಿದೆ. ಇದೀಗ ಅಂತಹ ಉಗ್ರಗಾಮಿಗಳ ಕೇಸ್ ತಗೀದು ಹಾಕಿದ್ದೀರಿ. ಖರ್ಗೆ ಸಾಹೇಬರು ಮೊದಲು ಸಿದ್ದರಾಮಯ್ಯಗೆ ಹೇಳಿ ಅದನ್ನು ಬಂದ್ ಮಾಡಿಸಿ. ಆಮೇಲೆ ಬೇರೆಯವರಿಗೆ ಹೇಳಿ ಎಂದು ಟಾಂಗ್​ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?
ಆಕ್ಸ್​ಫರ್ಡ್​ ವಿಶ್ವವಿದ್ಯಾಲಯದಲ್ಲಿ ಮಮತಾ ಬ್ಯಾನರ್ಜಿ ಭಾಷಣದ ವೇಳೆ ಗದ್ದಲ
ಆಕ್ಸ್​ಫರ್ಡ್​ ವಿಶ್ವವಿದ್ಯಾಲಯದಲ್ಲಿ ಮಮತಾ ಬ್ಯಾನರ್ಜಿ ಭಾಷಣದ ವೇಳೆ ಗದ್ದಲ