AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ; ಪೊಲೀಸ್ ಭದ್ರತೆ ಹೇಗಿದೆ ಗೊತ್ತಾ?

Republic Day 2022: ಧ್ವಜಾರೋಹಣ ಬಳಿಕ ರಾಜ್ಯಪಾಲರು ಗೌರವರಕ್ಷೆ ಸ್ವೀಕರಿಸುತ್ತಾರೆ. ನಾಡಿನ ಜನತೆಯನ್ನು ಉದ್ದೇಶಿಸಿ ಗಣರಾಜ್ಯೋತ್ಸವ ಸಂದೇಶ ಸಾರಲಿದ್ದಾರೆ. ಬಳಿಕ ನಾಡಗೀತೆ, ರೈತ ಗೀತೆಯನ್ನು ಹಾಡಲಾಗುತ್ತದೆ.

ಬೆಂಗಳೂರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ; ಪೊಲೀಸ್ ಭದ್ರತೆ ಹೇಗಿದೆ ಗೊತ್ತಾ?
ಗಣರಾಜ್ಯೋತ್ಸವ ಸಂಭ್ರಮ (ಪ್ರಾತಿನಿಧಿಕ ಚಿತ್ರ)
TV9 Web
| Updated By: sandhya thejappa|

Updated on: Jan 24, 2022 | 10:26 AM

Share

ಬೆಂಗಳೂರು: ಜನವರಿ 26ರ ಗಣರಾಜ್ಯೋತ್ಸವಕ್ಕೆ (Republic Day) ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ (Manekshaw Parade Ground) ಸಕಲ ಸಿದ್ಧತೆ ನಡೆಯುತ್ತಿದೆ. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಸಿದ್ಧತೆಯನ್ನು ಪರಿಶೀಲನೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧಿಕಾರಿಗಳು, 26ರಂದು ಬೆಳಗ್ಗೆ 8.58ಕ್ಕೆ ರಾಜ್ಯಪಾಲರು ಆಗಮಿಸುತ್ತಾರೆ. ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರಿಂದ ರಾಷ್ಟ್ರ ಧ್ವಜಾರೋಹಣ ನೆರವೇರುತ್ತದೆ ಅಂತ ತಿಳಿಸಿದರು.

ಧ್ವಜಾರೋಹಣ ಬಳಿಕ ರಾಜ್ಯಪಾಲರು ಗೌರವರಕ್ಷೆ ಸ್ವೀಕರಿಸುತ್ತಾರೆ. ನಾಡಿನ ಜನತೆಯನ್ನು ಉದ್ದೇಶಿಸಿ ಗಣರಾಜ್ಯೋತ್ಸವ ಸಂದೇಶ ಸಾರಲಿದ್ದಾರೆ. ಬಳಿಕ ನಾಡಗೀತೆ, ರೈತ ಗೀತೆಯನ್ನು ಹಾಡಲಾಗುತ್ತದೆ ಅಂತ ಬೆಂಗಳೂರಿನಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿ ಮಂಜುನಾಥ್ ಹೇಳಿದರು.

26ಕ್ಕೆ ಬಿಗಿ ಭದ್ರತೆ ಈ ಹಿಂದೆ ದೇಶದಲ್ಲಿ ಕೆಲ ಘಟನೆಗಳು ನಡೆದಿದ್ದು, ಅದರ ಆಧಾರದ ಮೇಲೆ ಈ ಬಾರಿ ಪೊಲೀಸ್ ಭದ್ರತೆ ನೀಡಲಾಗುತ್ತದೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಒಟ್ಟು 16 ತುಕಡಿಗಳು, 5 ವಾದ್ಯ ವೃಂದ, 2 ಡ್ಯಾಗ್ ಸ್ವಾಟ್, 4 ಕ್ಯೂ ಆರ್​ಡಿ, 2 ಆರ್​ಐವಿ, 6 ಅಶ್ವ ತಂಡಗಳು ಪರೇಡ್​ನಲ್ಲಿ ಭಾಗಿಯಾಗಲಿವೆ ಅಂತ ಕಮಲ್ ಪಂತ್ ತಿಳಿಸಿದರು. ಒಟ್ಟು 29 ಅಧಿಕಾರಿಗಳು, 464 ಸಿಬ್ಬಂದಿಗಳು ಕವಾಯಿತಿನಲ್ಲಿ ಭಾಗಿಯಾಗುತ್ತಾರೆ. ಪರೇಡ್ ಸುತ್ತಲೂ ಭದ್ರತೆಗೆ 11 ಡಿಸಿಪಿ, 20 ಎಸಿಪಿ, 60 ಪೊಲೀಸ್ ಇನ್ಸ್​ಪೆಕ್ಟರ್, 125 ಪೊಲೀಸ್ ಸಬ್ ಇನ್ಸ್​ಪೆಕ್ಟರ್​ ಸೇರಿದಂತೆ ಒಟ್ಟು 1,400 ಜನ ಪೊಲೀಸರನ್ನು ಭದ್ರತೆ ನಿಯೋಜನೆ ಮಾಡಲಾಗಿದೆ ಎಂದರು.

ಇನ್ನು ಮೈದಾನದ ಸುತ್ತಲೂ ಸಿಸಿ ಕ್ಯಾಮರಾಗಳನ್ನ ಅಳವಡಿಕೆ ಮಾಡಲಾಗುವುದು. ಪಾಸ್ ಇಲ್ಲದವರಿಗೆ ಪ್ರವೇಶ ಇರುವುದಿಲ್ಲ ಈ ಬಾರಿ ಆಂಧ್ರಪ್ರದೇಶದ ಪೊಲೀಸರು ಕವಾಯತಿನಲ್ಲಿ ಭಾಗಿಯಾಗುತ್ತಾರೆ ಎಂದು ತಿಳಿಸಿದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, ಜನವರಿ26 ರಂದು ಮಾಣಿಕ್ ಷಾ ಪರೇಡ್ ಮೈದಾನದ ಸುತ್ತಲಿರುವ ಮಾರ್ಗಗಳನ್ನ ಬದಲಾವಣೆ ಮಾಡಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ

ಅಕ್ಕನ ಮದುವೆಯಾಗಿದ್ದ ಆಸಾಮಿ ತಂಗಿಯೂ ಬೇಕು ಎಂದಿದ್ದ; ಕಿಡ್ನಾಪ್ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ

ಜನಸಾಮಾನ್ಯ ಮಹಿಳೆಯರ ಜೊತೆ ನೆಲದಲ್ಲಿ ಕುಳಿತು ಭಜನೆ ಮಾಡಿದ ಮಧ್ಯಪ್ರದೇಶ ಸಿಎಂ; ವಿಡಿಯೋ ವೈರಲ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ