AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಉದ್ಘಾಟನೆ ದಿನವೇ ಮಗು ಪಡೆಯಲು ಬೆಂಗಳೂರಿನಲ್ಲೂ ಶುರುವಾಗಿದೆ ಹೊಸ ಟ್ರೆಂಡ್

ಭಾರತದಲ್ಲಿ ರಾಮಜಪ ಶುರುವಾಗಿದೆ. ಅಯೋಧ್ಯೆ ರಾಮ ಮಂದಿರದಲ್ಲಿ ಮರ್ಯಾದಾ ಪರುಷೋತ್ತಮನ ಪ್ರಾಣ ಪ್ರತಿಷ್ಠಾಪನೆಗೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ಭಾರತದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದೆ. ಜನವರಿ 22ರಂದೇ ಹೆರಿಗೆ ಆಗಲಿ ಎಂದು ಗರ್ಭಿಣಿಯರು ಬಯಸುತ್ತಿದ್ದಾರೆ. ಈ ಟ್ರೆಂಡ್ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ಶುರುವಾಗಿದೆ.

ರಾಮ ಮಂದಿರ ಉದ್ಘಾಟನೆ ದಿನವೇ ಮಗು ಪಡೆಯಲು ಬೆಂಗಳೂರಿನಲ್ಲೂ ಶುರುವಾಗಿದೆ ಹೊಸ ಟ್ರೆಂಡ್
TV9 Web
| Edited By: |

Updated on: Jan 09, 2024 | 7:43 PM

Share

ಬೆಂಗಳೂರು, (ಜನವರಿ 09): ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ (ayodhya ram mandir) ದಿನ ಹತ್ತಿರವಾಗುತ್ತಿದ್ದಂತೆ ರಾಮನ ಭಕ್ತರು ಒಂದೊಂದು ವಿನೂತನ ಭಕ್ತಿ ಸಮರ್ಪಣೆ ಮಾಡುತ್ತಿದ್ದಾರೆ. ಇದೇ ಜನವರಿ 22ರಂದು ಅಯೋಧ್ಯ ರಾಮ ಮಂದಿರದಲ್ಲಿ ವಿಜೃಂಭಣೆಯಿಂದ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಜನವರಿ 22ರ ದಿನವನ್ನು ಸ್ಮರಣೀಯವಾಗಿಸಲು ಹಲವು ಪ್ರಯತ್ನ ಮಾಡುತ್ತಿದ್ದಾರೆ. ಮತ್ತೊಂದೆಡೆ ಆ ದಿನವೇ ತಮ್ಮ ಮಕ್ಕಳು ಜನಿಸಬೇಕು ಎಂದು ಗರ್ಭಿಣಿಯರು ಆಶಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಅನೇಕ ಆಸ್ಪತ್ರೆಯ ವೈದ್ಯರಿಗೆ ಗರ್ಭಿಣಿಯರು ದುಂಬಾಲು ಬಿದ್ದಿದ್ದಾರೆ.

ಇದು ಅಚ್ಚರಿ ಎನಿಸಿದರೂ ಸತ್ಯ. ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ದಿನದಂದೆ ತಮಗೆ ಹೆರಿಗೆ ಮಾಡಿಸಬೇಕೆಂದು ವೈದ್ಯರಿಗೆ ಗರ್ಭಿಣಿಯರು ಒತ್ತಾಯಿಸುತ್ತಿರುವ ಸುದ್ದಿ ಉತ್ತರ ಪ್ರದೇಶ ಕಾನ್ಪುರದಲ್ಲಿ ಬೆಳಕಿಗೆ ಬಂದಿದ್ದವು. ಇದೀಗ ಬೆಂಗಳೂರಿನಲ್ಲೂ ಸಹ  ಸಾಕಷ್ಟು ಗರ್ಭಿಣಿಯರು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಜನವರಿ 22 ರಂದೇ ಡೆಲಿವೆರಿ ಮಾಡಿಸಿಕೊಳ್ಳುವಂತೆ ವೈದ್ಯರಿಗೆ ಮನವಿ ಮಾಡುತ್ತಿದ್ದಾರೆ. ಆದ್ರೆ ವೈದ್ಯರು, ಎಲ್ಲರಿಗೂ ಅವತ್ತೆ ಡೆಲಿವರಿ ಮಾಡುವುದಕ್ಕೆ ಕಷ್ಟ ಸಾಧ್ಯ ಎನ್ನುತ್ತಿದ್ದಾರೆ. ಡೆಲಿವರಿ ನಿಗಧಿಯಾದ ದಿನಾಂಕಕ್ಕಿಂತ ಒಂದು ವಾರ ಹಿಂದೆ ಮುಂದೆ ಅಂತರ ಇದ್ರೆ ಮಾತ್ರ ಈ ರೀತಿ ಡೆಲಿವರಿ ಮಾಡಿಸಿಕೊಳ್ಳಬಹುದು. ಅತಂವರಿಗೆ ಮಾತ್ರ ಅವಕಾಶ ನೀಡುತ್ತಿದ್ದೇವೆ ಎಂದಿದ್ದಾರೆ ವೈದ್ಯರು.

ಇದನ್ನೂ ಓದಿ: ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ, ಅಯೋಧ್ಯೆಯ ರಾಮ ಮಂದಿರದಲ್ಲಿ ಮೊಳಗಿದ ಕನ್ನಡಿಗ ಡಾ. ಗಜಾನನ ಶರ್ಮಾ ರಚಿತ ರಾಮ ಭಜನೆ

ಮಂದಿರ ಉದ್ಘಾಟನೆ ದಿನ ಹೆರಿಗೆ ಮಾಡಿಸಿಕೊಳ್ಳಲು ತಾಯಂದಿರ ಬೇಡಿಕೆ ಹೆಚ್ಚಾಗಿದ್ದು, ನಮಗೆ ರಾಮನಂಥಾ ಮಗು ಹುಟ್ಟಲಿ ಎಂದು ಬಯಸಿ ಉತ್ತರ ಪ್ರದೇಶದ ಗರ್ಭಿಣಿಯರು ಸಿಜೇರಿಯನ್​​ ಮಾಡಿಸಿಕೊಳ್ಳಲು ಆಸ್ಪತ್ರೆಗಳಿಗೆ ಮುಗಿಬೀಳುತ್ತಿದ್ದಾರೆ. ಮಾಹಿತಿಯ ಪ್ರಕಾರ ಕಾನ್ಪುರ ದ ಗಾಯತ್ರಿ ಶಂಕರ್​​​ ಸ್ಮಾರಕ ಆಸ್ಪತ್ರೆಯಲ್ಲಿ ಜನವರಿ 22ಕ್ಕೆ ಸಿಜೇರಿಯನ್​ಗೆ 14ರಿಂದ 16 ಗರ್ಭಿಣಿಯರು ಮನವಿ ಸಲ್ಲಿಸಿದ್ದಾರಂತೆ. ಹೀಗಾಗಿ ಆಸ್ಪತ್ರೆಯಲ್ಲಿ 35 ಸಿಜೇರಿಯನ್​ಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆಯಂತೆ.

ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾನ 84 ಸೆಕೆಂಡ್​ಗಳಲ್ಲಿ ಆಗಲಿದೆ. ಮಧ್ಯಾಹ್ನ 12.29ರಿಂದ ಪ್ರತಿಷ್ಠಾಪನಾ ಕಾರ್ಯ ಶುರುವಾಗಲಿದೆ. ಅಂದೇ ಮಗು ಜನಿಸುವುದು ಶುಭಕರ ಮತ್ತು ಶ್ರೇಷ್ಠ ಎಂದು ಈ ಗರ್ಭಿಣಿ ಸ್ತ್ರೀಯರು ಭಾವಿಸಿದ್ದಾರೆ. ಹೀಗಾಗಿ ತಮಗೆ ರಾಮನಂತಹಾ ಸಹನಾ ಗುಣವುಳ್ಳ ಮಗು ಜನಿಸುತ್ತೆ ಅನ್ನೋ ಆಸೆಯಿಂದ ತಾಯಂದಿರು ಈ ಕ್ಷಣವನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರಂತೆ.

ಹೊಸ ವರ್ಷ ಸೇರಿದಂತೆ ವಿಶೇಷ ದಿನಗಳಂದು ಮಗು ಹುಟ್ಟಬೇಕೆಂದು ಪೋಷಕರು ಆಸೆ ಪಟ್ಟಿರುತ್ತಾರೆ. ಅದರಲ್ಲೂ ಮುಖ್ಯವಾಗಿ ನ್ಯೂ ಇಯರ್​ ದಿನದಂದು ಸಿಜೇರಿಯನ್​ ಮಾಡಿಸಿಕೊಳ್ಳುವ ಟ್ರೆಂಡ್ ಇದೆ. ಇದೀಗ ರಾಮ ಮಂದಿರ ಉದ್ಘಾಟನೆ ದಿನವೇ ಮಗು ಪಡೆಯಬೇಕೆಂಬ ಟ್ರೆಂಡ್ ಶುರುವಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ