AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಕುಂಭಮೇಳಕ್ಕೆ ತೆರಳಿದ್ದ ಕನ್ನಡಿಗರಿಗೆ ಶಾಕ್: ಪ್ರಯಾಗ್​ರಾಜ್​ನಲ್ಲಿ ಊಟ, ನೀರಿಲ್ಲದೇ ಪರದಾಟ

ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ತೆರಳಿದ ನೂರಾರು ಕನ್ನಡಿಗರು ತಾಂತ್ರಿಕ ದೋಷದಿಂದ ಸ್ಪೈಸ್‌ಜೆಟ್ ವಿಮಾನದ ವಿಳಂಬದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಧ್ಯಾಹ್ನ 2:10ಕ್ಕೆ ಹೊರಡಬೇಕಿದ್ದ ವಿಮಾನ ಸಂಜೆಯಾದರೂ ಹೊರಡದೆ, ಪ್ರಯಾಣಿಕರು ಗಂಟೆಗಟ್ಟಲೆ ವಿಮಾನ ನಿಲ್ದಾಣದಲ್ಲಿ ಅನ್ನ ನೀರಿಲ್ಲದೆ ಕಾಯುವಂತಾಗಿದೆ. ಸ್ಪೈಸ್‌ಜೆಟ್ ವಿರುದ್ಧ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾಕುಂಭಮೇಳಕ್ಕೆ ತೆರಳಿದ್ದ ಕನ್ನಡಿಗರಿಗೆ ಶಾಕ್: ಪ್ರಯಾಗ್​ರಾಜ್​ನಲ್ಲಿ ಊಟ, ನೀರಿಲ್ಲದೇ ಪರದಾಟ
ಮಹಾಕುಂಭಮೇಳಕ್ಕೆ ತೆರಳಿದ್ದ ಕನ್ನಡಿಗರಿಗೆ ಶಾಕ್: ಪ್ರಯಾಗ್​ರಾಜ್​ನಲ್ಲಿ ಊಟ, ನೀರು ಇಲ್ಲದೇ ಪರದಾಟ
ನವೀನ್ ಕುಮಾರ್ ಟಿ
| Edited By: |

Updated on: Jan 28, 2025 | 8:53 PM

Share

ದೇವನಹಳ್ಳಿ, ಜನವರಿ 28: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ (Mahakumbh) ಬರುವ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಈಗಾಗಲೇ ಸುಮಾರು 16 ಕೋಟಿ ಭಕ್ತರು ಪುಣ್ಯಸ್ನಾ ಮಾಡಿದ್ದು, ನಾಳೆ ಮೌನಿ ಅಮಾವಾಸ್ಯೆ ಹಿನ್ನೆಲೆ ಕುಂಭಮೇಳಕ್ಕೆ ಸುಮಾರು 10 ಕೋಟಿ ಭಕ್ತರು ಬರುವ ನಿರೀಕ್ಷೆ ಇದೆ. ಈ ಮಧ್ಯೆ ತಾಂತ್ರಿಕ ದೋಷದಿಂದ ಸ್ಪೈಸ್ ಜೆಟ್ ವಿಮಾನ ಹಾರಾಟ ವಿಳಂಬವಾಗಿದ್ದು, ಪ್ರಯಾಗ್​ರಾಜ್​ಗೆ ತೆರಳಿದ್ದ ಕನ್ನಡಿಗರಿಗೆ ಶಾಕ್ ಎದುರಾಗಿದೆ. ಅನ್ನ ನೀರಿಲ್ಲದೆ ಪರದಾಡಿದ್ದಾರೆ.

ತಾಂತ್ರಿಕ ದೋಷದಿಂದ ಮಧ್ಯಾಹ್ನ 2.10ಕ್ಕೆ ಬೆಂಗಳೂರಿಗೆ ಹೊರಡಬೇಕಿದ್ದ ಸ್ಪೈಸ್​ಜೆಟ್ ವಿಮಾನ SG664 ಹಾರಾಟ ವಿಳಂಬವಾಗಿದೆ. ಗಂಟೆಗಟ್ಟಲೆ ವಿಮಾನ ಹಾರಾಟ ವಿಳಂಬವಾಗಿದ್ದರಿಂದ ಪ್ರಯಾಗ್​ರಾಜ್​ನ ವಿಮಾನ ನಿಲ್ದಾಣದಲ್ಲಿ ಕನ್ನಡಿಗರು ಅನ್ನ ನೀರಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ರಾತ್ರಿ 11.15ಕ್ಕೆ ವಿಮಾನ ಟೇಕಾಫ್ ಆಗುವುದಾಗಿ ಹೇಳುತ್ತಿದ್ದು, ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಯಾಗ್​ರಾಜ್​​ಗೆ ತೆರಳುವ ಫ್ಲೈಟ್​​ ಟಿಕೆಟ್​ಗಳು ಸೋಲ್ಡೌಟ್

ಇದೆಲ್ಲದರ ನಡುವೆ ಕುಂಭಮೇಳಕ್ಕೆ ರಾಜ್ಯದಿಂದ ತೆರಳುವ ವಿಮಾನಗಳು ಫುಲ್​ ಆಗಿದ್ದು, ಫ್ಲೈಟ್​​ ಟಿಕೆಟ್​ ಸೋಲ್ಡ್​​ಔಟ್ ಆಗಿವೆ. ಪ್ರತಿದಿನ ಮೂರು ವಿಮಾನಗಳು ಏರ್ಪೋಟ್​ನಿಂದ ಪ್ರಯಾಗ್​ರಾಜ್​ಗೆ ಹಾರಾಟ ಮಾಡುತ್ತಿವೆ. ಇಂಡಿಗೋ ಸಂಸ್ಥೆಯ ಒಂದು, ಸ್ಪೈಸ್ ಜೆಟ್​ ಸಂಸ್ಥೆಯ ಎರಡು ವಿಮಾನಗಳು ಕೆಐಎಬಿಯಿಂದ ಪ್ರಯಾಗ್​ರಾಜ್​ಗೆ ಪ್ರಯಾಣ ಮಾಡುತ್ತಿವೆ.

ಇದನ್ನೂ ಓದಿ: ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಸುಧಾಮೂರ್ತಿ

ಇದೀಗ ಬುಕ್ ಮಾಡಬೇಕು ಅಂದರೆ ಒಬ್ಬರಿಗೆ ಪ್ರಯಾಗ್​ರಾಜ್​ಗೆ ತೆರಳಲು 22 ರಿಂದ 30 ಸಾವಿರ ರೂ. ಟಿಕೆಟ್ ದರ ಇದೆ. ಫೆಬ್ರವರಿ 26ರವರೆಗೂ ಪ್ರಯಾಗ್​ರಾಜ್​ಗೆ ತೆರಳುವ ವಿಮಾನಗಳು ಫುಲ್​​ ರಪ್​​ ಇದ್ದು, ಪ್ರಯಾಗ್​ರಾಜ್ ಹೊರತುಪಡಿಸಿದರೆ, ವಾರಣಾಸಿಗೂ ತೆರಳಿ ಅಲ್ಲಿಂದ ಪ್ರಯಾಗ್​ರಾಜ್​ಗೆ ತೆರಳಬಹುದಾಗಿದೆ. ಕೆಂಪೇಗೌಡ ಏರ್ಪೋಟ್​ನಿಂದ ವಾರಣಾಸಿಗೆ ಪ್ರತಿದಿನ 15 ವಿಮಾನಗಳು ಹಾರಾಟ ಮಾಡುತ್ತಿದ್ದು, ಸದ್ಯ ವಾರಣಾಸಿಗೆ 20 ರಿಂದ 28 ಸಾವಿರ ರೂ ಪ್ರಯಾಣ ದರ ಇದೆ.

ಕೆಂಪೇಗೌಡ ಏರ್ಪೋಟ್​ನಿಂದ ಲಕ್ನೋಗೂ ಪ್ರತಿದಿನ 22 ವಿಮಾನಗಳು ಹಾರಾಟ ಮಾಡುತ್ತವೆ. 16 ರಿಂದ 22 ಸಾವಿರ ರೂ. ವರೆಗೂ ಟಿಕೆಟ್ ದರ ಇದೆ. ಇನ್ನು ಪೇಗೌಡ ಏರ್ಪೋಟ್​ನಿಂದ ಅಯೋಧ್ಯೆಗೆ ಪ್ರತಿದಿನ ಐದು ವಿಮಾನಗಳು ಹಾರಾಟ ಮಾಡುತ್ತವೆ. ಸದ್ಯ 16 ರಿಂದ 30 ಸಾವಿರ ರೂ. ಟಿಕೆಟ್ ದರವಿದೆ.

ಇದನ್ನೂ ಓದಿ: Video: ಪ್ರಯಾಗ್​ರಾಜ್​ಗೆ ಹೊರಟಿದ್ದ ರೈಲಿನ ಮೇಲೆ ಕಲ್ಲು ತೂರಾಟ, ರೈಲು ಧ್ವಂಸ

ಕುಂಭಮೇಳ ಪ್ರಯಾಗ್​ರಾಜ್​ಗೆ ಪ್ರತಿದಿನ 3 ವಿಮಾನ, ಲಕ್ನೋಗೆ 22 ವಿಮಾನ, ವಾರಣಾಸಿಗೆ 15 ವಿಮಾನ ಮತ್ತು ಅಯೋಧ್ಯೆಗೆ 5 ವಿಮಾನ ಹಾರಾಟ ಮಾಡುತ್ತಿರುವುದರಿಂದ ಮೂರು ಏರ್ಲೈನ್ಸ್​​ನ ವಿಮಾನಗಳು ಫೂಲ್ ಬ್ಯುಸಿಯಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ