AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಹತ್ಯೆ ರಕ್ತದ ಹನಿ ಭೂಮಿ ಮೇಲೆ ಬೀಳಲು ಬಿಡೋದಿಲ್ಲ; ಕಾಂಗ್ರೆಸ್​ಗೆ ಗೋ ಶಾಪ ತಟ್ಟುತ್ತೆ -ಪ್ರಮೋದ್ ಮುತಾಲಿಕ್

ಸಚಿವ ವೆಂಕಟೇಶ್ ಹೇಳಿಕೆಗೆ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಗೋ ಸಂರಕ್ಷಣೆ ಆಗಬೇಕು ಅನ್ನೋದು ಕಾಂಗ್ರೆಸ್ ನಿಲುವಾಗಿತ್ತು. ಈಗ ಈ ಹೇಳಿಕೆ ಕೊಡಲು ಪ್ರನಾಳಿಕೆ ಕಾರಣವಾಗಿದೆ. ಗೋ ಹತ್ಯೆ ನಿಷೇಧ ಕಾಯ್ದೆ, ಮತಾಂತರ ಕಾಯಿದೆ ಹಿಂಪಡಿತೀವಿ ಎಂದು ಕಾಂಗ್ರೆಸ್ ಹೇಳಿದೆ ಎಂದರು.

ಗೋಹತ್ಯೆ ರಕ್ತದ ಹನಿ ಭೂಮಿ ಮೇಲೆ ಬೀಳಲು ಬಿಡೋದಿಲ್ಲ; ಕಾಂಗ್ರೆಸ್​ಗೆ ಗೋ ಶಾಪ ತಟ್ಟುತ್ತೆ -ಪ್ರಮೋದ್ ಮುತಾಲಿಕ್
ಪ್ರಮೋದ್​ ಮುತಾಲಿಕ್​
Follow us
ಆಯೇಷಾ ಬಾನು
|

Updated on: Jun 04, 2023 | 7:54 AM

ಬೆಂಗಳೂರು: ಎಮ್ಮೆ ಕೋಣಗಳನ್ನು ಕಡಿದು ಹಾಕುವುದಾದರೇ ಹಸುಗಳನ್ನು ಏಕೆ ಕಡಿಯಬಾರದು? ಎಂದು ಹೇಳಿದ ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್(K Venkatesh) ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಈ ಹೇಳಿಕೆ ಸಂಬಂಧ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್(Pramod Muthalik) ಹಾಗೂ ಶಾಸಕ ಯಶ್ಪಾಲ್ ಸುವರ್ಣ(Yashpal Suvarna) ವಾಗ್ದಾಳಿ ನಡೆಸಿದ್ದಾರೆ.

ಸಚಿವ ವೆಂಕಟೇಶ್ ಹೇಳಿಕೆಗೆ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಗೋ ಸಂರಕ್ಷಣೆ ಆಗಬೇಕು ಅನ್ನೋದು ಕಾಂಗ್ರೆಸ್ ನಿಲುವಾಗಿತ್ತು. ಈಗ ಈ ಹೇಳಿಕೆ ಕೊಡಲು ಪ್ರನಾಳಿಕೆ ಕಾರಣವಾಗಿದೆ. ಗೋ ಹತ್ಯೆ ನಿಷೇಧ ಕಾಯ್ದೆ, ಮತಾಂತರ ಕಾಯಿದೆ ಹಿಂಪಡಿತೀವಿ ಎಂದು ಕಾಂಗ್ರೆಸ್ ಹೇಳಿದೆ. ಮುಸ್ಲಿಂ ಓಲೈಕೆಗಾಗಿ ಈ ರೀತಿ ಮಾಡ್ತಿದ್ದಾರೆ. ಕೋಣ ಮತ್ತು ಎಮ್ಮೆ ಕೂಡ ಗೋ ವ್ಯಾಖ್ಯಾನದಲ್ಲಿ ಬರುತ್ತೆ. ಅದನ್ನು ಕೂಡ ಕಡಿಯಬಾರದು. ಆದರೆ ಯಾವಾಗ ಕಡಿಯಬೇಕು ಅನ್ನೋ ವ್ಯಾಖ್ಯಾನ ಇದೆ. 13 ವರ್ಷದ ಬಳಿಕ ಅದನ್ನ ಕಡಿಯಬಹುದು. ಸಾಧು, ಸಂತರು, ಋಷಿ ಮುನಿಗಳು ಗೋ ಸಂರಕ್ಷಣೆ ಆಗಬೇಕು ಅಂದಿದ್ದಾರೆ. ಕಡಿದರೆ ಕಾಂಗ್ರೆಸ್ ಗೆ ಗೋವಿನ ಶಾಪ ತಟ್ಟುತ್ತದೆ. ಮುಸ್ಲಿಂ ತುಷ್ಟೀಕರಣ ಒಂದೇ ಇವರ ಉದ್ದೇಶ ಆಗಿದೆ. ಗೋಹತ್ಯೆ ಹತ್ಯೆ ನಿಷೇಧ ಕಾನೂನು ಹಿಂಪಡೆದರೆ ಉಗ್ರ ಹೋರಾಟ ಮಾಡ್ತೀವಿ. ಗೋಹತ್ಯೆ ರಕ್ತದ ಹನಿ ಕೂಡ ಭೂಮಿ ಮೇಲೆ ಬೀಳಲು ಬಿಡೋದಿಲ್ಲ. ಮುಸ್ಲಿಂ ತುಷ್ಟೀಕರ ಮಾಡಲು ನಾವು ಬಿಡೋದಿಲ್ಲ ಎಂದು ಬೆಂಗಳೂರಲ್ಲಿ ಪ್ರಮೋದ್ ಮುತಾಲಿಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು? ಸಚಿವ ಕೆ.ವೆಂಕಟೇಶ್​ ಪ್ರಶ್ನೆ

ಇನ್ನು ಮತ್ತೊಂದೆಡೆ ಉಡುಪಿಲ್ಲಿ ಶಾಸಕ ಯಶ್ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇದ್ದು ಹಿಂದೂಗಳ ಭಾವನೆಗೆ ಧಕ್ಕೆ ತರುವ ಹೇಳಿಕೆ ನೀಡಿರುವುದು ಖಂಡನೀಯ. ಈ ಹೇಳಿಕೆಯಿಂದ ಗೋಹತ್ಯೆ ನಿಷೇಧ ಕಾನೂನು ವಾಪಸ್ಸು ಪಡೆಯುತ್ತೇವೆ ಎಂಬ ಹೇಳಿಕೆ ಮೊದಲ ಹೆಜ್ಜೆ ಇಟ್ಟಂತೆ ಆಗುತ್ತದೆ. ಸಚಿವರು 84 ಶೇಕಡ ಇರುವ ಹಿಂದೂಗಳ ಭಾವನೆಯಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ಒಂದು ಅವಧಿಗೆ ಮಾತ್ರ ಜನರು ಅವರಿಗೆ ಸರ್ಕಾರ ರಚನೆ ಮಾಡಲು ಅವಕಾಶ ಕೊಟ್ಟಿದ್ದಾರೆ. ರಾಜ್ಯವನ್ನು ಅವರಿಗೆ ಮಾರಾಟ ಮಾಡಿಲ್ಲ. ನೀಡಿರುವ ಹೇಳಿಕೆಯನ್ನು ಸಚಿವರು ವಾಪಸ್ಸು ಪಡೆಯಬೇಕು. ಈ ಬಗ್ಗೆ ಹೇಳಿಕೆ ನೀಡುವ ಸಮಯದಲ್ಲಿ ಕಾನೂನಿನ ಬಗ್ಗೆ ಅರಿವು ಇರಬೇಕು. ಹಿಂದೂ ಭಾವನೆಗಳಿಗೆ ಧಕ್ಕೆ ಆಗುವ ರೀತಿಯ ಹೇಳಿಕೆ ನೀಡಿದರೆ, ಸರಿಯಾದ ಉತ್ತರ ನೀಡಲು ಹಿಂದೂ ಸಂಘಟನೆ ಹಾಗೂ ಕಾರ್ಯಕರ್ತರು ಸಿದ್ದರಿದ್ದಾರೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ