Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಪ್ರೆಸಿಡೆನ್ಸಿ ಫೌಂಡೇಷನ್​ನಿಂದ ಉದ್ಯೋಗ ಮೇಳ; ನೂರಾರು ಆಕಾಂಕ್ಷಿಗಳು ಭಾಗಿ

ಬೆಂಗಳೂರಿನಲ್ಲಿ ಪ್ರೆಸಿಡೆನ್ಸಿ ಫೌಂಡೇಷನ್​ನಿಂದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿತ್ತು. ಉದ್ಯೋಗ ಮೇಳದಲ್ಲಿ ಭಾಗಿಯಾದ ಸಾವಿರಾರು ಆಕಾಂಕ್ಷಿಗಳಿಗೆ ತಮ್ಮ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಉದ್ಯೋಗ ಹುಡುಕಲು ಇದು ಸಹಾಯಕವಾಯಿತು. ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸಹಯೋಗದಲ್ಲಿ ಈ ಉದ್ಯೋಗ ಮೇಳೆ ಆಯೋಜಿಸಲಾಗಿತ್ತು.

ಬೆಂಗಳೂರಲ್ಲಿ ಪ್ರೆಸಿಡೆನ್ಸಿ ಫೌಂಡೇಷನ್​ನಿಂದ ಉದ್ಯೋಗ ಮೇಳ; ನೂರಾರು ಆಕಾಂಕ್ಷಿಗಳು ಭಾಗಿ
Job Fair
Follow us
Shivaraj
| Updated By: ಸುಷ್ಮಾ ಚಕ್ರೆ

Updated on: Feb 15, 2025 | 8:49 PM

ಬೆಂಗಳೂರು: ಬೆಂಗಳೂರಿನಲ್ಲಿ ಯಾವುದಾದರೂ ಕೆಲಸ ಗಿಟ್ಟಿಸಿಕೊಳ್ಳಬೇಕು, ಓದು ಮುಗೀತು ಇನ್ನೇನಾದರೂ ಕೆಲಸ ಮಾಡಬೇಕು ಅಂತ ಕನಸು ಕಟ್ಟಿಕೊಂಡವರಿಗೆ ಅಲ್ಲಿ ಬೃಹತ್ ವೇದಿಕೆ ಸೃಷ್ಟಿಯಾಗಿತ್ತು. ಕೆಲಸ ಹುಡುಕಿ ಸುಸ್ತಾದವರು, ಓದು ಮುಗಿಸಿ ಕೆಲಸ ಹುಡುಕಲು ಹೊರಟವರಿಗೆ ಪ್ರೆಸಿಡೆನ್ಸಿ ಫೌಂಡೇಷನ್ ನಡೆಸಿದ ಉದ್ಯೋಗ ಮೇಳ ಹೊಸ ಆಸೆ ಚಿಗುರಿಸುವ ಕೆಲಸ ಮಾಡಿದೆ. ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸಹಯೋಗದಲ್ಲಿ ನಡೆದ ಬೃಹತ್ ಉದ್ಯೋಗ ಮೇಳದ ಮಾಹಿತಿ ಇಲ್ಲಿದೆ.

ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಸೃಷ್ಟಿಸುವ ಕೆಲಸ ಮಾಡುತ್ತಿರುವ ಪ್ರೆಸಿಡೆನ್ಸಿ ಫೌಂಡೇಷನ್ ಇಂದು ಮಿಲ್ಲರ್ಸ್ ರಸ್ತೆಯ ಈದ್ಗಾ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಿತ್ತು. ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸಹಯೋಗದಲ್ಲಿ ನಡೆದ ಬೃಹತ್ ಉದ್ಯೋಗಮೇಳದಲ್ಲಿ ನೂರಾರು ಉದ್ಯೋಗಾಂಕ್ಷಿಗಳು ಭಾಗಿಯಾಗಿದರು.

ಸುಮಾರು 200ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದ ಉದ್ಯೋಗ ಮೇಳದಲ್ಲಿ ಸಚಿವ ಜಮೀರ್ ಅಹ್ಮದ್ ಹಾಗೂ ಮಾಜಿ ಸಚಿವ ಅಶ್ವಥ್ ನಾರಾಯಣ ಭಾಗಿಯಾಗಿ ಉದ್ಯೋಗಾಂಕ್ಷಿಗಳಿಗೆ ಶುಭ ಹಾರೈಸಿದರು. ಈ ವೇಳೆ ಮಾತನಾಡಿದ ಅಶ್ವಥ್ ನಾರಾಯಣ, ಉದ್ಯೋಗಾಂಕ್ಷಿಗಳು ಯಾವ ಉದ್ಯೋಗವನ್ನೂ ಕೀಳಾಗಿ ನೋಡಬಾರದು. ಕೆಲಸವನ್ನು ಶ್ರದ್ಧೆಯಿಂದ ಮಾಡಿ ಯಶಸ್ಸು ಪಡೆಯಬೇಕು ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: ದರ ಏರಿಕೆ: ಮೆಟ್ರೋ ಪ್ರಯಾಣಿಕರ ಪರ್ಯಾಯ ವ್ಯವಸ್ಥೆ, ಬೆಂಗಳೂರಿನಲ್ಲಿ ಶುರುವಾಯ್ತು ಟ್ರಾಫಿಕ್​ ಸಮಸ್ಯೆ

ಇಂದು ಕಾರ್ಯಕ್ರಮವನ್ನು ಆಯೋಜಿಸಿದ್ದ ಪ್ರೆಸಿಡೆನ್ಸಿ ಫೌಂಡೇಷನ್​ನ ಕೌಸರ್ ನಿಸಾರ್ ಅಹಮದ್ ಹಾಗೂ ಸಲ್ಮಾನ್ ಅಹ್ಮದ್, ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳಿಗನ್ನು ಗೌರವಪೂರ್ವಕವಾಗಿ ಸ್ವಾಗತಿಸುವ ಮೂಲಕ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದರು. ಚಿಲ್ಲರೆ ವ್ಯಾಪಾರದಿಂದ ಹಿಡಿದು ಉತ್ಪಾದನೆ, ಬ್ಯಾಂಕಿಂಗ್, ಕಾರ್ಪೋರೇಟ್ ವಲಯಗಳ ನೂರಾರು ಸಂಸ್ಥೆಗಳು ಭಾಗಿಯಾಗಿದ್ದ ಉದ್ಯೋಗ ಮೇಳದಲ್ಲಿ ಎಲ್ಲಾ ಜಾತಿ, ಧರ್ಮ ಹಾಗೂ ವಿವಿಧ ಸಮುದಾಯಗಳ ಉದ್ಯೋಗಾಂಕ್ಷಿಗಳು ಯಾವುದೇ ಭೇದ ಭಾವವಿಲ್ಲದೇ ಭಾಗಿಯಾಗಲು ಅವಕಾಶ ನೀಡಲಾಗಿತ್ತು. ಇನ್ನು, ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ ಕಂಪನಿಗಳಲ್ಲಿ ಇಂಟರ್ನ್​ಶಿಪ್ ಪಡೆಯೋಕೂ ಕೂಡ ಅವಕಾಶ ನೀಡಲಾಗಿತ್ತು. ಈ ವೇಳೆ ಸಂದರ್ಶನದಲ್ಲಿ ಭಾಗವಹಿಸಿದ ಉದ್ಯೋಗಾಂಕ್ಷಿಗಳು ಕೂಡ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಒಟ್ಟಿನಲ್ಲಿ ಉದ್ಯೋಗವಿಲ್ಲ, ಅವಕಾಶ ಸಿಗುತ್ತಿಲ್ಲ ಎಂದು ಅಲೆದು ಸುಸ್ತಾದ ಯುವಕ-ಯುವತಿಯರಿಗೆ ಈ ಬೃಹತ್ ಉದ್ಯೋಗ ಮೇಳ ಹೊಸ ಭರವಸೆ ನೀಡಿದೆ. ಸದ್ಯಕ್ಕೆ ಈ ಉದ್ಯೋಗ ಮೇಳದಲ್ಲಿ ಭಾಗಿಯಾಗಿದ್ದ ನೂರಾರು ಕಂಪನಿಗಳು ಉದ್ಯೋಗಾಂಕ್ಷಿಗಳ ಮಾಹಿತಿ, ವಿವರ ಕಲೆಹಾಕಿದ್ದು ಉದ್ಯೋಗ ಮೇಳದಿಂದ ಆಕಾಂಕ್ಷಿಗಳಿಗೆ ಹೊಸ ಮಾರ್ಗ ಸಿಗುವ ಭರವಸೆ ಚಿಗುರೊಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್