AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ಹತ್ಯೆ: ಆರೋಪಿಗಳ ಬಂಧಿಸುವರೆಗೂ ವಿಶ್ರಮಿಸುವುದಿಲ್ಲ, ಅಗತ್ಯಬಿದ್ರೆ ಎನ್‌ಐಎ ತನಿಖೆಗೆ ವಹಿಸ್ತೇವೆ : ಸಿಎಂ ಬೊಮ್ಮಾಯಿ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಅಗತ್ಯಬಿದ್ದರೇ ಎನ್‌ಐಎ ತನಿಖೆಗೆ ವಹಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರವೀಣ್ ಹತ್ಯೆ: ಆರೋಪಿಗಳ ಬಂಧಿಸುವರೆಗೂ ವಿಶ್ರಮಿಸುವುದಿಲ್ಲ, ಅಗತ್ಯಬಿದ್ರೆ ಎನ್‌ಐಎ ತನಿಖೆಗೆ ವಹಿಸ್ತೇವೆ : ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Jul 27, 2022 | 7:14 PM

Share

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಅಗತ್ಯಬಿದ್ದರೇ ಎನ್‌ಐಎ ತನಿಖೆಗೆ ವಹಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆದಷ್ಟು ಬೇಗ ಕೊಲೆ ಆರೋಪಿಗಳನ್ನು ಬಂಧಿಸುತ್ತೇವೆ. ಉಗ್ರ ಶಿಕ್ಷೆ ಕೊಡಿಸುತ್ತೇವೆ, ಯಾವುದೇ ಅನುಮಾನಬೇಡ. ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸಲ್ಲ ಎಂದರು.

ಜಿಲ್ಲಾ ಪೊಲೀಸರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಡಿಜಿಪಿ ಅವರು ತಂಡ ರಚಿಸಿ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪ್ರಾರ್ಥಮಿಕ ಮಾಹಿತಿ ಪಡೆಯಬೇಕಾಗುತ್ತೆ. ಅದಕ್ಕೆಯಾದ ಕೆಲವೊಂದು ನಿಯಮಗಳು ಇರುತ್ತೆ. ಅವೆಲ್ಲವನ್ನೂ ಗಮನಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಪ್ರವೀಣ್ ಹತ್ಯೆ ಬಗ್ಗೆ ಕ್ರಮ ಕೈಗೊಳ್ಲೋಕೆ ಆದೇಶಿಸಿದ್ದು, ಕಾರ್ಯಾಚರಣೆ ನಡೀತಿದೆ. ಡಿಜಿ‌ ಅವರ‌ ಬಳಿ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಶೀಘ್ರವೇ ಕೊಲೆ‌ ಮಾಡಿದವರನ್ನ ಬಂಧಿಸಿ‌ ಉಗ್ರ ಶಿಕ್ಷೆಗೆ ಒಳಪಡಿಸುತ್ತೇವೆ. ಘಟನೆ ಹಿಂದೆ ಯಾರೇ‌ ಇದ್ದರೂ ಬಂಧಿಸುತ್ತೇವೆ. ಆವೇಶಕ್ಕೆ ಯಾರೂ ಒಳಗಾಗಬಾರದು. ಶಾಂತಿ ಕಾಪಾಡಬೇಕೆಂದು ಸಿಎಂ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಕಾರ್ಯಕರ್ತನ ಹತ್ಯೆ ಖಂಡಿಸಲು ನಿನ್ನೆ ನನ್ನ ಬಳಿ ಶಬ್ದಗಳಿರಲಿಲ್ಲ: ಹತ್ಯೆ ಪ್ರಕರಣ ಸಂಬಂಧ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮಾತನಾಡಿ ಕಾರ್ಯಕರ್ತನ ಹತ್ಯೆ ಖಂಡಿಸಲು ನಿನ್ನೆ ನನ್ನ ಬಳಿ ಶಬ್ದಗಳಿರಲಿಲ್ಲ. ತನಿಖೆ ತೀವ್ರಗೊಳಿಸಲು ಸಿಎಂ, ಗೃಹಮಂತ್ರಿಗೆ ಮನವಿ ಮಾಡಿದ್ದೇನೆ. ಮನೆ ಮಗನನ್ನ ಕಳೆದುಕೊಂಡಿದ್ದೇವೆ ಎಂದು ಸಂತಾಪ ಸೂಚಿಸಿದರು.

ಆದರೆ ಒಂದಂತೋ ಹೇಳಲು ಬಯಸುವೆ, ಇದರ ಹಿಂದಿರುವ ಶಕ್ತಿಗಳನ್ನ ಮಟ್ಟ ಹಾಕಲು ನಾವು ಸನ್ನದ್ದರಾಗಿದ್ದೇವೆ. ನಾವು ಸುಮ್ಮನಿರುವ ಪ್ರಶ್ನೆಯೇ ಇಲ್ಲ. ಸರ್ಕಾರ ತಕ್ಕ ಉತ್ತರವನ್ನ ಕಾನೂನಿನ ಚೌಕಟ್ಟಿನಲ್ಲಿ ನೀಡಲಿದೆ. ಮತಾಂಧ ಶಕ್ತಿಗಳನ್ನ ಹತ್ತಿಕ್ಕುವ ಕೆಲಸ ಮಾಡೇ ಮಾಡುತ್ತೇವೆ. ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಶಾಂತಿ ಕದಡುವ ಕೆಲಸ ಆಗಿರಲಿಲ್ಲ ಎಂದರು.

ಕೇರಳದಿಂದ ಬಂದು ಶಾಂತಿ ಕದಡುವ ಕೆಲಸ ಮಾಡಲಾಗುತ್ತಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಜನಾಕ್ರೋಶವನ್ನ ಸರ್ಕಾರ ಗಮನದಲ್ಲಿಟ್ಟುಕೊಂಡಿದೆ. ಹಂತಕರಿಗೆ ಯಾವ ಶಿಕ್ಷೆ ಕೊಡಬೇಕೋ ಆ ಶಿಕ್ಷೆ ಕೊಡಲಿದೆ. ಪೋಲಿಸ್ ಇಲಾಖೆಗೆ ಮುಕ್ತವಾದ ಅವಕಾಶ ನೀಡುತ್ತೇವೆ. ಮುಂದಿನ ಎರಡು ಮೂರು ದಿನಗಳ ಕಾಲ ಸಿಎಂ ಹಾಗೂ ಗೃಹ ಸಚಿವರ ಜೊತೆ ಸಂಪರ್ಕದಲ್ಲಿದ್ದುಕೊಂಡ ಮತೀಯ ಶಕ್ತಿಯನ್ನು ಮಟ್ಟ ಹಾಕುತ್ತೇವೆ ಎಂದು ತಿಳಿಸಿದರು.

Published On - 5:12 pm, Wed, 27 July 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!